ಕಾಂಗ್ರೆಸ್ಸಿಗರಿಗೆ ಚೊಂಬು ಹಿಡಿದು ಅಡ್ದಾಡೋದು ಅಭ್ಯಾಸವಾಗಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೇವಡಿ

ಹುಬ್ಬಳ್ಳಿ: ಯುಪಿಎ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ ನಡೆಸಿ ದೇಶದ ಪ್ರತಿಯೊಬ್ಬರ ಕೈಗೂ ಚೊಂಬು ಕೊಟ್ಟಿದ್ದಾರೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ಸೋಲಿಸಿದ್ದಲ್ಲದೆ, ಅವರ ವಿರುದ್ಧ ಗೆದ್ದವರಿಗೆ ಪದ್ಮವಿಭೂಷಣ ಕೊಟ್ಟು ಸತ್ಕರಿಸುವ ಮೂಲಕ ದಲಿತರ ಕೈಗೆ ಚೊಂಬು ಕೊಟ್ಟವರು ಕಾಂಗ್ರೆಸ್ಸಿಗರು ಎಂದು ಸಚಿವ ಜೋಶಿ ಹರಿಹಾಯ್ದರು.

Written by - Prashobh Devanahalli | Last Updated : Apr 26, 2024, 06:54 PM IST
    • ಜನರ ಕೈಗೆ ಚೊಂಬು ಕೊಡೋದನ್ನು ಕಾಂಗ್ರೆಸ್ ನಿಲ್ಲಿಸಲಿಲ್ಲ
    • ಪರಿಣಾಮ ಜನರೂ ಕಾಂಗ್ರೆಸ್ಸಿಗರ ಕೈಗೆ ಚೊಂಬು ಕೊಡುತ್ತಾ ಬಂದರು
    • ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಲೇವಡಿ
ಕಾಂಗ್ರೆಸ್ಸಿಗರಿಗೆ ಚೊಂಬು ಹಿಡಿದು ಅಡ್ದಾಡೋದು ಅಭ್ಯಾಸವಾಗಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೇವಡಿ title=
File Photo

ಹುಬ್ಬಳ್ಳಿ: ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಜನರ ಕೈಗೆ ಚೊಂಬು ಕೊಡೋದನ್ನು ಕಾಂಗ್ರೆಸ್ ನಿಲ್ಲಿಸಲಿಲ್ಲ. ಪರಿಣಾಮ ಜನರೂ ಕಾಂಗ್ರೆಸ್ಸಿಗರ ಕೈಗೆ ಚೊಂಬು ಕೊಡುತ್ತಾ ಬಂದರು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಲೇವಡಿ ಮಾಡಿದರು.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ಸಿಗರಿಗೆ ಚೊಂಬು ಹಿಡಿದು ಅಡ್ಡಾಡೋದು ಅಭ್ಯಾಸವಾಗಿದೆ ಎಂದು ಟೀಕಿಸಿದ ಅವರು, ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ದೇಶದಲ್ಲಿ 14 ಕೋಟಿಗೂ ಅಧಿಕ ಶೌಚಗೃಹ ನಿರ್ಮಿಸಿ ಜನರು ಕೈಯಲ್ಲಿ ಚೊಂಬು ಹಿಡಿಯುವುದನ್ನು ನಿಲ್ಲಿಸಿದ್ದಿದ್ದಾರೆ ಎಂದರು.

ಇದನ್ನೂ ಓದಿ: ಡ್ಯಾನ್ಸ್ ನೋಡಿ ಲವ್ವಲ್ಲಿ ಬಿದ್ದ! ಮೊದಲ ನೋಟದಲ್ಲೇ ಕರ್ನಾಟಕದ ಈ ಬೆಡಗಿಗೆ ಮನಸೋತು ನಿಂತಲ್ಲೇ ಪ್ರಪೋಸ್ ಮಾಡಿದ ಟೀಂ ಇಂಡಿಯಾದ ಕ್ರಿಕೆಟಿಗನೀತ

ಜನರ ಕೈಗೆ ಚೊಂಬು ಕೊಟ್ಟ ಕಾಂಗ್ರೆಸ್:

ಯುಪಿಎ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ ನಡೆಸಿ ದೇಶದ ಪ್ರತಿಯೊಬ್ಬರ ಕೈಗೂ ಚೊಂಬು ಕೊಟ್ಟಿದ್ದಾರೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ಸೋಲಿಸಿದ್ದಲ್ಲದೆ, ಅವರ ವಿರುದ್ಧ ಗೆದ್ದವರಿಗೆ ಪದ್ಮವಿಭೂಷಣ ಕೊಟ್ಟು ಸತ್ಕರಿಸುವ ಮೂಲಕ ದಲಿತರ ಕೈಗೆ ಚೊಂಬು ಕೊಟ್ಟವರು ಕಾಂಗ್ರೆಸ್ಸಿಗರು ಎಂದು ಸಚಿವ ಜೋಶಿ ಹರಿಹಾಯ್ದರು.

ಇದೆಲ್ಲದರ ಪರಿಣಾಮ ಜನರೂ ನಿಮ್ಮ ಕೈಗೆ ಚೊಂಬು ಕೊಟ್ಟು ಕಳಿಸುತ್ತಿದ್ದಾರೆ. ದೇಶದ 20-25 ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಈಗ ಎರಡೇ ರಾಜ್ಯಗಳಲ್ಲಿ ಅಧಿಕಾರದಲ್ಲಿದೆ ಎಂದು ಕುಟುಕಿದರು.

ಇದನ್ನೂ ಓದಿ:  ತೆಂಗಿನೆಣ್ಣೆಗೆ ಈ ಹಣ್ಣಿನ ರಸ ಬೆರೆಸಿ ಹಚ್ಚಿ: ಚಿಟಿಕೆಯಲ್ಲಿ ಬಿಳಿಕೂದಲು ಶಾಶ್ವತವಾಗಿ ಕಡುಕಪ್ಪಾಗುವುದಲ್ಲದೆ ಮಾರುದ್ದ ಸೊಂಪಾಗಿ ಬೆಳೆಯುತ್ತೆ!

ಛತ್ತೀಸ್ಗಡ, ರಾಜಸ್ಥಾನ, ಮಧ್ಯಪ್ರದೇಶ ಹೀಗೆ ಎಲ್ಲೆಡೆಯೂ ಹೀನಾಯವಾಗಿ ಸೋಲಿಸಿ ವಿರೋಧ ಪಕ್ಷದ ಸ್ಥಾನದಲ್ಲೂ ಕುಳಿತುಕೊಳ್ಳದಂತೆ ಜನ ನಿಮ್ಮ ಕೈಗೆ ಚೊಂಬು ಕೊಟ್ಟಿದ್ದಾರೆ ನೆನಪಿಟ್ಟುಕೊಳ್ಳಿ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

 

Trending News