Karnataka BJP: ಬೆಂಕಿಯಿಲ್ಲದೆ ಹೊಗೆಯಾಡುವುದೇ? 'ಕೈ' ನಾಯಕಿಗೆ ಟಕ್ಕರ್ ನೀಡಿದ ಬಿಜೆಪಿ!

ಬಿಜೆಪಿ ಕಾಂಗ್ರೆಸ್ ಮುಖಂಡರಿಗೆ ಟಕ್ಕರ್ ನೀಡಿದೆ.

Last Updated : Mar 16, 2021, 05:29 PM IST
  • ಸಿ.ಡಿ. ಪ್ರಕರಣ ದಿನದಿಂದ ದಿನಕ್ಕೆ ಸಾಕಷ್ಟು ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು.
  • ಸಿ.ಡಿ. ಪ್ರಕರಣದಲ್ಲಿ ನಾನಾ ಹೆಸರುಗಳು ಕೇಳಿಬರುತ್ತಿವೆ.
  • ಬಿಜೆಪಿ ಕಾಂಗ್ರೆಸ್ ಮುಖಂಡರಿಗೆ ಟಕ್ಕರ್ ನೀಡಿದೆ.
Karnataka BJP: ಬೆಂಕಿಯಿಲ್ಲದೆ ಹೊಗೆಯಾಡುವುದೇ? 'ಕೈ' ನಾಯಕಿಗೆ ಟಕ್ಕರ್ ನೀಡಿದ ಬಿಜೆಪಿ! title=

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ರಾಸಲೀಲೆ ಸಿ.ಡಿ. ಪ್ರಕರಣ ದಿನದಿಂದ ದಿನಕ್ಕೆ ಸಾಕಷ್ಟು ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಪ್ರಕರಣದಲ್ಲಿ ನಾನಾ ಹೆಸರುಗಳು ಕೇಳಿಬರುತ್ತಿವೆ.

ಸಿ.ಡಿ. ಪ್ರಕರಣ ಕುರಿತಂತೆ ಶಿವಮೊಗ್ಗದಲ್ಲಿ ಇತ್ತೀಚಿಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್(DK Shivakumar), ನನ್ನ ವಿರುದ್ಧ ಹಿಂದೆ ಮಾಡಿದ್ದ ಷಡ್ಯಂತ್ರಗಳು ಈಗಲೂ ಮುಂದುವರೀತಾ ಇದೆ. ಸಿಡಿ ಪ್ರಕರಣದಲ್ಲೂ ನನ್ನನ್ನು ಸಿಲುಕಿಸಲು ನೋಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.

HD Revanna: '2023ರಲ್ಲಿ ಹೆಚ್‌ಡಿಕೆ ಸಿಎಂ: ಕುಮಾರಸ್ವಾಮಿ ಬಳಿ ಇದ್ದ ಗ್ರಹಗಳು ಈಗ ಡಿಕೆಶಿ ಬಳಿ'

ಮತ್ತೊಂದೆಡೆ ಹುಬ್ಬಳ್ಳಿಯಲ್ಲಿ ಕೆಲ ದಿನಗಳ ಹಿಂದೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್(Lakshmi Hebbalkar) ಸಿಡಿ ಪ್ರಕರಣದಲ್ಲಿ ನನ್ನ ಹೆಸರು ತರೋದು ಏಕೆ ಎಂದು ಪ್ರಶ್ನಿಸಿದ್ದರು.

Karnataka BJP: CD ಪ್ರಕರಣದ ಬಗ್ಗೆ ಬಿಜೆಪಿಯಿಂದ 'ಪ್ರಪ್ರಥಮ' ಭಾರಿಗೆ ಅಧಿಕೃತ ಹೇಳಿಕೆ!

ಈ ಹೇಳಿಕೆಗಳನ್ನೆ ಗುರಿಯಾಗಿಟ್ಟುಕೊಂಡು ಇದೀಗ ಬಿಜೆಪಿ ಕಾಂಗ್ರೆಸ್(Congress) ಮುಖಂಡರಿಗೆ ಟಕ್ಕರ್ ನೀಡಿದೆ. ನನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎಂದು ಮಹಾನಾಯಕರೊಬ್ಬರು ಹೇಳಿದ್ದಾರೆ. ಈ ಪ್ರಕರಣದಲ್ಲಿ ನನ್ನ ಹೆಸರು ಯಾಕೆ ಬರುತ್ತಿದೆ. ಗೊತ್ತಾಗುತ್ತಿಲ್ಲ ಎಂದು ಮಹಾನಾಯಕಿಯೊಬ್ಬರು ಹೇಳಿದ್ದಾರೆ. ಏನಿದೆಲ್ಲಾ? ಬೆಂಕಿಯಿಲ್ಲದೆ ಹೊಗೆಯಾಡುವುದೇ? ಎಂದು ಪ್ರಶ್ನಿಸಿದ್ದು, ಪಕ್ಷ ತೊರೆದವರ ವಿರುದ್ಧ ಕಾಂಗ್ರೆಸ್ ಹಗೆತನ ಸಾಧಿಸುತ್ತಿದೆ ಎಂದು ಟ್ವಿಟರ್ ನಲ್ಲಿ ಆರೋಪಿಸಿದೆ.

KSRTC BUS: ಕರ್ನಾಟಕ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಮತ್ತೆ ಆರಂಭ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News