ಭಂಡತನ ಬಿಟ್ಟು ರಾಜೀನಾಮೆ ಕೊಡಿ: ಮುಖ್ಯಮಂತ್ರಿಗಳಿಗೆ ವಿಜಯೇಂದ್ರ ಆಗ್ರಹ

ಮೈಸೂರು ಮುಡಾ ನಿವೇಶನ ಹಗರಣದ ದೂರಿನ ಸಂಬಂಧ ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನದತ್ತ ಅಧಿಕಾರ ಚಲಾಯಿಸಿ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ.

Written by - Prashobh Devanahalli | Last Updated : Aug 17, 2024, 02:11 PM IST
  • ಮುಡಾ ನಿವೇಶನ ಹಗರಣ ಪ್ರಕರಣ
  • ಭಂಡತನ ಬಿಟ್ಟು ರಾಜೀನಾಮೆ ಕೊಡಿ
  • ಮುಖ್ಯಮಂತ್ರಿಗಳಿಗೆ ವಿಜಯೇಂದ್ರ ಆಗ್ರಹ
ಭಂಡತನ ಬಿಟ್ಟು ರಾಜೀನಾಮೆ ಕೊಡಿ: ಮುಖ್ಯಮಂತ್ರಿಗಳಿಗೆ ವಿಜಯೇಂದ್ರ ಆಗ್ರಹ title=

ಬೆಂಗಳೂರು: ಮೈಸೂರು ಮುಡಾ ನಿವೇಶನ ಹಗರಣದ ದೂರಿನ ಸಂಬಂಧ ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನದತ್ತ ಅಧಿಕಾರ ಚಲಾಯಿಸಿ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ವಿಜಯೇಂದ್ರ ಅವರು ಪೋಸ್ಟ್ ಮಾಡಿದ್ದಾರೆ. “ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ.” ಎಂದು ಗಮನ ಸೆಳೆದಿದ್ದಾರೆ. 

ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಂಡತನ ಪ್ರದರ್ಶಿಸುತ್ತಿದ್ದರು ಎಂದಿದ್ದಾರೆ.  

ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ರಾಜ್ಯಪಾಲರು ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವುದು ಅಕ್ಷಮ್ಯ: ಈಶ್ವರ ಖಂಡ್ರೆ ಒತ್ತಾಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News