ದಕ್ಷಿಣ ಭಾರತದ ಪ್ರವಾಸೋದ್ಯಮ ಕ್ಷೇತ್ರ ಮುಂಚೂಣಿಗೆ ತರಲು 2 ದಿನಗಳ ಉತ್ಸವ: ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್

ದಕ್ಷಿಣ ಭಾರತದ ಏಳೂ ರಾಜ್ಯಗಳಲ್ಲಿ ಪ್ರವಾಸೋದ್ಯಮಕ್ಕೆ ವಿಫುಲವಾದ ಅವಕಾಶಗಳಿವೆ. ಇವುಗಳ ಅಭಿವೃದ್ದಿಗೆ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಹಾಗೂ ಪ್ರವಾಸೋದ್ಯಮಕ್ಕೆ ಇರುವಂತಹ ಅವಕಾಶಗಳ ಬಗ್ಗೆ ಪ್ರಚುರ ಪಡಿಸುವ ಉದ್ದೇಶದಿಂದ ಎಫ್‌ಕೆಸಿಸಿಐ ಅವರ ಜೊತೆಗೂಡಿ ಈ ಉತ್ಸವವನ್ನ ಆಯೋಜಿಸಲಾಗಿದೆ.

Written by - Prashobh Devanahalli | Last Updated : Jun 12, 2024, 08:15 PM IST
    • ವಿಧಾನಸೌಧದಲ್ಲಿ ದಕ್ಷಿಣ ಭಾರತ ಉತ್ಸವದ ಲಾಂಛನ ಅನಾವರಣ
    • ಜೂನ್‌ 15 ಮತ್ತು 16 ರಂದು ಎರಡು ದಿನಗಳ ಕಾಲ ದಕ್ಷಿಣ ಭಾರತ ಉತ್ಸವ 2024
    • ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್‌ ಕೆ ಪಾಟೀಲ್‌ ಹೇಳಿಕೆ
ದಕ್ಷಿಣ ಭಾರತದ ಪ್ರವಾಸೋದ್ಯಮ ಕ್ಷೇತ್ರ ಮುಂಚೂಣಿಗೆ ತರಲು 2 ದಿನಗಳ ಉತ್ಸವ: ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್ title=
HK Patil

ಬೆಂಗಳೂರು: ವಿಶ್ವ ಪ್ರವಾಸೋದ್ಯಮ ಭೂಪಟದಲ್ಲಿ ದಕ್ಷಿಣ ಭಾರತದ ಏಳೂ ರಾಜ್ಯಗಳ ಪ್ರವಾಸೋದ್ಯಮ ಕ್ಷೇತ್ರದ ಅವಕಾಶಗಳನ್ನು ಮುಂಚೂಣಿಗೆ ತರುವ ನಿಟ್ಟಿನಲ್ಲಿ ಜೂನ್‌ 15 ಮತ್ತು 16 ರಂದು ಎರಡು ದಿನಗಳ ಕಾಲ ದಕ್ಷಿಣ ಭಾರತ ಉತ್ಸವ 2024ನ್ನು ಆಯೋಜಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್‌ ಕೆ ಪಾಟೀಲ್‌ ತಿಳಿಸಿದರು.

ಇಂದು ವಿಧಾನಸೌಧದಲ್ಲಿ ದಕ್ಷಿಣ ಭಾರತ ಉತ್ಸವದ ಲಾಂಛನವನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.

ಇದನ್ನೂ ಓದಿ: ದರ್ಶನ್ ಸೇರಿ ಎಲ್ಲಾ ಆರೋಪಿಗಳನ್ನು ಕರೆದೊಯ್ದು ಸ್ಥಳ ಮಹಜರು..!

ದಕ್ಷಿಣ ಭಾರತದ ಏಳೂ ರಾಜ್ಯಗಳಲ್ಲಿ ಪ್ರವಾಸೋದ್ಯಮಕ್ಕೆ ವಿಫುಲವಾದ ಅವಕಾಶಗಳಿವೆ. ಇವುಗಳ ಅಭಿವೃದ್ದಿಗೆ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಹಾಗೂ ಪ್ರವಾಸೋದ್ಯಮಕ್ಕೆ ಇರುವಂತಹ ಅವಕಾಶಗಳ ಬಗ್ಗೆ ಪ್ರಚುರ ಪಡಿಸುವ ಉದ್ದೇಶದಿಂದ ಎಫ್‌ಕೆಸಿಸಿಐ ಅವರ ಜೊತೆಗೂಡಿ ಈ ಉತ್ಸವವನ್ನ ಆಯೋಜಿಸಲಾಗಿದೆ. ಎರಡು ದಿನಗಳ ಕಾಲ ನಡೆಯಲಿರುವ ಉತ್ಸವದಲ್ಲಿ ಬಿ2ಬಿ ಮತ್ತು ಬಿ2ಜಿ ಅವಕಾಶಗಳ ಬಗ್ಗೆ ವಿಸ್ತ್ರುತ ಚರ್ಚೆಗೆ ವೇದಿಕೆಯನ್ನು ಕಲ್ಪಿಸಲಾಗುವುದು. ಈ ಉತ್ಸವದಲ್ಲಿ ದಕ್ಷೀಣಭಾರತದ 7 ರಾಜ್ಯಗಳೂ ಭಾಗವಹಿಸಲಿದ್ದು ಎಂಎಸ್‌ಎಂಇ ಉದ್ದಿಮೆದಾರರಿಗೆ ಇರುವಂತಹ ಹೂಡಿಕೆಯ ಅವಕಾಶಗಳನ್ನು ಪ್ರದರ್ಶಿಸಲಿದ್ದಾರೆ ಎಂದರು.

ದಕ್ಷಿಣ ಭಾರತದ ಪ್ರವಾಸೋದ್ಯಮ ಕ್ಷೇತ್ರದಲ್ಲಿರುವಂತಹ ಸಮೃದ್ದ ಸಾಂಸ್ಕೃತಿಕ, ಐತಿಹಾಸಿಕ, ಭೌಗೋಳಿಕ ಅವಕಾಶಗಳನ್ನು ಪ್ರಸ್ತುತಪಡಿಸುವ ಜೊತೆಯಲ್ಲಿಯೇ ಹೂಡಿಕೆಗೆ ಇರುವಂತಹ ಅವಕಾಶಗಳನ್ನು ಪ್ರದರ್ಶಿಸುವುದು ಈ ಉತ್ಸವದ ಪ್ರಮುಖ ಗುರಿಯಾಗಿದೆ. ಈ ಮೂಲಕ ಈ ಏಳೂ ರಾಜ್ಯಗಳಲ್ಲಿ ಉದ್ಯೋಗವನ್ನು ಸೃಷ್ಟಿಸುವುದು ಉದ್ದೇಶವಾಗಿದೆ. ಸೆಮಿನಾರ್‌ಗಳೂ, ವರ್ಕ್‌ಶಾಪ್ಸ್‌, ಇಂಟರಾಕ್ಟಿವ್‌ ಸೆಷನ್ಸ್‌ ಗಳ ಮೂಲಕ ಇವುಗಳನ್ನು ಪ್ರಸ್ತುತಪಡಿಸಲಾಗುವುದು ಎಂದರು.

ಈಗಾಗಲೇ ಚಿಕ್ಕಮಗಳೂರು, ಮೈಸೂರು, ಉಡುಪಿ, ಹೈದರಾಬಾದ್‌, ಚೆನ್ನೈ, ವಿಜಯವಾಡ ಮತ್ತು ಕೊಚ್ಚಿಯಲ್ಲಿ ರೋಡ್‌ಶೋಗಳನ್ನು ನಡೆಸಲಾಗಿದೆ. ಈ ರೋಡ್‌ ಶೋಗಳಲ್ಲಿ ಭಾಗವಹಿಸಿದ್ದ ಎಸ್‌ಎಂಇ ಉದ್ದಿಮೆದಾರರು ಈಗಾಗಲೇ ಟ್ರಾವೆಲ್‌ ಮತ್ತು ಟೂರಿಸಂ ಕ್ಷೇತ್ರದಲ್ಲಿ ಹೂಡಿಕೆಗೆ ಮುಂದಾಗಿದ್ದಾರೆ. ಈಗಾಗಲೇ ಈ ರೋಡ್‌ ಶೋಗಳ ಮೂಲಕ ಸುಮಾರು 500 ಕೋಟಿ ರೂಪಾಯಿಗಳಷ್ಟು ಬಂಡವಾಳ ಹೂಡಿಕೆಯ ಆಸಕ್ತಿ ವ್ಯಕ್ತವಾಗಿದ್ದು ಈ ಎರಡು ದಿನಗಳ ಉತ್ಸವದ ಸಮಯದಲ್ಲಿ ಇನ್ನೂ 500 ಕೋಟಿ ರೂಪಾಯಿಗಳಷ್ಟು ಬಂಡವಾಳ ಹೂಡಿಕೆಯ ಪ್ರಸ್ತಾವನೆಯ ಬರುವಂತಹ ನಿರೀಕ್ಷೆಯನ್ನು ನಾವು ಹೊಂದಿದ್ದೇವೆ ಎಂದರು.

ಅರಮನೆ ಮೈದಾನದಲ್ಲಿ ಈ ಉತ್ಸವವನ್ನು ಆಯೋಜಿಸಲಾಗಿದ್ದು ಎಫ್‌’ಕೆಸಿಸಿಐ ಸಂಸ್ಥೇಯ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಈ ಉತ್ಸವ ದೇಶ ವಿದೇಶಗಳ ಉದ್ದಿಮೆದಾರರನ್ನು ಸೆಳೆಯಲಿದೆ ಎಂದರು.

ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಬಂಡವಾಳದ ನಿರೀಕ್ಷೆ:

ಈ ಉತ್ಸವದಲ್ಲಿ ನಮ್ಮ ಕರ್ನಾಟಕ ರಾಜ್ಯದಲ್ಲಿರುವಂತಹ ಪ್ರವಾಸೋದ್ಯಮ ಕ್ಷೇತ್ರದಲ್ಲಿರುವಂತಹ ಹೂಡಿಕೆಯ ಅವಕಾಶಗಳನ್ನು ಪ್ರಸ್ತುತಪಡಿಸಲಾಗುವುದು. ರಾಜ್ಯದ ಹಂಪಿ, ಮೈಸೂರು, ಹಾಸನ, ಐಹೋಳೆಯಂತಹ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಅಭಿವೃದ್ದಿಗೆ ಅವಕಾಶವಿದೆ. ಅಲ್ಲದೇ, ನಾವು ಪಬ್ಲಿಕ್‌ ಪ್ರೈವೇಟ್‌ ಪಾರ್ಟ್‌ನರ್‌ಶಿಪ್‌ ಮೂಲಕ ಇವುಗಳನ್ನು ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಒತ್ತು ನೀಡುತ್ತಿದ್ದೇವೆ. ಉತ್ತರ ಕರ್ನಾಟಕದ ಭಾಗದಲ್ಲಿ ಸುಮಾರು 311 ಏಕರೆಗಳಷ್ಟು ಜಾಗವಿದ್ದು ಹಾಗೂ ದಕ್ಷಿಣ ಭಾಗದಲ್ಲಿ 77 ಏಕರೆಗಳಷ್ಟು ಅಭಿವೃದ್ದಿಗೆ ಅವಕಾಶವಿದೆ. ಇಲ್ಲಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಹಲವಾರು ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಬಹುದಾಗಿದೆ. ರಾಜ್ಯದ 18 ಜಲಾಶಯಗಳಲ್ಲಿ ಸಾಹಸ ಪ್ರವಾಸೋದ್ಯಮ ಅಭಿವೃದ್ದಿ ಪಡಿಸಲು ನಾವು ಮುಂದಾಗಿದ್ದೇವೆ. ಅಲ್ಲದೇ, ರಾಜ್ಯದಲ್ಲಿ 320 ಕಿಲೋಮೀಟರ್‌ ಕಡಲ ತೀರವಿದ್ದು, ಅದರಲ್ಲಿ 40 ಸ್ಥಳಗಳನ್ನು ಸಮಗ್ರ ಅಭಿವೃದ್ದಿ ಪಡಿಸುವುದು ನಮ್ಮ ಗುರಿಯಾಗಿದೆ. ಈ ನಿಟ್ಟಿನಲ್ಲಿ ಹಲವಾರು ಸಂಸ್ಥೆಗಳೂ ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸಿವೆ. ಈ ಎಲ್ಲಾ ಕ್ಷೇತ್ರಗಳಲ್ಲೂ ಬಂಡವಾಳ ಹೂಡಿಕೆಗೆ ಇರುವ ಅವಕಾಶವನ್ನು ಈ ಉತ್ಸವದಲ್ಲಿ ಪ್ರಸ್ತುತಪಡಿಸಲಾಗುವುದು ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: ಜೇನಿನ ಜೊತೆ ಈ ಪುಡಿ ಬೆರೆಸಿ ನೆಕ್ಕಿದರೆ ತಕ್ಷಣವೇ ಶೀತ, ಕೆಮ್ಮು ಕಡಿಮೆಯಾಗುತ್ತೆ! ಜ್ವರಕ್ಕೂ ಇದೇ ರಾಮಬಾಣ

ಒಟ್ಟಾರೆಯಾಗಿ ಈ ಉತ್ಸವದ ಮೂಲಕ ಕರ್ನಾಟಕ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೆಚ್ಚಿನ ಬಂಡವಾಳ ಹೂಡಿಕೆಯನ್ನು ನಾವು ನಿರೀಕ್ಷಿಸುತ್ತಿದ್ದು, ಸಾವಿರ ಕೋಟಿಗಳಿಗೂ ಹೆಚ್ಚು ಬಂಡವಾಳ ಹೂಡಿಕೆಯ ಒಪ್ಪಂದಗಳು ಆಗುವ ನಿರೀಕ್ಷೆಯಿದೆ ಎಂದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News