ಮೈಸೂರಿನಲ್ಲೇ ಚಿತ್ರ ನಗರಿ ನಿರ್ಮಿಸಿ: ಸಿಎಂಗೆ ಸಿದ್ದರಾಮಯ್ಯ ಪತ್ರ

ಬಜೆಟ್ ​​ನಲ್ಲಿ ಮಂಡಿಸಿರುವ ನಿರ್ಧಾರ ಮರುಪರಿಶೀಲಿಸಿ, ಮೈಸೂರಿನಲ್ಲೇ ಚಿತ್ರನಗರಿ ಸ್ಥಾಪನೆ ಮಾಡಲು ಮುಂದಾಗಬೇಕು ಎಂದು ಪತ್ರದಲ್ಲಿ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ. 

Last Updated : Aug 6, 2018, 04:33 PM IST
ಮೈಸೂರಿನಲ್ಲೇ ಚಿತ್ರ ನಗರಿ ನಿರ್ಮಿಸಿ: ಸಿಎಂಗೆ ಸಿದ್ದರಾಮಯ್ಯ ಪತ್ರ title=

ಬೆಂಗಳೂರು: ರಾಮನಗರದಲ್ಲಿ ಚಿತ್ರ ನಗರಿ ನಿರ್ಮಾಣಕ್ಕೆ ಮುಂದಾಗಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಗರಂ ಆಗಿದ್ದಾರೆ. 

ಈ ಸಂಬಂಧ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ರಾಮನಗರದಲ್ಲಿ ಚಿತ್ರನಗರಿ ನಿರ್ಮಾಣಕ್ಕಿಂತ ಮೈಸೂರಿನಲ್ಲೇ ಚಿತ್ರ ನಗರಿ ಸ್ಥಾಪನೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಹೊಸದಾಗಿ ಮಂಡಿಸಿರುವ ಬಜೆಟ್​​​ ನಲ್ಲಿ ಚಿತ್ರನಗರಿಯನ್ನು ರಾಮನಗರಕ್ಕೆ ಸ್ಥಳಾಂತರಿಸಿದ್ದೀರಿ. ಹೀಗಾಗಿ ನೀವೀಗ ಬಜೆಟ್ ​​ನಲ್ಲಿ ಮಂಡಿಸಿರುವ ನಿರ್ಧಾರ ಮರುಪರಿಶೀಲಿಸಿ, ಮೈಸೂರಿನಲ್ಲೇ ಚಿತ್ರನಗರಿ ಸ್ಥಾಪನೆ ಮಾಡಲು ಮುಂದಾಗಬೇಕು ಎಂದು ಪತ್ರದಲ್ಲಿ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ. 

16 ಅರಮನೆಗಳು, 250ಕ್ಕೂ ಹೆಚ್ಚು ಲೋಕೇಶನ್ ಗಳು, ನದಿ, ನಾಳೆ, ಕಾಲುವೆ, ಬೆಟ್ಟ-ಗುಡ್ಡಗಳು ಚಿತ್ರೀಕರಣಕ್ಕೆ ಪ್ರಶಸ್ತವಾಗಿದೆ. ಅಲ್ಲದೆ, ಇದೀಗ ಮೈಸೂರಿನಲ್ಲಿ ವಿಮಾನ ನಿಲ್ದಾಣ ಸೌಲಭ್ಯವೂ ಇರುವುದರಿಂದ ಚಿತ್ರೀಕರಣಕ್ಕಾಗಿ ದೇಶ-ವಿದೇಶಗಳಿಂದ ಬರುವವರಿಗೆ ಅನುಕೂಲವಾಗಲಿದೆ. ಇದನ್ನೆಲಾ ಮನಗಂಡು ಹಿಂದಿನ ಕಾಂಗ್ರೆಸ್ ಸರ್ಕಾರ ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆ ನಿರ್ಣಯ ಕೈಗೊಂಡು ನೂರು ಎಕರೆ ಜಮೀನು ಮಂಜೂರು ಮಾಡಿತ್ತು. ಅಲ್ಲದೆ, ಬಜೆಟ್ ನಲ್ಲಿಯೂ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಾಗಿತ್ತು. ಆದರೆ ಇದೀಗ ಇದನ್ನು ರಾಮನಗರಕ್ಕೆ ಸ್ಥಳಾಂತರಿಸಲು ಬಜೆಟ್'ನಲ್ಲಿ ಘೋಷಣೆ ಮಾಡಿರುವುದು ಸಮಂಜಸವಲ್ಲ ಎಂದು ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

Trending News