ಹಿಂದಿ ಭಾಷೆ ಗೊತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಪ್ರವಾಸ ಭಾಗ್ಯ..!

ಒಂದು ಭಾರತ ಶ್ರೇಷ್ಟ ಭಾರತ ಕಾರ್ಯಕ್ರಮದಡಿ  ಶಿಕ್ಷಣ ಇಲಾಖೆ ಪ್ರೌಢ ಶಾಲೆ ಮತ್ತು ಪಿಯು ವಿದ್ಯಾರ್ಥಿ ಗಳ‌ನ್ನು ಪ್ರವಾಸಕ್ಕೆ ಕರೆದೊಯ್ಯುವ ಯೋಜನೆಯನ್ನು ಹಾಕಿಕೊಂಡಿದೆ. ಆದರೆ ಈ ಯೋಜನೆಯೇ ಇದೀಗ ವಿವಾದಕ್ಕೆ ಕಾರಣವಾಗಿದೆ.

Written by - Ranjitha R K | Last Updated : Jun 15, 2022, 11:14 AM IST
  • ವಿವಾದಕ್ಕೆ ಕಾರಣವಾಯಿತು ಪ್ರವಾಸ ಭಾಗ್ಯ
  • ಹಿಂದಿ ಗೊತ್ತಿದ್ದರೆ ಮಾತ್ರ ಪ್ರವಾಸ
  • ಸರ್ಕಾರದ ನಿರ್ಧಾರಕ್ಕೆ ಕನ್ನಡ ಪರ ಸಂಘಟನೆಗಳ ಕಿಡಿ
ಹಿಂದಿ ಭಾಷೆ ಗೊತ್ತಿರುವ ವಿದ್ಯಾರ್ಥಿಗಳಿಗೆ  ಶಿಕ್ಷಣ ಇಲಾಖೆಯಿಂದ  ಪ್ರವಾಸ ಭಾಗ್ಯ..!  title=
educational tour for students ( representational photo)

ಬೆಂಗಳೂರು : ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ ಒಂದು ಭಾರತ ಶ್ರೇಷ್ಟ ಭಾರತ ಕಾರ್ಯಕ್ರಮದಡಿ ಪ್ರೌಢ ಶಾಲೆ ಮತ್ತು ಪಿಯು ವಿದ್ಯಾರ್ಥಿ ಗಳಿಗೆ‌ ಹೊರ ರಾಜ್ಯಕ್ಕೆ  ಪ್ರವಾಸಕ್ಕೆ ಕರೆದೊಯ್ಯುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಆದರೆ, ಹಿಂದಿ ಭಾಷೆ ತಿಳಿದಿರುವ ವಿದ್ಯಾರ್ಥಿಗಳಿಗೆ ಮಾತ್ರ ಈ ಪ್ರವಾಸದಲ್ಲಿ ಪಾಲ್ಗೊಳ್ಳುವ ಅವಕಾಶವಿದೆ.  

ಒಂದು ಭಾರತ ಶ್ರೇಷ್ಟ ಭಾರತ ಕಾರ್ಯಕ್ರಮದಡಿ  ಶಿಕ್ಷಣ ಇಲಾಖೆ ಪ್ರೌಢ ಶಾಲೆ ಮತ್ತು ಪಿಯು ವಿದ್ಯಾರ್ಥಿ ಗಳ‌ನ್ನು ಪ್ರವಾಸಕ್ಕೆ ಕರೆದೊಯ್ಯುವ ಯೋಜನೆಯನ್ನು ಹಾಕಿಕೊಂಡಿದೆ. ಆದರೆ ಈ ಯೋಜನೆಯೇ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಪ್ರವಾಸದಲ್ಲಿ ಪಾಲ್ಗೊಳ್ಳಬೇಕಾದರೆ  ವಿದ್ಯಾರ್ಥಿ ಗಳಿಗೆ ಹಿಂದಿ ಭಾಷೆ ಗಗೊತ್ತಿರಬೇಕು ಎನ್ನಲಾಗಿದೆ. ಹಿಂದಿ ಬರುವ ವಿದ್ಯಾರ್ಥಿಗಳಿಗೆ ಮಾತ್ರ ಆದ್ಯತೆ ಎಂದು ಅಧಿಕಾರಿಗಳಿಗೆ ಸೂಚನೆ ಕೊಟ್ಟಿರುವು ವಿವಾದಕ್ಕೆ ಕಾರಣವಾಗಿದೆ. 

ಇದನ್ನೂ ಓದಿ : Lokayukta: ನೂತನ ಲೋಕಾಯುಕ್ತರಾಗಿ ನ್ಯಾ. ಬಿ.ಎಸ್.ಪಾಟೀಲ್ ಪ್ರಮಾಣ ವಚನ ಸ್ವೀಕಾರ

ಹಿಂದಿ ಬಲ್ಲ ವಿದ್ಯಾರ್ಥಿಗಳಿಗೆ ಮಾತ್ರ ಪ್ರವಾಸ ಭಾಗ್ಯ ಕಲ್ಪಿಸಿರುವುದು ಇದೀಗ ಕನ್ನಡ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಕೇಂದ್ರ ಸರ್ಕಾರ ಈ ಸೂಚನೆ ನೀಡದೆ ಹೋದರೂ ರಾಜ್ಯ ಸರ್ಕಾರ ಯಾಕೆ ಈ ನಿರ್ಧಾರ ತೆಗೆದುಕೊಂಡಿದೆ ಎನ್ನುವ ಪ್ರಶ್ನೆ ಎದ್ದಿದೆ. ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕನ್ನಡ ಪರ ಸಂಘಟನೆಗಳು ಕಿಡಿ ಕಾರಿವೆ. 

ಇದನ್ನೂ ಓದಿ : ರಾಷ್ಟ್ರ ಪತಿ‌ ಚುನಾವಣೆ ಹಿನ್ನೆಲೆ : ಇಂದು ಪ್ರಾದೇಶಿಕ ಪಕ್ಷಗಳ ನಾಯಕರ ಸಭೆ

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News