ಬಿಜೆಪಿಯವರು ಅಡಬಿಟ್ಟಿ ಹಣದಲ್ಲಿ ಸಮಾವೇಶ ಮಾಡ್ತಿದಾರೆ : ಸಿದ್ದರಾಮಯ್ಯ

ಬಿಜೆಪಿಯವರು ಅಡಬಿಟ್ಟಿ ಹಣದಲ್ಲಿ ಮತ್ತು ಲಂಚದ ಹಣದಲ್ಲಿ ಜನಸ್ಪಂದನಾ ಕಾರ್ಯಕ್ರಮ ಮಾಡ್ತಿದಾರೆ ಎಂದು ಬಿಜೆಯ ಜನಸ್ಪಂದನಾ ಸಮಾವೇಶದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Written by - Krishna N K | Last Updated : Sep 10, 2022, 02:37 PM IST
  • ಬಿಜೆಪಿಯವರು ಅಡಬಿಟ್ಟಿ ಹಣದಲ್ಲಿ ಜನಸ್ಪಂದನಾ ಕಾರ್ಯಕ್ರಮ ಮಾಡ್ತಿದಾರೆ
  • ಸಂಕಷ್ಟದಲ್ಲಿರೋ ಜನರಿಗೆ ಸ್ಪಂದನೆ ಮಾಡೋದು ಬಿಟ್ಟು ಡ್ಯಾನ್ಸ್ ಮಾಡ್ತಿದಾರೆ
  • ಕಮಲಪಾಳಯದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ
ಬಿಜೆಪಿಯವರು ಅಡಬಿಟ್ಟಿ ಹಣದಲ್ಲಿ ಸಮಾವೇಶ ಮಾಡ್ತಿದಾರೆ : ಸಿದ್ದರಾಮಯ್ಯ title=

ಹುಬ್ಬಳ್ಳಿ: ಬಿಜೆಪಿಯವರು ಅಡಬಿಟ್ಟಿ ಹಣದಲ್ಲಿ ಮತ್ತು ಲಂಚದ ಹಣದಲ್ಲಿ ಜನಸ್ಪಂದನಾ ಕಾರ್ಯಕ್ರಮ ಮಾಡ್ತಿದಾರೆ ಎಂದು ಬಿಜೆಯ ಜನಸ್ಪಂದನಾ ಸಮಾವೇಶದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಜನಸ್ಪಂದನಾ ಕಾರ್ಯಕ್ರಮ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ಬಿಜೆಪಿಯವರು ಅಡಬಿಟ್ಟಿ ಹಣದಲ್ಲಿ ಮತ್ತು ಲಂಚದ ಹಣದಲ್ಲಿ ಜನಸ್ಪಂದನಾ ಕಾರ್ಯಕ್ರಮ ಮಾಡ್ತಿದಾರೆ. ರಾಜ್ಯದಲ್ಲಿ ಮಳೆ ಬಂದು ಸಾಕಷ್ಟು ಸಮಸ್ಯೆ ಆಗಿದೆ. ಸುಮಾರು 7 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಬೆಂಗಳೂರಿನಲ್ಲೂ ಸಹ ಮಳೆಯಿಂದಾಗಿ ಸಮಸ್ಯೆಯಾಗಿದೆ. ಲಂಚ ಹೊಡೆದಿರೋ ದುಡ್ಡಿನಲ್ಲಿ ಬಿಜೆಪಿಯವರು ಕಾರ್ಯಕ್ರಮ ಮಾಡ್ತಿದಾರೆ. ಸಂಕಷ್ಟದಲ್ಲಿರೋ ಜನರಿಗೆ ಸ್ಪಂದನೆ ಮಾಡೋದು ಬಿಟ್ಟು ಡ್ಯಾನ್ಸ್ ಮಾಡ್ತಿದಾರೆ ಎಂದು ಗುಡುಗಿದರು.

ಇದನ್ನೂ ಓದಿ: ಅತಿವೃಷ್ಟಿಯಲ್ಲಿ ರಾಜ್ಯವಿರುವಾಗ ಯಾವ ಉದ್ದೇಶಕ್ಕೆ ಈ ಸಂತೋಷ, ಸಡಗರ

ಶೋಕಾಚರಣೆ ಮಾಡ್ತೀವಿ ಅಂದು ಡ್ಯಾನ್ಸ್ ಮಾಡ್ತಾರೆ

ಅಲ್ಲದೆ, ಉಮೇಶ ಕತ್ತಿಯವರು ಉತ್ತರ ಕರ್ನಾಟಕದ ರಾಜಕಾರಣಿ, ಅವರದ್ದೇ ಪಕ್ಷದ ಪ್ರಭಾವಿ ವಿರಾಜಕಾರಣಿ. ಅವರ ನಿಧನದ ಹಿನ್ನೆಲೆ ಒಂದು ಕಡೆ ಶೋಕಾಚರಣೆ ಮಾಡ್ತೀವಿ ಅಂತಾರೆ ಇನ್ನೊಂದುಕಡೆ ಡ್ಯಾನ್ಸ್ ಮಾಡ್ತಾರೆ. ಬಿಜೆಪಿಯವರಿಗೆ ಜನರ ಬಗ್ಗೆ ಕಾಳಜಿ ಇಲ್ಲ ದುಡ್ಡು ಹೊಡೆಯೋದ್ರಲ್ಲಿ ಮಾತ್ರ ಕಾಳಜಿ ಇದೆ ಎಂದು ಆರೋಪಿಸಿದರು.

ಇದನ್ನೂ ಓದಿ: ಬೈಕಾಟ್‌ ಭೇದಿಸಿ ಭರ್ಜರಿಯಾಗಿ ಮುನ್ನುಗ್ಗುತ್ತಿದೆ ಬಾಲಿವುಡ್‌ ʼಬ್ರಹ್ಮಾಸ್ತ್ರʼ

ಶಾಸಕ ದಡೇಸಗೂರು ವಿರುದ್ಧ ಎಫ್‌ಐಆರ್‌

ಪಿಎಸ್ ಐ ಹಗರಣದಲ್ಲಿ ಶಾಸಕ ಬಸವರಾಜ ದಡೇಸಗೂರು ಹಣ ಪಡೆದ ಬಗ್ಗೆ ತಾವೇ ಒಪ್ಪಿಕೊಂಡಿದ್ದಾರೆ. ಆತನ ವಿರುದ್ಧ ಎಫ್ ಐಆರ್ ದಾಖಲು ಮಾಡಿ ತನಿಖೆ ನಡೆಸಬೇಕು ಎಂದು ಪಿಎಸ್‌ಐ ಸ್ಕ್ಯಾಮ್‌ ವಿಚಾರವಾಗಿ ಸಿದ್ದರಾಮಯ್ಯ ಹರಿಹಾಯ್ದರು. ಅಲ್ಲದೆ, ಪ್ರಿಯಾಂಕ್ ಖರ್ಗೆ ಮಾತನಾಡಿದ್ರೆ ನೋಟೀಸ್ ಕೊಡ್ತಾರೆ. ಆದ್ರೆ, ಅವರ ಶಾಸಕ ಸ್ವತ ತಪ್ಪನ್ನು ಒಪ್ಪಿಕೊಂಡ್ರೂ ಯಾವುದೇ ಕ್ರಮ ಕೈಗೊಂಡಿಲ್ಲ. ಬಿಜೆಪಿಯವರು ಪ್ರತಿಯೊಂದು ವಿಷಯದಲ್ಲೂ ಸೇಡಿನ ರಾಜಕೀಯ ಮಾಡ್ತಿದಾರೆ ಎಂದು ಹೇಳಿದರು.

ನನ್ನ ಜನ್ಮದಿನಾಚರಣೆ ಪ್ರತ್ಯುತ್ತರವಾಗಿ ಬಿಜೆಪಿ ಜನಸ್ಪಂದನಾ ಕಾರ್ಯಕ್ರಮ

ದಾವಣಗೆರೆಯಲ್ಲಿ ನಡೆದ ನನ್ನ ಜನ್ಮದಿನಾಚರಣೆ ಪ್ರತ್ಯುತ್ತರವಾಗಿ ಬಿಜೆಪಿ ಜನಸ್ಪಂದನಾ ಕಾರ್ಯಕ್ರಮ ಮಾಡುತ್ತಿದ್ದಾರೆ. ನನ್ನ ಜನ್ಮದಿನಾಚರಣೆಗೆ ಜನ ತಾವಾಗೇ ಬಂದ್ರು ಆದ್ರೆ ಜನಸ್ಪಂದನಕ್ಕೆ ದುಡ್ಡು ಕೊಟ್ಟು ಕರೆಸುತ್ತಿದ್ದಾರೆ. ಎಸಿಬಿ ರದ್ದು ಪಡಿಸಿ ಲೋಕಾಯುಕ್ತ ಮರು ರಚನೆ ಮಾಡಿರುವುದಕ್ಕೆ ನಾವು ಸ್ವಾಗತ ಮಾಡಿದ್ದೇವೆ. ನ್ಯಾಯಾಲಯದಿಂದಲೇ ಆದೇಶವಿದೆ ಹೀಗಾಗಿ ಸ್ವಾಗತ ಮಾಡಿದ್ದೇವೆ ಎಂದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News