ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಸಚಿವ ಜೋಶಿ ತಿರುಗೇಟು

ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದೊಂದಿಗೆ ಮಾತನಾಡಿದ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ  (Union Parliamentary Minister Prahlada Joshi) , ಮಲ್ಲಿಕಾರ್ಜುನ್ ಖರ್ಗೆ ಅವರು ಮಾತನಾಡುವಾಗ ಸ್ವಲ್ಪ ಗಮನ ವಹಿಸುವುದು ಒಳಿತು ಎಂದು ತಿರುಗೇಟು ನೀಡಿದರು.

Written by - Prashobh Devanahalli | Edited by - Yashaswini V | Last Updated : Apr 5, 2024, 02:48 PM IST
  • ನಮ್ಮ ಸರ್ಕಾರ ಚೀನಾ ಭಾರತದ ಭೂಪ್ರದೇಶವನ್ನು ಪ್ರವೇಶಿಸಲು ಅನುಮತಿಸಲಿಲ್ಲ.
  • ಆದರೆ, 1962ರಲ್ಲಿ 34,000 ಚದರ ಕಿಲೋಮೀಟರ್ ಭೂಮಿಯನ್ನು ಚೀನಾ ಕಬಳಿಸಿದಾಗ ಅಫೀಮು ಸೇವಿಸಿದವರು ಯಾರು?
ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಸಚಿವ ಜೋಶಿ ತಿರುಗೇಟು title=

ಹುಬ್ಬಳ್ಳಿ: ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ್ ಖರ್ಗೆ (Mallikarjuna Kharge) ಅವರು ಮಾತನಾಡುವಾಗ ನಿಗಾ ವಹಿಸಬೇಕು ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ  (Union Parliamentary Minister Prahlada Joshi) ಸಲಹೆ ಮಾಡಿದರು.

ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದೊಂದಿಗೆ ಮಾತನಾಡಿದ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ  (Union Parliamentary Minister Prahlada Joshi) , ಮಲ್ಲಿಕಾರ್ಜುನ್ ಖರ್ಗೆ ಅವರು ಮಾತನಾಡುವಾಗ ಸ್ವಲ್ಪ ಗಮನ ವಹಿಸುವುದು ಒಳಿತು ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷರಾಗಿದ್ದರೂ ಮಲ್ಲಿಕಾರ್ಜುನ್  ಖರ್ಗೆ (Mallikarjun Kharge) ಅವರಿಗೆ ಏನು ಮಾತನಾಡುತ್ತಿದ್ದೇನೆ? ಎಂಬ ಅರಿವು ಇದ್ದಂತಿಲ್ಲ. ಪ್ರಧಾನಿ ಮೋದಿ ಅವರ ಬಗ್ಗೆ ಖರ್ಗೆ ಅದ್ಯಾವ ಭಾಷೆ ಬಳಸುತ್ತಿದ್ದಾರೆ? ಎಂದು ಜೋಶಿ ಪ್ರಶ್ನಿಸಿದರು.

ಇದನ್ನೂ ಓದಿ- ರಾಹುಲ್ ಗಾಂಧಿಗೆ ನಿಲ್ಲಾಕ್ ಒಂದ್ ಜಾಗ ಇಲ್ಲ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೇವಡಿ

ಚೀನಾ ಒಳ ನುಸುಳು ಕೋರರನ್ನು ತಡೆದಿದ್ದೇವೆ: 
ನಾವು ನಮ್ಮ ದೇಶದ ಗಡಿಗಳನ್ನು ಭದ್ರ ಮತ್ತು ಬಲಪಡಿಸಿದ್ದೇವೆ. ಚೀನಾ ಒಳ ನುಸುಳುಕೋರರನ್ನು ತಡೆದಿದ್ದೇವೆ. ಭವಿಷ್ಯದಲ್ಲಿನ ಅಕ್ರಮಣಕ್ಕೆ ಬ್ರೇಕ್ ಹಾಕಿದ್ದೇವೆ ಎಂದು ಹೇಳಿದರು. ಆದರೆ, ಅಕ್ಸಾಯ್ ಚಿನ್ ಅನ್ನು ಚೀನಾಕ್ಕೆ ಹಸ್ತಾಂತರಿಸಿದ ಸಂದರ್ಭವನ್ನು, ಕಾಂಗ್ರೆಸ್ ಇತಿಹಾಸವನ್ನು ಖರ್ಗೆ ಸ್ವಲ್ಪ ನೆನಪಿಸಿಕೊಳ್ಳಬೇಕು ಎಂದು ಜೋಶಿ ಪ್ರತ್ಯುತ್ತರ ನೀಡಿದರು.

ನಮ್ಮ ಸರ್ಕಾರ ಚೀನಾ ಭಾರತದ ಭೂಪ್ರದೇಶವನ್ನು ಪ್ರವೇಶಿಸಲು ಅನುಮತಿಸಲಿಲ್ಲ. ಆದರೆ, 1962ರಲ್ಲಿ 34,000 ಚದರ ಕಿಲೋಮೀಟರ್ ಭೂಮಿಯನ್ನು ಚೀನಾ ಕಬಳಿಸಿದಾಗ ಅಫೀಮು ಸೇವಿಸಿದವರು ಯಾರು? ಎಂದು ಕೇಂದ್ರ ಸಚಿವ ಜೋಶಿ ತಿರುಗೇಟು ನೀಡಿದರು.

ಚಿದಂಬರಂ ಹೇಳಿಕೆಗೆ ಕಿಡಿ :
ಬಿಜೆಪಿ ಬಗ್ಗೆ ಪಿ.ಚಿದಂಬರಂ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಜೋಶಿ, ನಾವು ನಾಶಪಡಿಸುತ್ತಿಲ್ಲ. ನಮ್ಮ ಪಕ್ಷವನ್ನು ಬಲಪಡಿಸುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ- ಚಿತ್ರದುರ್ಗ ಕಾಂಗ್ರೆಸ್ ಪಕ್ಷದ ಭದ್ರ ಕೋಟೆ. ನಮ್ಮ ಅಭ್ಯರ್ಥಿ ಚಂದ್ರಪ್ಪ 2 ಲಕ್ಷಕ್ಕೂ ಹೆಚ್ಚು ಅಂತರದಿಂದ ಗೆಲ್ತಾರೆ: ಸಿಎಂ

ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದು ಅವರ ಜವಾಬ್ದಾರಿ, ನಮ್ಮದಲ್ಲ. ಅವರ ಪಕ್ಷವನ್ನು ಬಲಪಡಿಸಿಕೊಳ್ಳಲಿ. ಅದು ಬಿಟ್ಟು ಬಿಜೆಪಿಯನ್ನು ದೂಷಿಸಬಾರದು ಎಂದು ಜೋಶಿ ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News