ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರೇ ದಂಗೆ ಏಳಬೇಕು: ಬೆಲೆ ಏರಿಕೆ ವಿರುದ್ಧ ಎಚ್‌ಡಿಕೆ ಕಿಡಿ

HD Kumaraswamy Slams Congress Govt: ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲು ಬೆಲೆ ಏರಿಕೆ ಮಾಡಿದ್ದಾಗಿ ಕಾಂಗ್ರೆಸ್ ಸಚಿವರೇ ಒಪ್ಪಿಕೊಂಡಿದ್ದಾರೆ. ಯಾರದ್ದೋ ಯಾರಿಗೋ ದಾನ ಮಾಡ್ತಾರೆ ಅನ್ನೋ ಗಾದೆ ಮಾತಿನಂತೆ ಈ ಸರ್ಕಾರದ ಕತೆಯಾಗಿದೆ. ಜನರಿಂದಲೇ ದುಡ್ಡು ವಸೂಲಿ ಮಾಡಿ ಜನರಿಗೆ ನೀಡಲು ಸಿದ್ದರಾಮಯ್ಯರ ಸರ್ಕಾರ ಮುಂದಾಗಿದೆ ಎಂದು ಕುಟುಕಿದರು.

Written by - Puttaraj K Alur | Last Updated : Jun 16, 2024, 06:48 PM IST
  • ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಜನರೇ ದಂಗೆ ಏಳಬೇಕು
  • ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆ ವಿರುದ್ಧ ಕುಮಾರಸ್ವಾಮಿ ಆಕ್ರೋಶ
  • ಜನರಿಂದಲೇ ದುಡ್ಡು ವಸೂಲಿ ಮಾಡಿ ಜನರಿಗೆ ನೀಡುತ್ತಿರುವ ಕಾಂಗ್ರೆಸ್ ಸರ್ಕಾರ
ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರೇ ದಂಗೆ ಏಳಬೇಕು: ಬೆಲೆ ಏರಿಕೆ ವಿರುದ್ಧ ಎಚ್‌ಡಿಕೆ ಕಿಡಿ title=
ಕಾಂಗ್ರೆಸ್‌ ಸರ್ಕಾರದ ವಿರುದ್ಧ ಎಚ್‌ಡಿಕೆ ಆಕ್ರೋಶ!

HD Kumaraswamy Slams Congress Govt: ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆ ಮಾಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಜನರೇ ದಂಗೆ ಏಳಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದಿಚುಂಚನಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆ ವಿರುದ್ಧ ಬಿಜೆಪಿ-ಜೆಡಿಎಸ್ ಪಕ್ಷಗಳು ಪ್ರತಿಭಟನೆ ಮಾಡುವುದಕ್ಕಿಂತ ಸರ್ಕಾರದ ದುರಾಡಳಿತದ ವಿರುದ್ಧ ಜನ ದಂಗೆ ಎದ್ದರೆ ಅವರಿಗೆ ಬುದ್ದಿ ಬರಬಹುದು ಅಂತಾ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಆರೋಪಿಗಳ ಕಂಪ್ಲೀಟ್‌ ಡಿಟೈಲ್ಸ್‌

ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲು ಬೆಲೆ ಏರಿಕೆ ಮಾಡಿದ್ದಾಗಿ ಕಾಂಗ್ರೆಸ್ ಸಚಿವರೇ ಒಪ್ಪಿಕೊಂಡಿದ್ದಾರೆ. ಯಾರದ್ದೋ ಯಾರಿಗೋ ದಾನ ಮಾಡ್ತಾರೆ ಅನ್ನೋ ಗಾದೆ ಮಾತಿನಂತೆ ಈ ಸರ್ಕಾರದ ಕತೆಯಾಗಿದೆ. ಜನರಿಂದಲೇ ದುಡ್ಡು ವಸೂಲಿ ಮಾಡಿ ಜನರಿಗೆ ನೀಡಲು ಸಿದ್ದರಾಮಯ್ಯರ ಸರ್ಕಾರ ಮುಂದಾಗಿದೆ ಎಂದು ಕುಟುಕಿದರು.

ಆದಿಚುಂಚನಗಿರಿಯಲ್ಲಿ ಕಾಲಭೈರವ ದೇವರ ದರ್ಶನ ಮಾಡಿದ ಕುಮಾರಸ್ವಾಮಿ, ʼನಾನು ಕಾಲಭೈರವ ದೇವರ ದರ್ಶನ ಮುಗಿಸಿ ಶ್ರೀಗಳ ಆಶೀರ್ವಾದ ಪಡೆದಿದ್ದೇನೆ. ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಸಿಗುವಂತೆ ದೇವರಲ್ಲಿ ಬೇಡಿಕೊಂಡಿದ್ದೇನೆ. ಒಕ್ಕಲಿಗ ಸಮಾಜ ಹಾಗೂ ರಾಜ್ಯಕ್ಕೆ ಗೌರವ ತರುವಂತಹ ಕೆಲಸ ಮಾಡಲು ಶಕ್ತಿ ಕೊಡುವಂತೆ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ. ಕೇಂದ್ರ ಸರ್ಕಾರದಲ್ಲಿ ಎರಡು ಕಠಿಣ ಇಲಾಖೆಗಳ ಜವಾಬ್ದಾರಿ ದೊರೆತಿದೆ. ರಾಜ್ಯಕ್ಕೆ ಉತ್ತಮ ಕೊಡುಗೆ ನೀಡುವ ಅವಕಾಶವೂ ಸಿಕ್ಕಿದೆ. ಎಷ್ಟು ಸಾಧ್ಯವೋ ಅಷ್ಟು ಒಳ್ಳೆಯದು ಮಾಡುತ್ತೇನೆ ಅಂತಾ ಹೇಳಿದರು.

ಇದನ್ನೂ ಓದಿ: ಪವಿತ್ರಾ ಗೌಡ ಭೇಟಿಯಾಗಲು ಠಾಣೆಗೆ ಬಂದ ಸಹೋದರಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
   

Trending News