ಏರ್ ಅಂಬುಲೆನ್ಸ್ ಮೂಲಕ ಚೆನ್ನೈಗೆ ಶಿವಕುಮಾರ ಸ್ವಾಮೀಜಿ

ಝೀರೋ ಟ್ರಾಫಿಕ್ ಮೂಲಕ ಶ್ರೀ ಶಿವಕುಮಾರ ಸ್ವಾಮಿಜಿ ಅವರನ್ನು ಬೆಂಗಳೂರಿಗೆ ಕರೆತರಲಾಗುತ್ತಿದ್ದು, ಐ ಕ್ಯಾಟ್ ಏರ್ ಅಂಬುಲೆನ್ಸ್ ನಲ್ಲಿ ಚೆನ್ನೈ ಗೆ ಪ್ರಯಾಣ ಬೆಳೆಸಲಿದ್ದಾರೆ.

Last Updated : Dec 7, 2018, 12:02 PM IST
ಏರ್ ಅಂಬುಲೆನ್ಸ್ ಮೂಲಕ ಚೆನ್ನೈಗೆ ಶಿವಕುಮಾರ ಸ್ವಾಮೀಜಿ title=

ತುಮಕೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಶ್ರೀ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಏರ್ ಅಂಬುಲೆನ್ಸ್ ಮೂಲಕ ಅವರನ್ನು ಚೆನ್ನೈಗೆ ಕರೆದೊಯ್ಯಲಾಗುತ್ತಿದೆ.

ಶತಾಯುಷಿ, ನಡೆದಾಡುವ ದೇವರು ಎಂದೇ ಖ್ಯಾತಿಗಳಿಸಿದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೃದಯದಲ್ಲಿ ಅಳವಡಿಸಲಾದ 11 ಸ್ಟೆಂಟ್ ಗಳನ್ನು ಬದಲಿಸುವ ಅಗತ್ಯವಿದೆ. ಆದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಚೆನ್ನೈನ ಪ್ರತಿಷ್ಠಿತ ರೇಲಾ ಇನ್‌ಸ್ಟಿಟ್ಯೂಟ್‌ ಆಂಡ್ ಮೆಡಿಕಲ್ ಸೆಂಟರ್‌ ಗೆ ಕರೆದೊಯ್ಯಲಾಗುತ್ತಿದೆ.

ಝೀರೋ ಟ್ರಾಫಿಕ್ ಮೂಲಕ ಶ್ರೀ ಶಿವಕುಮಾರ ಸ್ವಾಮಿಜಿ ಅವರನ್ನು ಬೆಂಗಳೂರಿಗೆ ಕರೆತರಲಾಗುತ್ತಿದ್ದು, ಐ ಕ್ಯಾಟ್ ಏರ್ ಅಂಬುಲೆನ್ಸ್ ನಲ್ಲಿ ಚೆನ್ನೈ ಗೆ ಪ್ರಯಾಣ ಬೆಳೆಸಲಿದ್ದಾರೆ. ಶಿವಕುಮಾರ ಸ್ವಾಮೀಜಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಎಚ್ಎಎಲ್ ವಿಮಾನ ನಿಲ್ದಾಣದ ಸುತ್ತಮುತ್ತ ಬಿಗಿಬಂದೋಬಸ್ತ್ ನಿಯೋಜಿಸಲಾಗಿದೆ.

Trending News