"ಮಹಿಳಾ ಕುಸ್ತಿಪಟುಗಳ ಹಕ್ಕನ್ನು ಹತ್ತಿಕ್ಕಲು ಹೊರಟಿರುವುದು ಆತ್ಮವಂಚನಾ ನಡವಳಿಕೆಯ ಪ್ರತೀಕ"

ಲೈಂಗಿಕ ದೌರ್ಜನ್ಯ ಎಸಗಿರುವ ಭಾರತ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೋರಾಡುತ್ತಿರುವ ಮಹಿಳಾ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ.ತಕ್ಷಣ ಬಂಧಿತ ಮಹಿಳಾ ಕುಸ್ತಿಪಟುಗಳನ್ನು ಬಿಡುಗಡೆಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Written by - Manjunath N | Last Updated : May 28, 2023, 10:21 PM IST
  • ಮಹಿಳಾ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ
  • ತಕ್ಷಣ ಬಂಧಿತ ಮಹಿಳಾ ಕುಸ್ತಿಪಟುಗಳನ್ನು ಬಿಡುಗಡೆಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ
"ಮಹಿಳಾ ಕುಸ್ತಿಪಟುಗಳ ಹಕ್ಕನ್ನು ಹತ್ತಿಕ್ಕಲು ಹೊರಟಿರುವುದು ಆತ್ಮವಂಚನಾ ನಡವಳಿಕೆಯ ಪ್ರತೀಕ" title=

ಬೆಂಗಳೂರು: ಲೈಂಗಿಕ ದೌರ್ಜನ್ಯ ಎಸಗಿರುವ ಭಾರತ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೋರಾಡುತ್ತಿರುವ ಮಹಿಳಾ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ.ತಕ್ಷಣ ಬಂಧಿತ ಮಹಿಳಾ ಕುಸ್ತಿಪಟುಗಳನ್ನು ಬಿಡುಗಡೆಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪ್ರಜಾಪ್ರಭುತ್ವದ ಹಬ್ಬ ಎಂಬಂತೆ ಸಂಭ್ರಮಿಸುತ್ತಿರುವ ನರೇಂದ್ರ ಮೋದಿ ಸರ್ಕಾರ, ಅಲ್ಲಿಂದ ಕೂಗಳತೆಯ ದೂರದಲ್ಲಿ ಧರಣಿ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯ ಪ್ರಜಾಸತ್ತಾತ್ಮಕ ಹಕ್ಕನ್ನು ಪೊಲೀಸರ ಮೂಲಕ ಹತ್ತಿಕ್ಕಲು ಹೊರಟಿರುವುದು ಆತ್ಮವಂಚನಾ ನಡವಳಿಕೆಯ ಪ್ರತೀಕ ಎಂದು ಅವರು ದೂರಿದ್ದಾರೆ.

ಕೇಂದ್ರ ಸರ್ಕಾರ ತಕ್ಷಣ ಲೈಂಗಿಕ ದೌರ್ಜನ್ಯದ ಆರೋಪಕ್ಕೊಳಗಾಗಿರುವ ಭಾರತೀಯ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬೃಜಭೂಷಣ್ ಸಿಂಗ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿ, ನೊಂದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕು ಎಂದು ಅವರು ಆಗ್ರಹಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News