ಹುಲಿ ದಾಳಿ: ಕುರಿಗಾಹಿಯ ಅರ್ಧ ತಿಂದುಂಡ ಶವಪತ್ತೆ

ಈ ದುರ್ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಆಡಿನ ಕಣಿವೆಯ ಬುಡಕಟ್ಟು ಜನಾಂಗದ  54 ವರ್ಷದ  ಬಸವ ಎಂದು ಗುರುತಿಸಲಾಗಿದೆ. 

Written by - Yashaswini V | Last Updated : Dec 12, 2023, 02:46 PM IST
  • ಆಡಿನ ಕಣಿವೆಯ ಬಸವ(54) ಮೃತ ವ್ಯಕ್ತಿ.
  • ಈತ ಬುಡಕಟ್ಟು ಜನಾಂಗದ ವ್ಯಕ್ತಿ ಎಂದು ತಿಳಿದುಬಂದಿದೆ.
ಹುಲಿ ದಾಳಿ: ಕುರಿಗಾಹಿಯ ಅರ್ಧ ತಿಂದುಂಡ ಶವಪತ್ತೆ title=

ಚಾಮರಾಜನಗರ: ಹುಲಿಯೊಂದು ದಾಳಿ ನಡೆಸಿ ಕುರಿಗಾಹಿಯನ್ನು ಅರ್ಧ ತಿಂದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ  ಆಡಿನ ಕಣಿವೆ ಎಂಬಲ್ಲಿ  ಮಂಗಳವಾರ ಬೆಳಕಿಗೆ ಬಂದಿದೆ. 

ಈ ದುರ್ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಆಡಿನ ಕಣಿವೆಯ ಬುಡಕಟ್ಟು ಜನಾಂಗದ  54 ವರ್ಷದ  ಬಸವ ಎಂದು ಗುರುತಿಸಲಾಗಿದೆ. 

ಇದನ್ನೂ ಓದಿ- ರಾಜಭವನಕ್ಕೆ ಫೇಕ್‌ ಬಾಂಬ್ ಕಾಲ್‌ : ಬೆಳಿಗ್ಗೆಯಿಂದ ಏನಾಯ್ತು..? ಕಂಪ್ಲೀಟ್‌ ರಿಪೋರ್ಟ್‌ ಇಲ್ಲಿದೆ

ಕಳೆದ ಎರಡು ದಿನಗಳ ಹಿಂದೆ ಕುರಿಗಳನ್ನು ಮೇಯಿಸಲು ಕಾಡಿಗೆ ತೆರಳಿದ್ದ ಬಸವ ರಾತ್ರಿ ಕಳೆದರೂ ಮನೆಗೆ ವಾಪಾಸ್ಸಾಗದ ಹಿನ್ನೆಲೆ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಹುಲಿ ದಾಳಿ ನಡೆಸಿ ಅರ್ಧ ತಿಂದಿರುವ ಶವ ಪತ್ತೆಯಾಗಿದೆ.

ಇದನ್ನೂ ಓದಿ- ಸದನದಲ್ಲಿ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ – 2023 ಮಂಡನೆ

ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ ಕುರಿತು ಕುಟುಂಬಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News