ಈ ಕ್ಷಣದಿಂದಲೇ ರಾಮಮಂದಿರ, ಅಯೋಧ್ಯೆ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ!

Ram Mandir Inauguration Invitation: ಅಯೋಧ್ಯೆ ಕಾರ್ಯಕ್ರಮದ ಆಹ್ವಾನ ತಿರಸ್ಕರಿಸುವುದಕ್ಕೆ ಕಾಂಗ್ರೆಸ್ ನೀಡಿರುವ ಕಾರಣವೇ ಹಾಸ್ಯಾಸ್ಪದ. ನಿಮ್ಮ ಮನಸಿನಲ್ಲಿದ್ದ ರಾಮ ವಿರೋಧ, ಹಿಂದು ವಿರೋಧ ಈಗ ಮತ್ತೆ ಬಹಿರಂಗವಾಗಿದೆ’ ಎಂದು ವಿ.ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Written by - Puttaraj K Alur | Last Updated : Jan 10, 2024, 09:30 PM IST
  • ರಾಮಮಂದಿರ ಉದ್ಘಾಟನಾ ಸಮಾರಂಭದ ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್ ನಾಯಕರು
  • ಅಯೋಧ್ಯೆ ಕಾರ್ಯಕ್ರಮದ ಆಹ್ವಾನ ತಿರಸ್ಕರಿಸುವುದಕ್ಕೆ ಕಾಂಗ್ರೆಸ್ ನೀಡಿರುವ ಕಾರಣವೇ ಹಾಸ್ಯಾಸ್ಪದ
  • ನಿಮ್ಮ ಮನಸಿನಲ್ಲಿದ್ದ ರಾಮ ವಿರೋಧ, ಹಿಂದು ವಿರೋಧ ಮತ್ತೆ ಬಹಿರಂಗವಾಗಿದೆ ಎಂದ ಸುನೀಲ್ ಕುಮಾರ್
ಈ ಕ್ಷಣದಿಂದಲೇ ರಾಮಮಂದಿರ, ಅಯೋಧ್ಯೆ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ! title=
ಕಾಂಗ್ರೆಸ್ ನೀಡಿರುವ ಕಾರಣವೇ ಹಾಸ್ಯಾಸ್ಪದ

ಬೆಂಗಳೂರು: ಜನವರಿ 22ರಂದು ನಡೆಯಲಿರುವ ಭವ್ಯ ಅಯೋಧ್ಯಾ ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರಿಗೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿತ್ತು. ಆದರೆ ಇದೀಗ ಕಾಂಗ್ರೆಸ್‌ ಈ ಆಹ್ವಾನವನ್ನು ತಿರಸ್ಕರಿಸಿದೆ. ಹೀಗಾಗಿ ಅಂದು ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಯಾವುದೇ ಕಾಂಗ್ರೆಸ್ ನಾಯಕರು ಅಯೋಧ್ಯೆಗೆ ಹೋಗುವುದಿಲ್ಲ.

ರಾಮಮಂದಿರ ಉದ್ಘಾಟನಾ ಸಮಾರಂಭದ ಆಹ್ವಾನ ತಿರಸ್ಕರಿಸಿರುವ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಬುಧವಾರ ಟ್ವೀಟ್ ಮಾಡಿರುವ ಮಾಜಿ ಸಚಿವ ವಿ.ಸುನೀಲ್ ಕುಮಾರ್, ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ಆಸ್ತಿ ತೆರಿಗೆ ವಸೂಲಾತಿ ವಿರುದ್ಧ ಬೇಸರ

‘ಅಯೋಧ್ಯೆ ಕಾರ್ಯಕ್ರಮದ ಆಹ್ವಾನ ತಿರಸ್ಕರಿಸುವುದಕ್ಕೆ ಕಾಂಗ್ರೆಸ್ ನೀಡಿರುವ ಕಾರಣವೇ ಹಾಸ್ಯಾಸ್ಪದ. ಅಪೂರ್ಣ ಕಟ್ಟಡದ ಉದ್ಘಾಟನೆಗೆ ಬರುವುದಿಲ್ಲ ಎಂಬುದೊಂದು ಪಿಳ್ಳೆ ನೆವ. ನಿಮ್ಮ ಮನಸಿನಲ್ಲಿದ್ದ ರಾಮ ವಿರೋಧ, ಹಿಂದು ವಿರೋಧ ಈಗ ಮತ್ತೆ ಬಹಿರಂಗವಾಗಿದೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಕೋಟ್ಯಂತರ ಹಿಂದುಗಳ ಭಾವನೆಗೆ ಕಾಂಗ್ರೆಸ್ ಮತ್ತೆ ಧಕ್ಕೆ ಮಾಡಿದೆ. ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸದೇ ಇರಲು ಕಾಂಗ್ರೆಸ್ ನಿರ್ಧರಿಸಿದೆ. ನೀವು ಭಾಗವಹಿಸದಿದ್ದರೆ ಚಿಂತೆ ಇಲ್ಲ. ಈ ಕ್ಷಣದಿಂದ ರಾಮಮಂದಿರ ಹಾಗೂ ಅಯೋಧ್ಯೆ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ’ ಎಂದು ಸುನೀಲ್ ಕುಮಾರ್ ಟೀಕಾಪ್ರಹಾರ ನಡೆಸಿದ್ದಾರೆ.  

ಇದನ್ನೂ ಓದಿ: ಲೋಕಸಭೆ ಚುನಾವಣೆ ತಯಾರಿಗೆ ಪೂರ್ವಭಾವಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News