ಪತ್ರಿಕೋದ್ಯಮದ ದಿಗ್ಗಜ ರಾಮೋಜಿ ರಾವ್ ಅವರಿಗೆ ಈಟಿವಿ ಬಳಗದಿಂದ ನುಡಿನಮನ

ಮಾಧ್ಯಮ ದೊರೆ,ಈನಾಡು ಮುಖ್ಯಸ್ಥ,ರಾಮೋಜಿ ಸಮೂಹ ಸಂಸ್ಥೆಗಳ ಸಂಸ್ಥಾಪಕ ರಾಮೋಜಿ ರಾವ್ ನಿಧನಕ್ಕೆ ಈಟಿವಿ ಬಳಗ ಕಂಬನಿ ಮಿಡಿದಿದ್ದು ನುಡಿನಮದ ಮೂಲಕ ಶ್ರದ್ದಾಂಜಲಿ ಸಲ್ಲಿಕೆ ಮಾಡಿತು. ಹಿರಿಯ ಪತ್ರಕರ್ತರು ರಾಮೋಜಿ ರಾವ್ ಅವರ ಬದ್ದತೆ,ವೃತ್ತಿಪರತೆಯೊಂದಿಗೆ ತಮ್ಮ ಬದುಕನ್ನು ರೂಪಿಸಿಕೊಂಡ ಬಗೆಯನ್ನು ಪತ್ರಕರ್ತರು ನೆನಪಿಸಿಕೊಂಡರು.

Written by - Manjunath N | Last Updated : Jun 16, 2024, 04:27 PM IST
  • ಹಿರಿಯ ಪತ್ರಕರ್ತ ನರೇಂದ್ರ ಪುಪ್ಪಳ ಮಾತನಾಡಿ, ದಶಕದ ಕಾಲ ರಾಮೋಜಿ ರಾವ್ ಅವರ ಜೊತೆ ಹತ್ತಿರದಲ್ಲಿ ಕೆಲಸ ಮಾಡಿದ ಖುಷಿ ಇದೆ
  • ಉದ್ಯಮದ ಒತ್ತಡದಲ್ಲಿಯೂ ಅವರು ಸುದ್ದಿ, ಸಂಪಾದಕೀಯ, ಮಾಧ್ಯಮ ಸಂಸ್ಥೆಯನ್ನು ನಿರ್ಲಕ್ಷ್ಯ ಮಾಡಲಿಲ್ಲ, ಜೀವನ ಎನ್ನುವುದು ಪ್ರಯಾಣ
  • ರಾಮೋಜಿ ಸರ್ ಜೀವನದಲ್ಲಿ ನಾವೆಲ್ಲಾ ಪ್ರಯಾಣಿಸಿದ ಖುಷಿ ಇದೆ ಎಂದರು
ಪತ್ರಿಕೋದ್ಯಮದ ದಿಗ್ಗಜ ರಾಮೋಜಿ ರಾವ್ ಅವರಿಗೆ ಈಟಿವಿ ಬಳಗದಿಂದ ನುಡಿನಮನ title=

ಬೆಂಗಳೂರು: ಮಾಧ್ಯಮ ದೊರೆ,ಈನಾಡು ಮುಖ್ಯಸ್ಥ,ರಾಮೋಜಿ ಸಮೂಹ ಸಂಸ್ಥೆಗಳ ಸಂಸ್ಥಾಪಕ ರಾಮೋಜಿ ರಾವ್ ನಿಧನಕ್ಕೆ ಈಟಿವಿ ಬಳಗ ಕಂಬನಿ ಮಿಡಿದಿದ್ದು ನುಡಿನಮದ ಮೂಲಕ ಶ್ರದ್ದಾಂಜಲಿ ಸಲ್ಲಿಕೆ ಮಾಡಿತು. ಹಿರಿಯ ಪತ್ರಕರ್ತರು ರಾಮೋಜಿ ರಾವ್ ಅವರ ಬದ್ದತೆ,ವೃತ್ತಿಪರತೆಯೊಂದಿಗೆ ತಮ್ಮ ಬದುಕನ್ನು ರೂಪಿಸಿಕೊಂಡ ಬಗೆಯನ್ನು ಪತ್ರಕರ್ತರು ನೆನಪಿಸಿಕೊಂಡರು.

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಈಟಿವಿ ಬಳಗದವತಿಯಿಂದ ಈನಾಡು ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ರಾಮೋಜಿ ರಾವ್ ಅವರಿಗೆ ನುಡಿ ನಮನ ಕಾರ್ಯಕ್ರಮ ನಡೆಸಲಾಯಿತು.ಈಟಿವಿಯಲ್ಲಿ ಕೆಲಸ ಮಾಡಿದ್ದ ಹಿರಿಯ ಪತ್ರಕರ್ತರು ರಾಮೋಜಿ ರಾವ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೌನಾಚರಿಸಿ ಶ್ರದ್ದಾಂಜಲಿ ಸಲ್ಲಿಸಿದರು. ನಂತರ ನುಡಿನಮನದ ಮೂಲಕ ರಾಮೋಜಿ ರಾವ್ ಅವರೊಂದಿಗೆ ಕಳೆದ ಕ್ಷಣಗಳು, ಅವರ ಸಾಧನತೆಗಳು, ವೃತ್ತಿಪರತೆಗೆ ಸಿಗುತ್ತಿದ್ದ ಪ್ರೋತ್ಸಾಹ, ಸಂಪಾದಕೀಯದಲ್ಲಿ ಹಸ್ತಕ್ಷೇಪ ಮಾಡದಿರುವುದು ಸೇರಿದಂತೆ ಮಾಧ್ಯಮವನ್ನು ಯಶಸ್ಸಿನ ಉತ್ತುಂಗಕ್ಕೆ ಕೊಂಡೊಯ್ದ ಪರಿಯನ್ನು ಸ್ಮರಿಸಿದರು.

ಇದನ್ನು ಓದಿ : CM Oath Ceremony : ಆಂಧ್ರಪ್ರದೇಶದಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಚಿವರು, ಸಂಪೂರ್ಣ ಪಟ್ಟಿ ಇಲ್ಲಿದೆ

ಹಿರಿಯ ಪತ್ರಕರ್ತ ರಾಮಕೃಷ್ಣ ಉಪಾಧ್ಯಾಯ ಮಾತನಾಡಿ, ರಾಮೋಜಿ ರಾವ್ ಅವರು ನಿಜವಾಗಿಯೂ ನಮಗೆಲ್ಲಾ ಅನ್ನದಾತರೇ ಆಗಿದ್ದರು, ಖಾಸಗಿ ಮಾಧ್ಯಮದಲ್ಲಿ ರೈತರಿಗಾಗಿ ಅನ್ನದಾತದಂತಹ ಕಾರ್ಯಕ್ರಮ ಮಾಡಿದ್ದು ಇವರೇ ಮೊದಲ ಇವರೇ ಕೊನೆ,  ಉಪ್ಪಿನ ಕಾಯಿಯಿಂದ ಮಾಧ್ಯಮದವರೆಗೂ ಹಲವು ಕ್ಷೇತ್ರಗಳಲ್ಲಿ ಯಶಸ್ವಿಯಾಗಿದ್ದರು, ಪತ್ರಕರ್ತರೂ ಆಗಿ ಪತ್ರಿಕಾ ಹಿನ್ನಲೆ ಇದ್ದ ಕಾರಣ ಮಾಧ್ಯಮ ನಡೆಸಲು ಪರಿಪಕ್ವತೆ ಇತ್ತು,ಹಾಗಾಗಿ ಅವರ ಚಾನೆಲ್ ಯಾವ ರೀತಿ ಇರಬೇಕು ಎನ್ನುವ ಕಲ್ಪನೆ ಇತ್ತು, ನಾನು ಆಂಗ್ಲ ಮಾಧ್ಯಮದ ಪತ್ರಕರ್ತನಾಗಿದ್ದರೂ ನನಗೆ ಈಟಿವಿ ಕನ್ನಡದ ಆರಂಭದ ವೇಳೆ ನನಗೆ ಆಹ್ವಾನ ಬಂತು, ಬೆಂಗಳೂರು ಡೆಸ್ಕ್ ಅಗತ್ಯತೆ ಪರಿಗಣಿಸಿ ಡೆಸ್ಕ್ ರಚಿಸಿದರು, ನಮಗೆ ಆರಂಭದಲ್ಲೇ ರಾಜ್ ಅಪರಹರಣ ಎದುರಾಯ್ತು, ಇಂತಹ ಸಂದರ್ಭದಲ್ಲಿ ಚಾನೆಲ್ ಆರಂಭ ಬೇಡ ಎಂದು ರಾಜ್ ಬಿಡುಗಡೆವರೆಗೂ ನಾವು ಡೆಮ್ಮಿ ಬುಲೆಟಿನ್ ರನ್ ಮಾಡಿದೆವು,ರಾಜ್ ಬಿಡುಗಡರ ನಂತರ ನಾವು ಆರಂಭಿಸಿದೆವು, ರಾಮೋಜಿರಾವ್ ನಿತ್ಯ ಮಾಧ್ಯಮ ನಿರ್ವಹಣೆಯ ಮಾನಿಟರಿಂಗ್ ಮಾಡುತ್ತಿದ್ದರು, 30 ನಿಮಿಷದ ಬುಲೆಟಿನ್ ಗೆ 40 ಸುದ್ದಿ ಬಳಸಬೇಕಿತ್ತು,ಅವರ ತಂಡದಲ್ಲಿ ಕೆಲಸ ಮಾಡಿದ್ದಕ್ಕೆ ಹೆಮ್ಮೆ ಇದೆ.ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ ಎಲ್ಲ ಪರಿಶೀಲನೆ ನಡೆಸುತ್ತಿದ್ದರು, ಅಂದು ಸುದ್ದಿ ರಿಪೀಟ್ ಆಗುವಂತಿರಲಿಲ್ಲ, ಹೊಸತನ ಇರಬೇಕಿತ್ತು,ಇಂದಿನ ಟಿವಿ ಮಾಧ್ಯಮಗಳಲ್ಲಿ ಅದು ಮಿಸ್ ಎನಿಸುತ್ತಿದೆ ಎಂದು ಸ್ಮರಿಸಿದರು.

No description available.

ಹಿರಿಯ ಪತ್ರಕರ್ತ ನರೇಂದ್ರ ಪುಪ್ಪಳ ಮಾತನಾಡಿ, ದಶಕದ ಕಾಲ ರಾಮೋಜಿ ರಾವ್ ಅವರ ಜೊತೆ ಹತ್ತಿರದಲ್ಲಿ ಕೆಲಸ ಮಾಡಿದ ಖುಷಿ ಇದೆ, ಉದ್ಯಮದ ಒತ್ತಡದಲ್ಲಿಯೂ ಅವರು ಸುದ್ದಿ, ಸಂಪಾದಕೀಯ,ಮಾಧ್ಯಮ ಸಂಸ್ಥೆಯನ್ನು ನಿರ್ಲಕ್ಷ್ಯ ಮಾಡಲಿಲ್ಲ, ಜೀವನ ಎನ್ನುವುದು ಪ್ರಯಾಣ, ರಾಮೋಜಿ ಸರ್ ಜೀವನದಲ್ಲಿ ನಾವೆಲ್ಲಾ ಪ್ರಯಾಣಿಸಿದ ಖುಷಿ ಇದೆ ಎಂದರು.

ಹಿರಿಯ ಪತ್ರಕರ್ತ ಶಿವಶಂಕರ್ ಮಾತನಾಡಿ, ರಾಮೋಜಿ ರಾವ್ ಅವರು ಸಾಮಾಜಿಕ ಮೌಲ್ಯಕ್ಕೆ ಆಧ್ಯತೆ ಕೊಟ್ಟಿದ್ದರು, ಬಳಸುವ ಭಾಷೆ, ವಿಷಯಗಳು ಯಾವ ರೀತಿ ಇರಬೇಕು ಎನ್ನುವ ವಿಚಾರದಲ್ಲಿ ಸ್ಪಷ್ಟತೆ ಇತ್ತು, ಆ ಕಾರಣಕ್ಕೆ ಈಟಿವಿಯಲ್ಲಿ ಬಂದ ಸುದ್ದಿ ಸತ್ಯ ಎನ್ನುವ ಖಚಿತತ ಸಮಾಜದಲ್ಲಿ ಇತ್ತು, ಸಾಮಾಜಿಕ ಬದ್ದತೆ ಕಾರಣಕ್ಕಾಗಿಯೇ ಕೆಲ ಜಾಹೀರಾತುಗಳನ್ನು ತಿರಸ್ಕಾರ ಮಾಡುತ್ತಿದ್ದರು, ನಿಷ್ಟೆ ಮತ್ತು ನಿಷ್ಟಾಂತರನ್ನು ಇಷ್ಟಪಡುತ್ತಿದ್ದರು ಆದರೆ ಈನಾಡು ಹೇಗಿರಬಹುದಿತ್ತೋ ಹಾಗೆ ಇರದಿರುವುದಕ್ಕೆ ಅವರ ಸುತ್ತ ಇದ್ದವರು ಎಷ್ಟು ನಿಷ್ಟರಾಗಿದ್ದರು ಎನ್ನುವುದೇ ಮುಖ್ಯ ಎಂದು ಅವರ ಕನಸುಗಳು ಪೂರ್ಣ ಸಾಕಾರಗೊಳ್ಳದಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.

ಹಿರಿಯ ಸುದ್ದಿವಾಚಕಿ ರಾಧಿಕಾ ರಾಣಿ ಮಾತನಾಡಿ, ನಮ್ಮ ಭಾಗ್ಯದ ಬಾಗಿಲು ತೆರೆದ ದೇವರು ರಾಮೋಜಿರಾವ್, ನಮಗೆ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಈಟಿವಿಯಲ್ಲಿನ ಕೆಲ ಎಲ್ಲ ಕೂಡ ಹೊಸದೇ ಆಗಿತ್ತು, ಜೀವನದ ಪಾಠ ನಮಗೆ ಫಿಲ್ಮ್ ಸಿಟಿಯಲ್ಲಿ ಸಿಕ್ಕಿತ್ತು, ಇದಕ್ಕೆಲ್ಲಾ ರಾಮೋಜಿ ರಾವ್ ಸರ್ ಅವರು ನೀಡಿದ ಪ್ರೋತ್ಸಾಹ ಕಾರಣ ಎಂದು ಸ್ಮರಿಸಿದರು. 

ಇದನ್ನು ಓದಿ : ತುಂಡು ಬಟ್ಟೆ ಬಿಟ್ಟು ಸೀರೆಯಲ್ಲಿ ಮಿಂಚಿದ ದೀಪಿಕಾ! ಆಹಾ.. ಕನ್ನಡತಿ ಎಂದ ಫ್ಯಾನ್ಸ್

ಹಿರಿಯ ಪತ್ರಕರ್ತ ಸಮೀವುಲ್ಲ ಮಾತನಾಡಿ,ಹೊಸತನ, ಪ್ರಯೋಗಶೀಲತೆಗೆ ರಾಮೋಜಿರಾವ್ ಉತ್ತಮ ಉದಾಹರಣೆ, ಸಿನಿಮಾ, ಚಾನೆಲ್ ಎಲ್ಲವೂ ಪ್ರಯೋಗಗಳೇ ಆಗಿದ್ದವು, ಹೊಸತನದಲ್ಲೇ ಇರುತ್ತಿದ್ದವು,ಅವರೊಬ್ಬ ಮಹಾತ್ವಾಕಾಂಕ್ಷೆಯ ಕನಸುಗಾರರಾಗಿದ್ದರು ಎಂದರು.

ಹಿರಿಯ ಪತ್ರಕರ್ತ ರವಿಗೌಡ ಮಾತನಾಡಿ, ಉದ್ಯೋಗಿಗಳ ಕಷ್ಟದಲ್ಲಿ ರಾಮೋಜಿ ರಾವ್ ಅವರ ಸದಾ ನಿಲ್ಲುತ್ತಿದ್ದರು, ನಾನು ಈಟಿವಿ ಭಾರತ್ ಬಿಟ್ಟು ಬೇರೆ ಸಂಸ್ಥೆ ಸೇರುವ ವೇಳೆ ಅವರನ್ನು ಭೇಟಿಯಾಗಿ ಮತ್ತೊಂದು ಅವಕಾಶದ ಬಗ್ಗೆ ಹೇಳಿದಸಗ ಖುಷಿಯಿಂದ ಸಿಹಿ ಕೊಟ್ಟು ಬೆನ್ನು ತಟ್ಟಿ ಸಂಸ್ಥೆಯ ಬಾಗಿಲು ತೆರೆದಿದೆ ಎನ್ನುವ ಅಭಯದೊಂದಿಗೆ ಕಳಿಸಿಕೊಟ್ಟಿದ್ದರು ಎಂದು ಸ್ಮರಿಸಿದರು.

ಈಟಿವಿ ಭಾರತ್ ಬೆಂಗಳೂರು ಬ್ಯೂರೋ ಮುಖ್ಯಸ್ಥ ಸೋಮಶೇಖರ್ ಕವಚೂರು ಮಾತನಾಡಿ, ಮಾಧ್ಯಮದಲ್ಲಿ ಮೌಲ್ಯಗಳ ಜೊತೆಗೆ ಕನ್ನಡದ ಬಗ್ಗೆ ಹೆಚ್ಚಿನ ಕಾಳಜಿ ರಾಮೋಜಿ ರಾವ್ ಅವರಿಗೆ ಇತ್ತು, ಇಡೀ ಮಾಧ್ಯಮ ಸಂಸ್ಥೆಯನ್ನು ಗುಣಮಟ್ಟದಲ್ಲಿ ಮೊದಲ ಸ್ತರದಲ್ಲಿ ಇರುವಂತೆ ನೋಡಿಕೊಂಡಿದ್ದರು,ಎಲ್ಲ ಪ್ರಯತ್ನದಲ್ಲಿಯೂ ಅವರ ಯಶಸ್ವಿಯಾಗಿದ್ದರು, ಈಟಿವಿ ಭಾರತ್ ಅವರ ಕನಸು ಇದೂ ಕೂಡ ಸಫಲತೆಯ ಹಾದಿಯಲ್ಲಿ ಸಾಗುತ್ತಿದೆ ಅವರು ಮತ್ತಷ್ಟು ಕಾಲ ಇರಬೇಕಿತ್ತು ಎನಿಸುತ್ತಿದೆ ಎನ್ನುತ್ತಾ ರಾಮೋಜಿ ಮತ್ತೆ ಹುಟ್ಟಿ ಬರಲಿ ಎನ್ನುವ ಆಶಯ ವ್ಯಕ್ತಪಡಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News