ವಿರೋಧದ ನಡುವೆಯೂ 'ಅಶ್ವಾರೂಢ ಬಸವೇಶ್ವರ'ರ ಪ್ರತಿಮೆ ಸ್ಥಾಪನೆಗೆ ರಾತ್ರೋರಾತ್ರಿ ತಯಾರಿ

ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಪುತ್ಥಳಿಯ ಎದುರುಗಡೆ  ಬಸವೇಶ್ವರರ ರಾಜಪ್ರಭುತ್ವ ಸಂಕೇತವುಳ್ಳ ಪುತ್ಥಳಿ ನಿರ್ಮಾಣ  ಕಾಮಗಾರಿ ಸ್ಥಗಿತಗೊಳಿಸಿ, ಸ್ಥಳಾಂತರ ಮಾಡಬೇಕು ಎಂದು ವಿರೋಧ ವ್ಯಕ್ತವಾಗಿತ್ತು. 

Written by - Yashaswini V | Last Updated : Sep 20, 2024, 11:10 AM IST
  • ಚಾಮರಾಜನಗರ ಜಿಲ್ಲಾಡಳಿತ ಭವನದ ಆವರಣಕ್ಕೆ ರಾತ್ರೋರಾತ್ರಿ ಬಂದ 'ಅಶ್ವಾರೂಢ ಬಸವೇಶ್ವರ'ರ ಪ್ರತಿಮೆ
  • ಅಂಬೇಡ್ಕರ್ ಪುತ್ಥಳಿ ಎದುರು ಕುದುರೆ ಸವಾರಿ ಮಾಡುತ್ತಿರುವ ಬಸವೇಶ್ವರರ ಪ್ರತಿಮೆ
ವಿರೋಧದ ನಡುವೆಯೂ 'ಅಶ್ವಾರೂಢ ಬಸವೇಶ್ವರ'ರ ಪ್ರತಿಮೆ ಸ್ಥಾಪನೆಗೆ ರಾತ್ರೋರಾತ್ರಿ ತಯಾರಿ title=

ಚಾಮರಾಜನಗರ: ಚಾಮರಾಜನಗರ ಜಿಲ್ಲಾಡಳಿತ ಭವನ ಆವರಣದದಲ್ಲಿ ಗುರುವಾರ ರಾತ್ರಿ  9 ರಲ್ಲಿ ಕರ್ನಾಟಕ ಸಾಂಸ್ಕೃತಿಕ ನಾಯಕ ಬಸವೇಶ್ವರರ ಪ್ರತಿಮೆಯನ್ನು ಸ್ಥಾಪನೆ ಮಾಡಲಾಯಿತು.

ಕಾಮಗಾರಿ ಕೆಲಸ ಇನ್ನಷ್ಟೇ ಸಂಪೂರ್ಣವಾಗಿ ನಡೆಯಬೇಕಿದ್ದು  ಬೆಂಗಳೂರಿನಲ್ಲಿ ನಿರ್ಮಾಣಗೊಂಡ ಅಶ್ವಾರೂಢ ಬಸವೇಶ್ವರರ ಪ್ರತಿಮೆಯನ್ನು ಸ್ಥಾಪನೆ ಮಾಡಲಾಗಿದೆ.

ಇದನ್ನೂ ಓದಿ- ಮೋದಿ ತಾಯಿಯವರ ಅವಹೇಳನ ಬಿಜೆಪಿಯವರು ಸಹಿಸಬಹುದು, ನಾವು ಸಹಿಸುವುದಿಲ್ಲ : ಡಿಕೆ ಸುರೇಶ್

ಇನ್ನು, ರಾತ್ರೋರಾತ್ರಿ ಸ್ಥಾಪನೆ ಬಂದ "ಅಶ್ವಾರೂಢ ಬಸವೇಶ್ವರರ ಪ್ರತಿಮೆ" ಬಗ್ಗೆ ಜೀ ಕನ್ನಡ ನ್ಯೂಸ್ ಗೆ ಕಾಂಗ್ರೆಸ್ ಮುಖಂಡ ಬಿ.ಕೆ.ರವಿಕುಮಾರ್ ಪ್ರತಿಕ್ರಿಯಿಸಿ, ನೆಲದ ಮೇಲೆ ಇರಿಸಬಾರದೆಂದ ಉದ್ದೇಶದಿಂದ ಜಿಲ್ಲಾಡಳಿತ ಭವನ ಆವರಣದಲ್ಲಿ ಸ್ಥಾಪನೆಯಾಗುತ್ತಿರುವ ಪೀಠದ ಮೇಲೆ ಕೂರಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ- ತಿರುಪತಿ ಲಡ್ಡು ಪ್ರಸಾದದಲ್ಲಿ ತುಪ್ಪದ ಬದಲು ಪ್ರಾಣಿಗಳ ಕೊಬ್ಬು ಬಳಕೆ ಆರೋಪ! ಈ ಬಗ್ಗೆ ಸಿ.ಟಿ ರವಿ ಹೇಳಿದ್ದೇನು?

ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಪುತ್ಥಳಿಯ ಎದುರುಗಡೆ  ಬಸವೇಶ್ವರರ ರಾಜಪ್ರಭುತ್ವ ಸಂಕೇತವುಳ್ಳ ಪುತ್ಥಳಿ ನಿರ್ಮಾಣ  ಕಾಮಗಾರಿ ಸ್ಥಗಿತಗೊಳಿಸಿ, ಸ್ಥಳಾಂತರ ಮಾಡಬೇಕು ಎಂದು ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ಯುವ ಘಟಕದ ರಾಜ್ಯಾಧ್ಯಕ್ಷ ಸಿ.ಎಂ.ಕೃಷ್ಣ ಕೆಲ ದಿನಗಳ ಹಿಂದೆ ಒತ್ತಾಯಿಸಿದ್ದರು ಮತ್ತು ಕುದುರೆ ಮೇಲೆ ಕುಳಿತಿರುವ ಬಸವೇಶ್ವರರ ಪ್ರತಿಮೆಗೆ ಬಗ್ಗೆ ಆಕ್ಷೇಪ ಹೊರಹಾಕಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News