Vatal Nagaraj : ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ವಾಟಾಳ್ ನಾಗರಾಜ್

ಸಾಮಾನ್ಯ ಜನರ ಬೆನ್ನು ಮೂಳೆ ಮುರಿದಿದೆ, ರಾಜ್ಯ ಸರ್ಕಾರ ಏನ್ ಮಾಡ್ತಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Written by - Zee Kannada News Desk | Last Updated : Apr 4, 2022, 04:22 PM IST
  • ಗ್ಯಾಸ್, ಪೆಟ್ರೋಲ್, ಡೀಸೆಲ್ ಅಡುಗೆ ಪದಾರ್ಥಗಳ ಬೆಲೆ ಏರಿಕೆಯಾಗಿದೆ
  • ಸಾಮಾನ್ಯ ಜನರ ಬೆನ್ನು ಮೂಳೆ ಮುರಿದಿದೆ
  • ಮಹಾರಾಷ್ಟ್ರದಲ್ಲಿ ರಾಜ್ ಠಾಕ್ರೆ ಎಂಬಾತ ಆಜಾನ್ ಬಗ್ಗೆ ಬಾಯಿಬಿಟ್ಟಿದ್ದಾನೆ
Vatal Nagaraj : ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ವಾಟಾಳ್ ನಾಗರಾಜ್ title=

ರಾಮನಗರ : ಗ್ಯಾಸ್, ಪೆಟ್ರೋಲ್, ಡೀಸೆಲ್ ಅಡುಗೆ ಪದಾರ್ಥಗಳ ಬೆಲೆ ಏರಿಕೆಯಾಗಿದೆ. ಆದರೆ, ಅದ್ಯಾವುದರ ಬಗ್ಗೆಯೂ ಚರ್ಚೆ ಇಲ್ಲ, ಚಕಾರ ಇಲ್ಲ. ಬೇಡದ ವಿಚಾರಗಳ ಬಗ್ಗೆ ಬೀದಿಯಲ್ಲಿ ಚರ್ಚೆ ನಡೆಯುತ್ತಿದೆ. ಸಾಮಾನ್ಯ ಜನರ ಬೆನ್ನು ಮೂಳೆ ಮುರಿದಿದೆ, ರಾಜ್ಯ ಸರ್ಕಾರ ಏನ್ ಮಾಡ್ತಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ವಾಟಾಳ್ ನಾಗರಾಜ್(Vatal Nagaraj), ಬೆಲೆ ಏರಿಕೆ ವಿಚಾರಗಳ ಬಗ್ಗೆ ಚರ್ಚೆಯಾಗಬೇಕು. ಮಹಾರಾಷ್ಟ್ರದಲ್ಲಿ ರಾಜ್ ಠಾಕ್ರೆ ಎಂಬಾತ ಆಜಾನ್ ಬಗ್ಗೆ ಬಾಯಿಬಿಟ್ಟಿದ್ದಾನೆ. ಮಸೀದಿಗಳಲ್ಲಿ ಧ್ವನಿವರ್ದಕ ಹಾಕಬಾರದೆಂದು ಹೇಳಿದ್ದಾನೆ. ಈಗ ಅದನ್ನ ಇಟ್ಟುಕೊಂಡು ಇಲ್ಲಿಯೂ ಸಹ ಧ್ವನಿ ಎತ್ತುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ, ಒಳ್ಳೆಯದಲ್ಲ. ನಮ್ಮ ಸಂಸ್ಕೃತಿಗೆ ಇದು ಒಳ್ಳೆಯದಲ್ಲ. ಬೆಕ್ಕು ಕಣ್ಣುಮುಚ್ಚಿ ಹಾಲುಕುಡಿದರೆ ಗೊತ್ತಾಗದ ರೀತಿ ಸರ್ಕಾರ ಇರಬಾರದು. ಇವತ್ತು ಹಲಾಲ್ ಮಾಂಸ ಬೇಡ ಅಂತಾರೆ, ಜಟ್ಕಾ ತಿನ್ನಿ ಅಂತಾರೆ. ಈಗ ಅಜಾನ್ ಬಗ್ಗೆ ಮಾತನಾಡುತ್ತಿದ್ದಾರೆ, ಇದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ : 2020-21ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕ್ರೀಡಾರತ್ನ, ಕ್ರೀಡಾ ಪೋಷಕ ಪ್ರಶಸ್ತಿ ಘೋಷಣೆ

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News