ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ : ʼಕಾವೇರಿʼ ಬಂದ್‌ ಹಿನ್ನೆಲೆ ‌ಹೈಅಲರ್ಟ್ ಘೋಷಣೆ

ಪ್ರತಿಭಟನೆ, ಮೆರವಣಿಗೆಗೆ ನಿರ್ಬಂಧ ಇದೆ, ಸುಪ್ರಿಂ ಕೋರ್ಟ್ ಆದೇಶದಂತೆ ಯಾವುದೇ ಬಂದ್‌ಗೆ ಅವಕಾಶ ನೀಡಿಲ್ಲ. ಬಂದ್‌ ವೇಳೆ ಆಸ್ತಿ ಪಾಸ್ತಿ ನಷ್ಟ್ ಆದ್ರೆ ಆಯೋಜಕರೆ ಹೊಣೆ ಎಂಬ ಸೂಚನೆ ಇದೆ, ನಾಳೆ ಬಂದ್‌ಗೆ ಅವಕಾಶ ಇಲ್ಲ, ಅನುಮತಿ ಕೊಡಲ್ಲ, ಇಂದು ರಾತ್ರಿಯಿಂದ ನಗರದಲ್ಲಿ ಸೆಕ್ಷನ್‌ 144 ಜಾರಿಯಾಗಲಿದೆ ಎಂದು ಪೊಲೀಸ್ ಕಮಿಷನರ್ ಬಿ.ದಯಾನಂದ್ ಮಾಹಿತಿ ನೀಡಿದರು.

Written by - Krishna N K | Last Updated : Sep 25, 2023, 06:28 PM IST
  • ಕಾವೇರಿ ನೀರು ಹಂಚಿಕೆ ವಿಚಾರವಾಗಿ ನಾಳೆ ಬೆಂಗಳೂರು ಬಂದ್‌
  • ಸುಪ್ರಿಂ ಕೋರ್ಟ್ ಆದೇಶದಂತೆ ಯಾವುದೇ ಬಂದ್‌ಗೆ ಅವಕಾಶ ನೀಡಿಲ್ಲ
  • ಇಂದು ರಾತ್ರಿಯಿಂದ ನಗರದಲ್ಲಿ ಸೆಕ್ಷನ್‌ 144 ಜಾರಿಯಾಗಲಿದೆ
ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ : ʼಕಾವೇರಿʼ ಬಂದ್‌ ಹಿನ್ನೆಲೆ ‌ಹೈಅಲರ್ಟ್ ಘೋಷಣೆ title=

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರವಾಗಿ ನಾಳೆ ವಿವಿಧ ಸಂಘಟನೆಗಳು ಬೆಂಗಳೂರು ಬಂದ್‌ಗೆ ಕರೆ ನೀಡಿದ್ದವು. ಈ ವಿಚಾರವಾಗಿ ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕಂಚನಹಳ್ಳಿ ಮುನ್ನೆಚ್ಚರಿಕೆ ಕ್ರಮ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಬಂದ್‌ ಕುರಿತು ಕೈಗೊಂಡ ಕ್ರಮದ ಬಗ್ಗೆ ಹೈಕೋರ್ಟ್ ಸರ್ಕಾರದಿಂದ ಮಾಹಿತಿ ಕೇಳಿತ್ತು. 

ಇದರ ಬೆನ್ನಲ್ಲೆ, ಪ್ರತಿಭಟನಾ ಮೆರವಣಿಗೆ, ರ್ಯಾಲಿ ನಡೆಸಲು ಅನುಮತಿ‌ ಕೊಟ್ಟಿಲ್ಲ, ಫ್ರೀಡಂಪಾರ್ಕ್ ನಲ್ಲಿ ಮಾತ್ರ ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ. ಅಲ್ಲದೆ, ಸಂಚಾರಕ್ಕೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೈಕೋರ್ಟ್‌ಗೆ ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ಹೇಳಿಕೆ ನೀಡಿದರು.

ಇದನ್ನೂ ಓದಿ: ಸೆಪ್ಟೆಂಬರ್‌ 26ಕ್ಕೆ ಬೆಂಗಳೂರಷ್ಟೇ ಅಲ್ಲ ಮತ್ತೆರಡು ಕಡೆ ಬಂದ್‌

ಅಲ್ಲದೆ, ಸಂಘಟನೆಗಳು ರಸ್ತೆ ಮೂಲಕ ಮೆರವಣಿಗೆ ನಡೆಸಲಿವೆ, ಜನಸಾಮಾನ್ಯರ ಪ್ರಯಾಣಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಹೈಕೋರ್ಟ್‌ಗೆ ಅರ್ಜಿದಾರರ ಪರ ವಕೀಲ‌ ಜಿ.ಆರ್.ಮೋಹನ್ ಹೇಳಿಕೆ ನೀಡಿದರು. ಸಾರ್ವಜನಿಕರು ಹಾಗೂ ಸರ್ಕಾರಿ ಸ್ವತ್ತು ರಕ್ಷಣೆ ಸರ್ಕಾರದ ಕರ್ತವ್ಯ ಎಂಬ ಸರ್ಕಾರದ ಹೇಳಿಕೆ ದಾಖಲಿಸಿಕೊಂಡು ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿದೆ. 

ಹೈಕೋರ್ಟ್‌ ತೀರ್ಪು ಬೆನ್ನಲ್ಲೆ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸುದ್ದಿಗೋಷ್ಟಿ ನಡೆಸಿ, ಪ್ರತಿಭಟನೆ, ಮೆರವಣಿಗೆಗೆ ನಿರ್ಬಂಧ ಇದೆ, ಸುಪ್ರಿಂ ಕೋರ್ಟ್ ಆದೇಶದಂತೆ ಯಾವುದೇ ಬಂದ್‌ಗೆ ಅವಕಾಶ ನೀಡಿಲ್ಲ. ಬಂದ್‌ ವೇಳೆ ಆಸ್ತಿ ಪಾಸ್ತಿ ನಷ್ಟ್ ಆದ್ರೆ ಆಯೋಜಕರೆ ಹೊಣೆ ಎಂಬ ಸೂಚನೆ ಇದೆ, ನಾಳೆ ಬಂದ್‌ಗೆ ಅವಕಾಶ ಇಲ್ಲ, ಅನುಮತಿ ಕೊಡಲ್ಲ ಎಂದು ಸಂಘಟಕರಿಗೆ ಸೂಚಿಸಿದ್ದೇವೆ. ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ತುಂಬಾ ಜನ ಜಾತಿ ಬಗ್ಗೆ ಢೋಂಗಿ ಭಾಷಣವಷ್ಟೇ ಮಾಡ್ತಾರೆ

ಇಂದು ರಾತ್ರಿ 12 ಗಂಟೆಯಿಂದ ನಾಳೆ ಮಧ್ಯರಾತ್ರಿ 12 ಗಂಟೆವರೆಗೆ ನಗರದಲ್ಲಿ 144 ಸೆಕ್ಷನ್ ಜಾರಿ ಇರಲಿದೆ. 60 ಕೆಎಸ್ಅರ್ ಪಿ.. 40 ಸಿಆರ್‌ಪಿಎಫ್‌ ಪಡೆ ನಿಯೋಜನೆ ಮಾಡಲಾಗಿದೆ. ಗುಂಪು ಗೂಡುವುದು, ಪ್ರತಿಭಟನೆ, ರ್ಯಾಲಿಗೆ ಅವಕಾಶ ಇಲ್ಲ ಎಂದು ಬೆಂಗಳೂರು ‌ಪೊಲೀಸ್ ಆಯುಕ್ತ ಬಿ.ದಯಾನಂದ್ ಸ್ಪಷ್ಟ ಮಾಹಿತಿ ನೀಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News