ವಿಧಾನಸೌಧ ವಜ್ರಮಹೋತ್ಸವ: ರಾಷ್ಟ್ರಪತಿ ಕೋವಿಂದ್ ಇಂದು ಬೆಂಗಳೂರಿಗೆ

ಮಂಗಳವಾರ ರಾಜ್ಯ ರಾಜಧಾನಿಗೆ ಆಗಮಿಸಲಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್.

Last Updated : Oct 24, 2017, 09:08 AM IST
ವಿಧಾನಸೌಧ ವಜ್ರಮಹೋತ್ಸವ: ರಾಷ್ಟ್ರಪತಿ ಕೋವಿಂದ್ ಇಂದು ಬೆಂಗಳೂರಿಗೆ title=

ಬೆಂಗಳೂರು: ನ.25 (ಬುಧವಾರ) ವಿಧಾನಸೌಧದ ವಜ್ರಮಹೋತ್ಸವ ಹಿನ್ನೆಲೆಯಲ್ಲಿ ಆಯೋಜಿಸಲಾಗಿರುವ ಜಂಟಿ ಅಧಿವೇಶನದಲ್ಲಿ ಪಾಲ್ಗೊಳ್ಳಲು  ರಾಷ್ಟ್ರಪತಿ ರಾಮನಾಥ ಕೋವಿಂದ್ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ನಾಳಿನ ಉಭಯ ಸದನಗಳ ಜಂಟಿ ಅಧಿವೇಶನವನ್ನು ಕುರಿತು ಕೋವಿಂದ್ ಭಾಷಣ ಮಾಡಲಿದ್ದಾರೆ.

ಮಂಗಳವಾರ ಮಧ್ಯಾಹ್ನ 3:45ಕ್ಕೆ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಷ್ಟ್ರಪತಿ ಕೋವಿಂದ್ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ರಾತ್ರಿ ಎಂಟು ಗಂಟೆಗೆ ಏರ್ಪಡಿಸಲಾಗಿರುವ ಔತಣಕೂಟದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.

Trending News