ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಪಕ್ಷ ತೀರ್ಮಾನ - ಹೆಚ್‌ ಡಿ ಡಿ

ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು, ಈ ಚುನಾವಣೆಯಲ್ಲಿ ನಾವು ಸೋತಿದ್ದೇವೆ. ಅದರಿಂದ ಕುಗ್ಗಬೇಕಿಲ್ಲ. ಅನೇಕ ಚುನಾವಣೆಗಳಲ್ಲಿ ನಾನು ಸೇರಿದಂತೆ ನಾವೆಲ್ಲರೂ ಗೆದಿದ್ದೇವೆ, ಸೋತಿದ್ದೇವೆ.

Written by - Zee Kannada News Desk | Last Updated : Jun 6, 2023, 06:29 PM IST
  • ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಪಕ್ಷ ತೀರ್ಮಾನ
  • ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾತನಾಡಿದ ಮಾಜಿ ಪ್ರಧಾನಮಂತ್ರಿ
  • ಮುಂದೆ ನಮ್ಮ ಅನೇಕ ಚುನಾವಣೆಗಳಿವೆ ಅವುಗಳಲ್ಲಿ ಗೆಲ್ಲುವ ಭರವಸೆ
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ  ಪಕ್ಷ ತೀರ್ಮಾನ - ಹೆಚ್‌ ಡಿ ಡಿ title=

ಬೆಂಗಳೂರು: ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು, ಈ ಚುನಾವಣೆಯಲ್ಲಿ ನಾವು ಸೋತಿದ್ದೇವೆ. ಅದರಿಂದ ಕುಗ್ಗಬೇಕಿಲ್ಲ. ಅನೇಕ ಚುನಾವಣೆಗಳಲ್ಲಿ ನಾನು ಸೇರಿದಂತೆ ನಾವೆಲ್ಲರೂ ಗೆದಿದ್ದೇವೆ, ಸೋತಿದ್ದೇವೆ. ಆಮೇಲೆ ಪಿನಿಕ್ಸಿನಂತೆ ಮೇಲೆದ್ದು ಬಂದಿದ್ದೇವೆ.

ಈಗಲೂ ಅಷ್ಟೇ, ಸೋತಿದ್ದೇವೆ ಎಂದು ಮನೆಯಲ್ಲಿ ಕೂರಲಾರೆ. ಪಕ್ಷಕ್ಕಾಗಿ ಎಷ್ಟು ಕೆಲಸ ಮಾಡಲಿಕ್ಕೂ ನಾನು ತಯಾರಿದ್ದೇನೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.ಮುಂದೆ ನಮ್ಮ ಅನೇಕ ಚುನಾವಣೆಗಳಿವೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ತಾಲ್ಲೂಕು, ಜಿಲ್ಲಾ ಪಂಚಾಯಿತಿ ಸೇರಿ ಹಲವಾರು ಚುನಾವಣೆಗಳಿವೆ.

ಇದನ್ನೂ ಓದಿ: ತಮ್ಮನ ಮೇಲಿನ ಸೇಡು; ಹಂತಕರ ಕೈಯಲ್ಲಿ ಬಲಿಯಾಗಿದ್ದು ಮಾತ್ರ ಅಣ್ಣ !

ಈ ಚುನಾವಣೆಗಳಿಗೆ ನಾವು ಸಿದ್ಧತೆ ಮಾಡಿಕೊಳ್ಳಬೇಕು. ಆ ಬಗ್ಗೆ ಪಕ್ಷದಲ್ಲಿ ಸಮಾಲೋಚನೆ ನಡೆಸಲಾಗುತ್ತಿದೆ. ಸಂಘಟನೆ ಕಡೆ ಒತ್ತು ನೀಡಲಾಗುತ್ತಿದೆ. ಇನ್ನು, ಲೋಕಸಭೆ ಚುನಾವಣೆಯಲ್ಲಿ ಎಷ್ಟು ಕ್ಷೇತ್ರಗಳಲ್ಲಿ, ಯಾವ ಯಾವ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಬೇಕು ಎಂಬುದನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಜಿ ಪ್ರಧಾನಿಗಳು ತಿಳಿಸಿದರು.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆಯೋ ಇಲ್ಲವೋ ಎಂಬುದನ್ನು ಪಕ್ಷ ತೀರ್ಮಾನ ಮಾಡುತ್ತದೆ ಎಂದು ಮಾಜಿ ಪ್ರಧಾನಿಗಳು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇದನ್ನೂ ಓದಿ: Sexual Harassment: ಯಾರಿಗಾದರೂ ʼಒಳ್ಳೆ ಫಿಗರ್ ಗುರುʼ ಎಂದು ರೇಗಿಸುವ ಮುನ್ನ ಹುಷಾರ್‌ !

ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಂಸದ ಕುಪೇಂದ್ರ ರೆಡ್ಡಿ, ಪಕ್ಷದ ಹಿರಿಯ ನಾಯಕ, ಶಾಸಕ ವೆಂಕಟಶಿವಾರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಬಿಎಂ ಫಾರೂಖ್, ಟಿ.ಎ.ಶರವಣ, ಇಂಚರ ನಾರಾಯಣಸ್ವಾಮಿ, ಪಕ್ಷದ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಶಾಸಕರಾದ ಮೇಲೂರು ರವಿ, ಸಮೃದ್ಧಿ ಮಂಜುನಾಥ್, ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಶ್ರೀನಿವಾಸ ಮೂರ್ತಿ, ಹಿರಿಯ ಮುಖಂಡರಾದ ಜವರಾಯ ಗೌಡ, ಸಿಎಂಆರ್ ಶ್ರೀನಾಥ್, ಮುನೇಗೌಡ, ಬಂಗಾರಪೇಟೆ ಮಲ್ಲೇಶ್ ಮುಂತಾದವರು ಹಾಜರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News