ನಾವೆಲ್ಲ ಒಬ್ಬ ಸೃಜನಶೀಲ ವ್ಯಕ್ತಿಯನ್ನು ಕಳೆದುಕೊಂಡಿದ್ದೀವಿ- ಹೆಚ್.ಡಿ. ದೇವೇಗೌಡ

ಕೇಂದ್ರ ಸಚಿವ ಅನಂತ್ ಕುಮಾರ್ ನಿಧನಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಸಂತಾಪ.

Last Updated : Nov 12, 2018, 08:09 AM IST
ನಾವೆಲ್ಲ ಒಬ್ಬ ಸೃಜನಶೀಲ ವ್ಯಕ್ತಿಯನ್ನು ಕಳೆದುಕೊಂಡಿದ್ದೀವಿ- ಹೆಚ್.ಡಿ. ದೇವೇಗೌಡ title=

ಬೆಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ನಾವೆಲ್ಲ ಒಬ್ಬ ಸೃಜನಶೀಲ ವ್ಯಕ್ತಿಯನ್ನು ಕಳೆದುಕೊಂಡಿದ್ದೀವಿ ಎಂದಿದ್ದಾರೆ.

ಅನಂತ ಕುಮಾರ್ ರವರು ನಾನು ಪ್ರಧಾನಿ ಆದ ಸಂದರ್ಭದಲ್ಲಿ ಮೊದಲ ಬಾರಿಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸದಸ್ಯರಾಗಿ ಆಯ್ಕೆಯಾಗಿ ಅಂದಿನಿಂದ ಇಂದಿನವರೆಗೂ ಸಮಾಜಕ್ಕೆ ಉತ್ತಮ ಸೇವೆಸಲ್ಲಿಸುತ್ತಿದ್ದರು. 

ನಾವೆಲ್ಲ ಒಬ್ಬ ಸೃಜನಶೀಲ ವ್ಯಕ್ತಿಯನ್ನು ಕಳೆದುಕೊಂಡಿದ್ದೀವಿ. ನನ್ನ ಮತ್ತು ಅವರ ಸಂಬಂಧ ಸುಮಾರು 3 ದಶಕಗಳದ್ದು. ನಾನು ಈ ದಿನ ನನ್ನ ಒಬ್ಬ ಒಳ್ಳೆಯ ಸ್ನೇಹಿತನನ್ನು ಕಳೆದುಕೊಂಡಿದ್ದೀನಿ. ವಯಕ್ತಿಕವಾಗಿ ಮನಸ್ಸಿಗೆ ಬಹಳ ನೋವುಂಟಾಗಿದೆ.
ಅವರ ಅಗಲಿಕೆಯಿಂದ ದೇಶಕ್ಕೆ ತುಂಬಲಾಗದ ನಷ್ಟವುಂಟಾಗಿದೆ. ದೆಹಲಿಯಲ್ಲಿ ಕರ್ನಾಟಕದ ಧ್ವನಿಯಂತಿದ್ದ ಅನಂತ್ ಕುಮಾರ್ ಅವರು ಒಬ್ಬ ಪಳಗಿದ ಮುತ್ಸದ್ದಿ ರಾಜಕಾರಣಿಯಾಗಿದ್ದರು. 

ಆ ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಭಗವಂತ ಅವರ ಕುಟುಂಬಕ್ಕೆ ಮತ್ತು ಅವರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ದೇವೇಗೌಡರು ಸಂತಾಪ ಸೂಚಿಸಿದ್ದಾರೆ.
 

Trending News