ಡಬಲ್‌ ಮರ್ಡರ್‌ ಕುರಿತು ಸಿಟಿ ರವಿ ಹೇಳಿಕೆ : ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದ ಪೊಲೀಸ್‌

ನಿನ್ನೆ ರಾಜಧಾನಿಯಲ್ಲಿ ನಡೆದ ಡಬಲ್ ಮರ್ಡರ್ ಕೇಸ್‌ಗೆ ಹೊಸ ಟ್ವಿಸ್ಟ್ ಕೊಟ್ಟಿದ್ದ ಮಾಜಿ ಸಚಿವ ಸಿಟಿ ರವಿ, ಕಾಂಗ್ರೆಸ್‌ ಸರ್ಕಾರ ಬಂದ ಬಳಿಕ ಟಾರ್ಗೆಟ್ ಕಿಲ್ಲಿಂಗ್ ಮಾಡಲಾಗಿದೆ ಎಂದು ದೂರಿದ್ದರು. ಸದ್ಯ ಸಿಟಿ ರವಿ ಹೇಳಿಕೆಗೆ ಪೊಲೀಸ್‌ ಪಡೆ ಖಡಕ್‌ ಸೂಚನೆ ರವಾನಿಸಿದೆ. 

Written by - Bhavya Sunil Bangera | Edited by - Krishna N K | Last Updated : Jul 13, 2023, 07:27 PM IST
  • ರಾಜಧಾನಿಯಲ್ಲಿ ನಡೆದ ಡಬಲ್ ಮರ್ಡರ್ ಕೇಸ್‌ಗೆ ಹೊಸ ಟ್ವಿಸ್ಟ್ ಕೊಟ್ಟಿದ್ದ ಮಾಜಿ ಸಚಿವ ಸಿಟಿ ರವಿ.
  • ಕಾಂಗ್ರೆಸ್‌ ಸರ್ಕಾರ ಬಂದ ಬಳಿಕ ಟಾರ್ಗೆಟ್ ಕಿಲ್ಲಿಂಗ್ ಮಾಡಲಾಗಿದೆ ಎಂದು ದೂರಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ.
  • ಬಿಜೆಪಿ ನಾಯಕರ ಹೇಳಿಕೆ ಬೆನ್ನಲ್ಲೇ ರಾಜ್ಯ ಪೊಲೀಸ್ ಪಡೆ ಖಡಕ್ ಸೂಚನೆ ನೀಡಿದೆ.
ಡಬಲ್‌ ಮರ್ಡರ್‌ ಕುರಿತು ಸಿಟಿ ರವಿ ಹೇಳಿಕೆ : ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದ ಪೊಲೀಸ್‌ title=

ಬೆಂಗಳೂರು : ವೈಯಕ್ತಿಕ ದ್ವೇಷದ ಕಾರಣದಿಂದ ಮಂಗಳವಾರ ಬೆಂಗಳೂರಲ್ಲಿ ನಡೆದಿದ್ದ ಡಬಲ್ ಮರ್ಡರ್ ಕೇಸ್ ಬೇರೆಯದ್ದೇ ಆಯಾಮ ಪಡೆದುಕೊಂಡಿದೆ. ಕಾಂಗ್ರೆಸ್‌ ಸರ್ಕಾರ ಬಂದ ಮೇಲಿಂದ ಟಾರ್ಗೆಟ್ ಕಿಲ್ಲಿಂಗ್ ಆಗುತ್ತಿದೆ ಎಂದು ಬಿಜೆಪಿ ನಾಯಕರ ಹೇಳಿಕೆ ಬೆನ್ನಲ್ಲೇ ಪೊಲೀಸ್ ಪಡೆ ಖಡಕ್ ಸೂಚನೆ ನೀಡಿದೆ. 

ನಿನ್ನೆ ಡಬಲ್ ಮರ್ಡರ್ ಕೇಸ್‌ಗೆ ಹೊಸ ಟ್ವಿಸ್ಟ್ ಕೊಟ್ಟಿದ್ದ ಮಾಜಿ ಸಚಿವ ಸಿಟಿ ರವಿ, ರಾಷ್ಟ್ರೀಯ ಚಿಂತನೆಯಲ್ಲಿ ಇರುವವರ ಸರಣಿ ಸಾವು ಸಂಭವಿಸುತ್ತಿದೆ. ಕಾಂಗ್ರೆಸ್‌ ಸರ್ಕಾರ ಬಂದ ಬಳಿಕ ಟಾರ್ಗೆಟ್ ಕಿಲ್ಲಿಂಗ್ ಮಾಡಲಾಗಿದೆ ಎಂದು ದೂರಿದ್ದರು. 

ಇದನ್ನೂ ಓದಿ: ಚೀನಾ ಲೋನ್ ಆ್ಯಪ್‌ನವರ ಕಿರುಕುಳ: ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ!

ಸಿಟಿ ರವಿ ಹೇಳಿಕೆ ಬೆನ್ನಲ್ಲೇ ಟ್ವಿಟ್ ಮಾಡಿದ್ದ ಬಿಜೆಪಿ ಶಾಸಕ ಸುನೀಲ್, ರಾಜ್ಯದಲ್ಲಿ ಹಿಂದೂಗಳ ಹತ್ಯೆಯಾಗುತ್ತಿದೆ. ಟಿಪ್ಪು ಸಿದ್ಧಾಂತಗಳಿಂದ ಕರ್ನಾಟಕಕ್ಕೆ ಅಪಾಯಕಾರಿ ಸ್ಥಿತಿ ಬಂದೊದಗಿದೆ ಎಂದು ಆರೋಪಿಸಿದ್ದರು. ಹಿಂದೂ ಜನಜಾಗೃತಿ ಸಮಿತಿಯ ಮೋಹನ್ ಗೌಡ, ಹಿಂದೂ ನಾಯಕನ ಹತ್ಯೆ ಆಗಿದೆ ಎಂದು ಟ್ವಿಟ್ ಮಾಡಿದ್ದರು.

ಬಿಜೆಪಿ ನಾಯಕರ ಹೇಳಿಕೆಯ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಫುಲ್ ವೈರಲ್ ಆಗಿತ್ತು. ಅದನ್ನ ಶೇರ್ ಮಾಡಿ, ಅಸಮಾಧಾನ ತೋಡಿಕೊಂಡವರ ಸಂಖ್ಯೆಯೂ ಹೆಚ್ಚಾಗಿತ್ತು. ಇದನ್ನ ಕಂಡ ಪೊಲೀಸ್ ಇಲಾಖೆ ಸಾರ್ವಜನಿಕ ರಿಗೆ ಸಂದೇಶ ರವಾನಿಸಿದೆ. 

ಇದನ್ನೂ ಓದಿ: ಪೌರ ಕಾರ್ಮಿಕರನ್ನು ಖಾಯಂಗೊಳಸಿ -ಪೌರಕಾರ್ಮಿಕರ ಮಹಾ ಸಂಘ ಆಗ್ರಹ 

ಇಂತಹ ಸುಳ್ಳು ಸುದ್ದಿಗಳನ್ನು ಹಬ್ಬಿಸಬೇಡಿ. ಸೂಕ್ಷ್ಮ ವಿಚಾರವನ್ನು ಹಂಚಿಕೊಳ್ಳುವಾಗ ಎಚ್ಚರಿಕೆಯಿಂದ ಇರಿ, ಈ ಪ್ರಕರಣದ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ ತನಿಖೆ ಮಾಡಲಾಗಿದೆ ಎಂದು ಬೆಂಗಳೂರು ಪೊಲೀಸರು ಸೂಚನೆ ರವಾನಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News