ಶಿವಮೊಗ್ಗ-ಬೆಂಗಳೂರು ಜನ ಶತಾಬ್ದಿ ರೈಲು ಸಂಚಾರಕ್ಕೆ ಇಂದು ಹಸಿರು ನಿಶಾನೆ

ಸಂಜೆ 6 ಗಂಟೆಗೆ ಸಂಸದ ಬಿ.ವೈ. ರಾಘವೇಂದ್ರ ಜನಶತಾಬ್ದಿ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ.

Last Updated : Feb 3, 2019, 09:40 AM IST
ಶಿವಮೊಗ್ಗ-ಬೆಂಗಳೂರು ಜನ ಶತಾಬ್ದಿ ರೈಲು ಸಂಚಾರಕ್ಕೆ ಇಂದು ಹಸಿರು ನಿಶಾನೆ title=

ಬೆಂಗಳೂರು: ಶಿವಮೊಗ್ಗ ಮತ್ತು ಬೆಂಗಳೂರು ನಡುವಿನ ಬಹುನಿರೀಕ್ಷಿತ ಜನ ಶತಾಬ್ದಿ ರೈಲು ಸಂಚಾರಕ್ಕೆ ಇಂದು ಸಂಜೆ 6 ಗಂಟೆಗೆ ಸಂಸದ ಬಿ.ವೈ. ರಾಘವೇಂದ್ರ ಜನಶತಾಬ್ದಿ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ.

ನೈಋುತ್ಯ ರೈಲ್ವೆ ಮೈಸೂರು ವಿಭಾಗವು ಎರಡು ದಿನಗಳ ಹಿಂದಷ್ಟೇ ಜನ ಶತಾಬ್ದಿ ರೈಲು ಸಂಚಾರವನ್ನು ಪ್ರಕಟಿಸಿ, ಶಿವಮೊಗ್ಗ- ಯಶವಂತಪುರ ಜನ ಶತಾಬ್ದಿ ರೈಲು ಸಂಚಾರವನ್ನು 3 ರಿಂದ 4 ದಿನಗಳಿಗೆ ವಿಸ್ತರಿಸಿದೆ.

ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ಓಡಾಡುವ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದು, ಈಗಿರುವ ರೈಲು ಸಂಪರ್ಕ ಸಾಲುತ್ತಿರಲಿಲ್ಲ. ಹೀಗಾಗಿ ಪ್ರಯಾಣಿಕರ ದಟ್ಟಣೆಯನ್ನು ತಗ್ಗಿಸಲು, ಅವರಿಗೆ ಅನುಕೂಲಕರವಾದ ಸಮಯದಲ್ಲಿ ವಾರದಲ್ಲಿ ನಾಲ್ಕು ದಿನ ಜನಶತಾಬ್ದಿ ರೈಲು ಸಂಪರ್ಕ ಕಲ್ಪಿಸಲಾಗಿದೆ.
 
ಈ ರೈಲು ಪ್ರತಿದಿನ ಮುಂಜಾನೆ 5.15ಕ್ಕೆ ಹೊರಟು ಯಶವಂತಪುರಕ್ಕೆ ಬೆಳಗ್ಗೆ 10.10ಕ್ಕೆ ತಲುಪಲಿದೆ. ಯಶವಂತಪುರದಿಂದ ಸಂಜೆ 5.30ಕ್ಕೆ ಹೊರಟು ರಾತ್ರಿ 10.25ಕ್ಕೆ ಶಿವಮೊಗ್ಗ ತಲುಪಲಿದೆ. ಇದರ ಮಧ್ಯದಲ್ಲಿ ಭದ್ರಾವತಿ, ಕಡೂರು ಮತ್ತು ತುಮಕೂರಲ್ಲಿ ಮಾತ್ರ ನಿಲುಗಡೆ ಇರಲಿದೆ. ಈ ರೈಲು, ಶಿವಮೊಗ್ಗ ಟೌನ್‌ನಿಂದ ಯಶವಂತಪುರ ರೈಲು ನಿಲ್ದಾಣದವರೆಗೆ ಸಂಪರ್ಕ ಕಲ್ಪಿಸಲಿದೆ. 

ಸೋಮವಾರದಿಂದ ವಾರದಲ್ಲಿ ನಾಲ್ಕು ದಿನ ಸಂಚರಿಸಲಿರುವ 14 ಬೋಗಿಯ ರೈಲಿನಲ್ಲಿ 7 ಎಸಿ ಕೋಚ್​ಗಳು ಇರಲಿವೆ. ಈ ರೈಲು ಶಿವಮೊಗ್ಗ ದಿಂದ ಹೊರಡುವ ರೈಲು ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದ ತನಕ ಸಂಚಾರ ನಡೆಸುತ್ತದೆ.

Trending News