/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ಬೆಂಗಳೂರು: ಹತ್ಯೆ ಮಾಡಲು ಕರೆ ನೀಡುವ ಸಚಿವರಿಗೆ ಸಂಪುಟದಲ್ಲಿ ಮುಂದುವರಿಯುವ ಯಾವ ನೈತಿಕತೆಯೂ ಇಲ್ಲ. ರಾಜ್ಯಪಾಲರು ತಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.  

#ಕೊಲೆಗಡುಕಮನಸ್ಥಿತಿಯ_ಬಿಜೆಪಿ ಹ್ಯಾಶ್‍ಟ್ಯಾಗ್‍ ಬಳಸಿ ಗುರುವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ಜನತೆಯ ಮಾನ-ಪ್ರಾಣ ರಕ್ಷಣೆಯ ಹೊಣೆ ಸರ್ಕಾರದ್ದಾಗಿದೆ. ಇಂತಹ ಸಚಿವರು ತಾವೇ ಖುದ್ದಾಗಿ ಹತ್ಯೆಗೆ ಪ್ರಚೋದಿಸಿದರೆ? ಅಶ್ವತ್ಥ್ ನಾರಾಯಣ್ ಅವರಿಗೆ ಸಚಿವ ಸ್ಥಾನದಲ್ಲಿ ಮುಂದುವರೆಯುವ ಯಾವ ನೈತಿಕತೆ ಇರುತ್ತದೆ? ಇದು ಪ್ರಧಾನಿ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಗಮನಕ್ಕೆ ಬಂದಿಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ರೂಮ್ ಕೊಡದೆ ಸೇವಾ ನ್ಯೂನ್ಯತೆ ಎಸಗಿದ ಮೆಕ್ ಮೈ ಟ್ರಿಪ್ ಹಾಗೂ ಓಯೋ ಕಂಪನಿಗೆ ರೂ.11 ಲಕ್ಷ 38 ಸಾವಿರ ದಂಡ 

‘ಕೊಲೆಗಡುಕ ಮನಸ್ಥಿತಿಯ ಅಶ್ವತ್ಥ್ ನಾರಾಯಣ್ ಅಂತಹವರು ಸಾರ್ವಜನಿಕ ಜೀವನದಲ್ಲಿ ಇರಲಿಕ್ಕೆ ನಾಲಾಯಕ್. ಇಂತಹವರು ಉನ್ನತ ಶಿಕ್ಷಣ ಸಚಿವರಾದರೇ? ಬಿಜೆಪಿ  ಸಮಾಜಕ್ಕೆ ಯಾವ ಸಂದೇಶ ಕೊಡಲಿಕ್ಕೆ ಹೊರಟಿದೆ? ಬಿಜೆಪಿಯ ಹೊಡಿ-ಬಡಿ ಸಂಸ್ಕೃತಿಯೇ ಅವರ ಬೌದ್ಧಿಕ ದಿವಾಳಿತನದ ಪ್ರತೀಕ. ಸೈದ್ಧಾಂತಿಕವಾಗಿ ನನ್ನನ್ನು ಎದುರಿಸುವ, ಇಲ್ಲವೇ ಸಾಧನೆಯ ಆಧಾರದಲ್ಲಿ ಮತ ಕೇಳುವ ಧಮ್-ತಾಕತ್ ಅವರಿಗೆ ಇಲ್ಲ. ಬಿಜೆಪಿಯವರದು ಶೂನ್ಯ ಸಾಧನೆ ಮತ್ತು ಪೊಳ್ಳು ಸಿದ್ಧಾಂತ’ವೆಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ಸೈದ್ಧಾಂತಿಕವಾಗಿ ಎದುರಿಸಲಾಗದ ಕಾರಣಕ್ಕಾಗಿಯೇ ಮಹಾತ್ಮ ಗಾಂಧೀಜಿಯವರನ್ನು ಗೋಡ್ಸೆ ಕೊಂದ. ಅದೇ ಗೋಡ್ಸೆ ಸಂತಾನವೇ ವಿದ್ವಾಂಸರಾಗಿದ್ದ ಎಂ.ಎಂ.ಕಲಬರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿರುವುದು. ಸಾವಿನ ಭಯ ನನಗಿಲ್ಲ. ಇಂತಹ ಕೊಲೆಗಡುಕ ಮನಸ್ಥಿತಿಯವರು ಅಧಿಕಾರದಲ್ಲಿದ್ದರೆ ರಾಜ್ಯದ ಯಾವುದೇ ವ್ಯಕ್ತಿ ಸುರಕ್ಷಿತನಲ್ಲ. ಸೋಲಿನ ಭಯದಿಂದ ತತ್ತರಿಸಿ ಹೋಗಿರುವ ಈ ಕೊಲೆಗಡುಕ ಮನಸ್ಸುಗಳು ಗೆಲುವಿಗಾಗಿ ಯಾರ ಹತ್ಯೆಯನ್ನೂ ಮಾಡಬಹುದು. ಈ ಬಗ್ಗೆ ಜನ ಎಚ್ಚರಗೊಳ್ಳಬೇಕು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಬೇಟೆಗಾರರು- ರಾಜ್ಯದ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Section: 
English Title: 
Siddaramaiah urges the governor to remove CN Ashwath Narayan from the cabinet
News Source: 
Home Title: 

ಸಂಪುಟದಿಂದ ಅಶ್ವತ್ಥ್ ನಾರಾಯಣ್ ಕಿತ್ತುಹಾಕುವಂತೆ ರಾಜ್ಯಪಾಲರಿಗೆ ಸಿದ್ದರಾಮಯ್ಯ ಒತ್ತಾಯ

ಸಂಪುಟದಿಂದ ಅಶ್ವತ್ಥ್ ನಾರಾಯಣ್ ಕಿತ್ತುಹಾಕುವಂತೆ ರಾಜ್ಯಪಾಲರಿಗೆ ಸಿದ್ದರಾಮಯ್ಯ ಒತ್ತಾಯ
Caption: 
ಅಶ್ವತ್ಥ್ ನಾರಾಯಣ್ ವಿರುದ್ಧ ಸಿದ್ದು ಗರಂ
Yes
Is Blog?: 
No
Tags: 
Facebook Instant Article: 
Yes
Highlights: 

ಹತ್ಯೆ ಮಾಡಲು ಕರೆ ನೀಡುವ ಸಚಿವರಿಗೆ ಸಂಪುಟದಲ್ಲಿ ಮುಂದುವರಿಯುವ ಯಾವ ನೈತಿಕತೆಯೂ ಇಲ್ಲ

ರಾಜ್ಯಪಾಲರು ತಕ್ಷಣವೇ ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣ್‍ರನ್ನು ಸಂಪುಟದಿಂದ ಕಿತ್ತುಹಾಕಬೇಕು

ಇದು ಪ್ರಧಾನಿ ಮೋದಿ & ಗೃಹಸಚಿವ ಅಮಿತ್ ಶಾ ಗಮನಕ್ಕೆ ಬಂದಿಲ್ಲವೇ ಎಂದು ಸಿದ್ದರಾಮಯ್ಯ ಪ್ರಶ್ನೆ

Mobile Title: 
ಸಂಪುಟದಿಂದ ಅಶ್ವತ್ಥ್ ನಾರಾಯಣ್ ಕಿತ್ತುಹಾಕುವಂತೆ ರಾಜ್ಯಪಾಲರಿಗೆ ಸಿದ್ದರಾಮಯ್ಯ ಒತ್ತಾಯ
Puttaraj K Alur
Publish Later: 
No
Publish At: 
Thursday, February 16, 2023 - 16:23
Created By: 
Puttaraj K Alur
Updated By: 
Puttaraj K Alur
Published By: 
Puttaraj K Alur
Request Count: 
2
Is Breaking News: 
No