ಚನ್ನಪಟ್ಟಣದಲ್ಲಿ NDA ಅಭ್ಯರ್ಥಿಗೆ ಟಿಕೆಟ್‌; ಎರಡು ದಿನದಲ್ಲಿ ತೀರ್ಮಾನವಾಗಲಿದೆ: ಪ್ರತಿಪಕ್ಷ ನಾಯಕ ಆರ್‌ ಅಶೋಕ

Channapatna by-election: ನಿಖಿಲ್‌ ಕುಮಾರಸ್ವಾಮಿ ಅವರು ಈಗಾಗಲೇ ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ದಾರೆ. ಸೀಟು ಅವರದ್ದೇ ಆಗಿರುವುದರಿಂದ ಹಾಗೂ ಎನ್‌ಡಿಎ ಪಾರ್ಟ್‌ನರ್‌ ಆಗಿರುವುದರಿಂದ ಜೆಡಿಎಸ್‌ನವರ ಸಲಹೆ ಪ್ರಮುಖವಾಗಿರುತ್ತದೆ. ಇನ್ನು ಎರಡು ದಿನದಲ್ಲಿ ಎಲ್ಲವೂ ತೀರ್ಮಾನವಾಗಲಿದೆ ಎಂದರು.  

Written by - Prashobh Devanahalli | Last Updated : Oct 21, 2024, 06:15 PM IST
    • ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ
    • ಇದು ಜೆಡಿಎಸ್‌ನ ಕ್ಷೇತ್ರವೇ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖ
    • ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್‌ ಅಶೋಕ್
ಚನ್ನಪಟ್ಟಣದಲ್ಲಿ NDA ಅಭ್ಯರ್ಥಿಗೆ ಟಿಕೆಟ್‌; ಎರಡು ದಿನದಲ್ಲಿ ತೀರ್ಮಾನವಾಗಲಿದೆ: ಪ್ರತಿಪಕ್ಷ ನಾಯಕ ಆರ್‌ ಅಶೋಕ title=
File Photo

ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಇದು ಜೆಡಿಎಸ್‌ನ ಕ್ಷೇತ್ರವೇ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು.

ಇದನ್ನೂ ಓದಿ: ಕಾರ್ತಿಕ ಮಾಸದಲ್ಲಿ ತುಳಸಿಗೆ ಸಂಬಂಧಿಸಿದ ಈ ಒಂದು ಕೆಲಸ ಮಾಡಿ.. ಕಷ್ಟವೆಲ್ಲ ಪರಿಹಾರವಾಗಿ ಹೊಳೆಯುವುದ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಪಿ.ಯೋಗೇಶ್ವರ್‌ ಅವರ ಮನ ಒಲಿಸಲು ನಾನು ಕೂಡ ಯತ್ನಿಸಿದ್ದೆ. ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ಸಂಬಂಧ ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಯೋಗೇಶ್ವರ್‌ ಅವರಿಗೆ ಟಿಕೆಟ್‌ ನೀಡಬೇಕೆಂದು ಹಿರಿಯ ನಾಯಕರಿಗೆ ಮನವಿ ಮಾಡಿದ್ದೇವೆ. ಈ ಹಿಂದೆ ಕ್ಷೇತ್ರದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಶಾಸಕರಾಗಿದ್ದು, ಅವರ ತೀರ್ಮಾನ ಪ್ರಮುಖವಾಗಿರುತ್ತದೆ. ಯೋಗೇಶ್ವರ್‌ ಅವರು ದುಡುಕುತ್ತಾರೆ ಅಥವಾ ತಪ್ಪು ತೀರ್ಮಾನ ಕೈಗೊಳ್ಳುತ್ತಾರೆಂದು ನನಗೆ ಅನ್ನಿಸುತ್ತಿಲ್ಲ. ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌ ಸಿಗಬಹುದು ಎಂದರು.

ನಿಖಿಲ್‌ ಕುಮಾರಸ್ವಾಮಿ ಅವರು ಈಗಾಗಲೇ ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ದಾರೆ. ಸೀಟು ಅವರದ್ದೇ ಆಗಿರುವುದರಿಂದ ಹಾಗೂ ಎನ್‌ಡಿಎ ಪಾರ್ಟ್‌ನರ್‌ ಆಗಿರುವುದರಿಂದ ಜೆಡಿಎಸ್‌ನವರ ಸಲಹೆ ಪ್ರಮುಖವಾಗಿರುತ್ತದೆ. ಇನ್ನು ಎರಡು ದಿನದಲ್ಲಿ ಎಲ್ಲವೂ ತೀರ್ಮಾನವಾಗಲಿದೆ ಎಂದರು.

ಇದನ್ನೂ ಓದಿ: ಈ ಡೇಟ್‌ನಲ್ಲಿ ಜನಿಸಿದವರು ಅದೃಷ್ಟಕ್ಕೆ ಮತ್ತೊಂದು ಹೆಸರಿದ್ದಂತೆ: ಹೆಣ್ಣಾದರಂತೂ.. ಇದ್ದ ಮನೆಗೂ, ಹೋದ ಮನೆಗೂ ಶುಕ್ರದೆಸೆ ಹೊತ್ತ ಭಾಗ್ಯದೇವತೆಯಾಗಿ ಇರುವರು

ಡಿ.ಕೆ.ಶಿವಕುಮಾರ್‌ ಅವರ ಸಹೋದರ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಯಾರನ್ನೋ ಕರೆದುಕೊಂಡು ಬರುತ್ತೇನೆ ಎಂದು ಹೇಳಬಹುದು. ಆದರೆ ಅಂತಿಮವಾಗಿ ಎಲ್ಲವನ್ನೂ ಜನರು ತೀರ್ಮಾನಿಸುತ್ತಾರೆ. ಕಾಂಗ್ರೆಸ್‌ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ರೈತರಿಗೆ ಪರಿಹಾರ ನೀಡಿಲ್ಲ. ಪ್ರವಾಹ ಹಾನಿ ನಿವರ್ಹಣೆ ಮಾಡಿಲ್ಲ. ಜನರು ಸರ್ಕಾರದ ವಿರುದ್ಧವಾಗಿ ನಿಂತಿದ್ದಾರೆ. ಅದರ ಉಪಯೋಗವನ್ನು ನಾವು ಪಡೆಯುತ್ತೇವೆ ಎಂದರು.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News