Separate Hospital for Mens : ಪುರುಷರಿಗೇ ಪ್ರತ್ಯೇಕ ಆಸ್ಪತ್ರೆ- ಮಲ್ಲೇಶ್ವರಂ, ರಾಮನಗರದಲ್ಲಿ ಸದ್ಯದಲ್ಲೇ ಆರಂಭ 

ದೇಶದಲ್ಲೇ ಅಪರೂಪವಾದ, ಪುರುಷರಿಗೆ ಪ್ರತ್ಯೇಕವಾದ ವೈದ್ಯಕೀಯ ಪರೀಕ್ಷಾ ಸೇವಾ ಸೌಲಭ್ಯವನ್ನು ಆರಂಭಿಸುವ ಕುರಿತು ಅಂಕುರ ಹೆಲ್ತ್ ಕೇರ್ ನ ಡಾ.ವಾಸನ್ ಅವರ ಜತೆ ಸಚಿವರು ಮಾತುಕತೆ ನಡೆಸಿದರು.

Written by - Sowmyashree Marnad | Last Updated : Jul 9, 2022, 02:06 PM IST
  • ಪುರುಷರಿಗೆ ಪ್ರತ್ಯೇಕವಾಗಿ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವ ಸೌಲಭ್ಯ
  • ಸದ್ಯದಲ್ಲೇ ಮಲ್ಲೇಶ್ವರಂ ಕ್ಷೇತ್ರದ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ
  • ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗುವುದು
Separate Hospital for Mens : ಪುರುಷರಿಗೇ ಪ್ರತ್ಯೇಕ ಆಸ್ಪತ್ರೆ- ಮಲ್ಲೇಶ್ವರಂ, ರಾಮನಗರದಲ್ಲಿ ಸದ್ಯದಲ್ಲೇ ಆರಂಭ  title=

ಬೆಂಗಳೂರು : ಹಲವು ಬಗೆಯ ಅನಾರೋಗ್ಯಗಳಿಂದ ನರಳುತ್ತಿರುವ ಪುರುಷರಿಗೆ ಪ್ರತ್ಯೇಕವಾಗಿ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವ ಸೌಲಭ್ಯವನ್ನು ಸದ್ಯದಲ್ಲೇ ಮಲ್ಲೇಶ್ವರಂ ಕ್ಷೇತ್ರದ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗುವುದು ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. 

ದೇಶದಲ್ಲೇ ಅಪರೂಪವಾದ, ಪುರುಷರಿಗೆ ಪ್ರತ್ಯೇಕವಾದ ವೈದ್ಯಕೀಯ ಪರೀಕ್ಷಾ ಸೇವಾ ಸೌಲಭ್ಯವನ್ನು ಆರಂಭಿಸುವ ಕುರಿತು ಅಂಕುರ ಹೆಲ್ತ್ ಕೇರ್ ನ ಡಾ.ವಾಸನ್ ಅವರ ಜತೆ ಸಚಿವರು ಮಾತುಕತೆ ನಡೆಸಿದರು.

ಇದನ್ನೂ ಓದಿ : Viral Video: ಸರ್ಕಾರಿ ಆಸ್ಪತ್ರೆಯಲ್ಲಿ ಕತ್ತೆ ಪ್ರತ್ಯಕ್ಷ, ಬಿದ್ದು ಬಿದ್ದು ನಕ್ಕ ರೋಗಿಗಳು..!
 
ಈ ಬಗ್ಗೆ ಮಾತನಾಡಿದ ಸಚಿವರು, 'ಪುರುಷರೂ ಹಲವು ಅನಾರೋಗ್ಯ ಸಮಸ್ಯೆಗನ್ನು ಎದುರಿಸುತ್ತಿರುತ್ತಿರುತ್ತಾರೆ. ಆದರೆ ಇವರಲ್ಲಿ ಹೆಚ್ಚಿನವರು ಆಸ್ಪತ್ರೆಗೇ ಬರುವುದಿಲ್ಲ. ಹೀಗಾಗಿ ಖಾಸಗಿ ಮತ್ತು ಸರಕಾರಿ ಸಹಭಾಗಿತ್ವದಡಿಯಲ್ಲಿ ಈ ವಿನೂತನ ಯೋಜನೆಯನ್ನು ಎರಡೂ ಕಡೆಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗುತ್ತಿದೆ. ಇದಕ್ಕೆ ಸಿಕ್ಕುವ ಸ್ಪಂದನವನ್ನು ಆಧರಿಸಿ ಮುಂಬರುವ ದಿನಗಳಲ್ಲಿ ಇದನ್ನು ಎಲ್ಲೆಡೆಗೂ ವಿಸ್ತರಿಸಲಾಗುವುದು. ಈ ಯೋಜನೆಯಡಿ ಅಂಕುರ ಹೆಲ್ತ್ ಕೇರ್ ನ ಡಾ.ವಾಸನ್ ಅವರು ವೈದ್ಯಕೀಯ ಪರೀಕ್ಷೆಗಳ ಸೌಲಭ್ಯ ಕಲ್ಪಿಸುತ್ತಾರೆ' ಎಂದಿದ್ದಾರೆ.

ಮಧುಮೇಹ, ಕ್ಯಾನ್ಸರ್, ನರಕ್ಕೆ ಸಂಬಂಧಿಸಿದ ಕಾಯಿಲೆಗಳು, ಮೂಳೆಗೆ ಸಂಬಂಧಿಸಿದ ಸಮಸ್ಯೆಗಳು ಪುರುಷರನ್ನು ಹೆಚ್ಚಾಗಿ ಕಾಡುತ್ತಿವೆ. ಇದರ ಜತೆಗೆ ಒತ್ತಡದ ಜೀವನ, ಧೂಮಪಾನ, ಮದ್ಯಪಾನ, ಅವೈಜ್ಞಾನಿಕ ಆಹಾರ ಸೇವನೆಯ ಕ್ರಮ ಇತ್ಯಾದಿಗಳೂ ಪುರುಷರ ಅನಾರೋಗ್ಯಕ್ಕೆ ಕಾರಣಗಳಾಗಿವೆ. ಈಗ ಕೈಗೆತ್ತಿಕೊಂಡಿರುವ ಯೋಜನೆಯಲ್ಲಿ ಜೀವನಶೈಲಿ ಮತ್ತು ಆಹಾರ ಸೇವನೆಗೆ ಸಂಬಂಧಿಸಿದ ದೋಷಗಳನ್ನು ಪರಿಹರಿಸಲು ಗಮನ ಹರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. 

ಇದನ್ನೂ ಓದಿ : ಬಿ.ಟಿ.ಲಲಿತಾ ನಾಯಕ್‌ಗೆ ಮತ್ತೆ ಕೊಲೆ ಬೆದರಿಕೆ ಪತ್ರ: ಸಿದ್ದರಾಮಯ್ಯ, ಎಚ್‌ಡಿಕೆ ಸೇರಿ 61 ಜನ ಟಾರ್ಗೆಟ್!

ಹೆಚ್ಚಿನ ಕುಟುಂಬಗಳಿಗೆ ಪುರುಷರೇ ಆಧಾರಸ್ತಂಭದಂತೆ ಇರುತ್ತಾರೆ. ಆದ್ದರಿಂದ ಇಂತಹ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಇದರಿಂದಾಗಿ ಅನಾರೋಗ್ಯವು ಸೃಷ್ಟಿಸುವ ಆರ್ಥಿಕ ಹೊರೆ ಮತ್ತಿತರ ಸಮಸ್ಯೆಗಳಿಂದ ಪಾರಾಗಬಹುದು ಎಂದು ಸಚಿವರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News