ಫೇಸ್ ಬುಕ್ ಮೂಲಕ ಹೃದಯಸ್ಪರ್ಶಿ ನುಡಿ ನಮನ ಸಲ್ಲಿಸಿದ ಸುಮಲತಾ ಅಂಬರೀಶ್

ಕನ್ನಡ ಚಲನ ಚಿತ್ರರಂಗದ ದಿಗ್ಗಜ ಅಂಬರೀಶ್ ಅವರ ನಿಧನ ನಿಜಕ್ಕೂ ಚಲನಚಿತ್ರರಂಗಕ್ಕೆ ತುಂಬಲಾರದ ನಷ್ಟ.ಅವರ ನಿಧನದ ವೇಳೆ ರಾಜ್ಯದ  ಜನರು ತೋರಿಸಿದ ಪ್ರೀತಿ ಮತ್ತು ಅಭಿಮಾನಕ್ಕೆ ಶರಣು ಹೇಳಿರುವ ಅಂಬರೀಶ್ ಪತ್ನಿ ಸುಮಲತಾ ಈಗ ಎಲ್ಲರಿಗೂ ತಮ್ಮ ಫೇಸ್ ಬುಕ್ ಪೋಸ್ಟ್ ಮೂಲಕ ಕೃತಜ್ಞತೆಯನ್ನು ತಿಳಿಸಿದ್ದಾರೆ. ಆ ಫೇಸ್ ಬುಕ್ ಪೋಸ್ಟ್ ನ ಯಥಾವತ್ ರೂಪ ಇಲ್ಲಿದೆ. 

Last Updated : Dec 1, 2018, 05:05 PM IST
 ಫೇಸ್ ಬುಕ್ ಮೂಲಕ ಹೃದಯಸ್ಪರ್ಶಿ ನುಡಿ ನಮನ ಸಲ್ಲಿಸಿದ ಸುಮಲತಾ ಅಂಬರೀಶ್  title=

ಬೆಂಗಳೂರು: ಕನ್ನಡ ಚಲನ ಚಿತ್ರರಂಗದ ದಿಗ್ಗಜ ಅಂಬರೀಶ್ ಅವರ ನಿಧನ ನಿಜಕ್ಕೂ ಚಲನಚಿತ್ರರಂಗಕ್ಕೆ ತುಂಬಲಾರದ ನಷ್ಟ.ಅವರ ನಿಧನದ ವೇಳೆ ರಾಜ್ಯದ  ಜನರು ತೋರಿಸಿದ ಪ್ರೀತಿ ಮತ್ತು ಅಭಿಮಾನಕ್ಕೆ ಶರಣು ಹೇಳಿರುವ ಅಂಬರೀಶ್ ಪತ್ನಿ ಸುಮಲತಾ ಈಗ ಎಲ್ಲರಿಗೂ ತಮ್ಮ ಫೇಸ್ ಬುಕ್ ಪೋಸ್ಟ್ ಮೂಲಕ ಕೃತಜ್ಞತೆಯನ್ನು ತಿಳಿಸಿದ್ದಾರೆ. ಆ ಫೇಸ್ ಬುಕ್ ಪೋಸ್ಟ್ ನ ಯಥಾವತ್ ರೂಪ ಇಲ್ಲಿದೆ. 

"ಈ ಅತ್ಯಂತ ಕಷ್ಟದ ಮತ್ತು ದುಃಖದ ಹೊತ್ತಿನಲ್ಲಿ ನನ್ನನು ಮತ್ತು ನನ್ನ ಕುಟುಂಬವನ್ನು ಬೆಂಬಲಿಸಿ ನಿಂತ ಎಲ್ಲರಿಗೂ ನಾನು ಈ ಮೂಲಕ ಧನ್ಯವಾದವನ್ನು ತಿಳಿಸುತ್ತೇನೆ. ನಿಮ್ಮ ಸಾಂತ್ವನದ ಮಾತುಗಳು ಮತ್ತು ನಿಮ್ಮ ಪ್ರೀತಿಯ ನಡೆಗಳು ಈ ಸಂಕಷ್ಟದ ಹೊತ್ತಿನಲ್ಲಿ ನಮಗೆ ಶಕ್ತಿ ತುಂಬಿದವು. ನಾನು, ಅಭಿಷೇಕ್ ಮತ್ತು ಅಂಬರೀಶ್ ಇಡೀ ಕುಟುಂಬವು ಕರ್ನಾಟಕದ ಜನತೆಗೆ ಸದಾ ಕಾಲ ಅಭಾರಿಯಾಗಿರುತ್ತೇವೆ. ವಿಶೇಷವಾಗಿ ಅಂಬರೀಶ್ ಅವರನ್ನು ತಮ್ಮ ರಾಜನಂತೆ ಗೌರವರಿಸಿ ಅತ್ಯಂತ ಪ್ರೀತಿಯಿಂದ ಕಳಿಸಿಕೊಟ್ಟ ಮಂಡ್ಯದ ಅಭಿಮಾನಿಗಳು ಮತ್ತು ಎಲ್ಲ ಅಭಿಮಾನಿಗಳಿಗೆ ನಾವುಗಳು ಯಾವಾಗಲು ಚಿರಋಣಿ. ಅಂತ್ಯಕ್ರಿಯೆಗೆ ಬೇಕಾದ ಎಲ್ಲ ವ್ಯವಸ್ತೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿಕೊಡುವುದರ ಜೊತೆಗೆ ಅಂಬರೀಶ್ ಅವರಿಗೆ ಸಕಲ ಸರಕಾರಿ ಗೌರವದೊಂದಿಗೆ ಕಳುಹಿಸಿಕೊಟ್ಟ ಸನ್ಮಾನ್ಯ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೂ, ಮಂಡ್ಯದ ಸಂಸದ ಸಿ ಎಸ್ ಪುಟ್ಟರಾಜು ಅವರಿಗೂ, ಇನ್ನಿತರ ಶಾಸಕರು ಮತ್ತು ಸಂಸದರಿಗೂ, ಕರ್ನಾಟಕ ಸರ್ಕಾರಕ್ಕೂ ನಾನು ಈ ಮೂಲಕ ಅಭಿನಂದನೆ ತಿಳಿಸುತ್ತೇನೆ. ಮೂರು ದಿನಗಳ ಕಾಲ ಸತತವಾಗಿ ಶ್ರಮವಹಿಸಿ ಯಾವುದೇ ರೀತಿ ತೊಂದರೆಯಾಗದಂತೆ ನೋಡಿಕೊಂಡ ಪೋಲಿಸ್ ಇಲಾಖೆಯವರಿಗೂ, ಅರ್ ಎ ಎಫ್ ಸಿಬ್ಬಂದಿಯವರಿಗೂ, ಮಂಡ್ಯ ಮತ್ತು ಬೆಂಗಳೂರು ಜಿಲ್ಲೆಯ ಅಧಿಕಾರಿ ವರ್ಗದವರಿಗೂ ನಾನು ಈ ಮೂಲಕ ಅಭಿನಂದನೆ ತಿಳಿಸಲು ಇಚ್ಚಿಸುತ್ತೇನೆ. ಅಂಬರೀಶ್ ಅವರು ಮೇಲೆ ಸದಾ ಕಾಲ ಪ್ರೀತಿ ಮತ್ತು ಅಭಿಮಾನವನ್ನು ತೋರಿಸಿದ ಮಂಡ್ಯ ಜನತೆಯ ಬಗ್ಗೆ ಹೇಳಲು ಪದಗಳೇ ಸಾಲುತ್ತಿಲ್ಲ. ಅವರು ಬದುಕಿದ್ದಾಗ ಹೇಗೆ ಪ್ರೀತಿ ಅಭಿಮಾನ ತೋರಿಸಿದರೋ ಹಾಗೆಯೇ ಅವರು ಸತ್ತ ನಂತರವು ಪ್ರೀತಿ ಅಭಿಮಾನಕ್ಕೆ ಯಾವುದೇ ಕೊರತೆಯಾಗದಂತೆ ನಡೆದುಕೊಂಡ ಮಂಡ್ಯದ ಜನತೆಗೆ ನಾನು ಸದಾ ಅಭಾರಿ. ಅವರೊಬ್ಬ ನಟ, ಕೇಂದ್ರದ ಮಂತ್ರಿ, ರಾಜ್ಯದ ಮಂತ್ರಿ, ಒಬ್ಬ ಸೂಪರ್ ಸ್ಟಾರ್, ಎಲ್ಲರಿಗೂ ಒಬ್ಬ ಒಳ್ಳೆಯ ಗೆಳೆಯರಾಗಿದ್ದರು. ಆದರೆ ಇವೆಲ್ಲಕ್ಕೂ ಮಿಗಿಲಾಗಿ ನಿಮ್ಮೆಲ್ಲರ ಪ್ರೀತಿ ಅಭಿಮಾನವೇ ಅವರಿಗೆ ದೊಡ್ಡ ಕಳಶದಂತೆ. ಅಂಬರೀಶ್ ಅವರು ನಮ್ಮ ಕರ್ನಾಟಕದ ಪುಣ್ಯ ಭೂಮಿಯಲ್ಲಿ ಹುಟ್ಟಿದ್ದೇ ಅವರಿಗೊಂದು ಅದೃಷ್ಟ. ಹಾಗೆಯೇ ಮಂಡ್ಯದ ಮಣ್ಣಿನ ಮಗ ಎನಿಸಿಕೊಳ್ಳಲು ಅಷ್ಟೇ ಅದೃಷ್ಟ ಮಾಡಿದ್ದರು."

Trending News