ಮುಸ್ಲಿಂ ಹಿತರಕ್ಷಣೆ ಬಗ್ಗೆ ಸಿಎಂ ಹೇಳಿಕೆಯನ್ನು ಸಮರ್ಥಿಸಿಕೊಂಡ ಶೆಟ್ಟರ್ ಹೇಳಿದ್ದೇನು?

ಇಂತಹ ವಿಚಾರ ದೊಡ್ಡದು ಮಾಡುವಂತದ್ದಲ್ಲವೇ ಅಲ್ಲಾ. ನನಗೆ ಅರ್ಥನೇ ಆಗ್ತೀಲ್ಲ. ಅವರು ಹೇಳಿದ ಹೇಳಿಕೆ ನಾನು ನೋಡಿದ್ದೀನಿ. 

Written by - Yashaswini V | Last Updated : Dec 6, 2023, 02:43 PM IST
  • ಮುಸ್ಲಿಂ ಹಿತರಕ್ಷಣೆ ಮಾಡ್ತೀನಿ ಅಂತಾ ಹೇಳಿದ್ದಾರೆ.
  • ಬೇರೆ ಬೇರೆ ಸಮಾಜಕ್ಕೆ ಹೋದಾಗ ಅವರವರ ಹಿತರಕ್ಷಣೆ ಮಾಡುತ್ತೀನಿ ಅಂತ ಹೇಳೋದು ಸಹಜ.
  • ಇಲ್ಲ ನಿಮ್ಮ ಹಿತ ರಕ್ಷಣೆ ಮಾಡುವುದಿಲ್ಲ ಅಂತ ಹೇಳ್ತಾರೇನು?- ಮಾಜಿ ಸಿಎಂ ಜಗದೀಶ್ ಶೆಟ್ಟರ್
ಮುಸ್ಲಿಂ ಹಿತರಕ್ಷಣೆ ಬಗ್ಗೆ ಸಿಎಂ ಹೇಳಿಕೆಯನ್ನು ಸಮರ್ಥಿಸಿಕೊಂಡ ಶೆಟ್ಟರ್ ಹೇಳಿದ್ದೇನು?  title=

ಹುಬ್ಬಳ್ಳಿ: ಮುಸ್ಲಿಂ ಹಿತರಕ್ಷಣೆ ಮಾಡ್ತೀನಿ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅದನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲವೆಂದು ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಮರ್ಥಿಸಿಕೊಂಡಿದ್ದಾರೆ.

ನಗರದಲ್ಲಿಂದು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಇಂತಹ ವಿಚಾರ ದೊಡ್ಡದು ಮಾಡುವಂತದ್ದಲ್ಲವೇ ಅಲ್ಲಾ. ನನಗೆ ಅರ್ಥನೇ ಆಗ್ತೀಲ್ಲ. ಅವರು ಹೇಳಿದ ಹೇಳಿಕೆ ನಾನು ನೋಡಿದ್ದೀನಿ. ಮುಸ್ಲಿಂ ಹಿತರಕ್ಷಣೆ ಮಾಡ್ತೀನಿ ಅಂತಾ ಹೇಳಿದ್ದಾರೆ. ಬೇರೆ ಬೇರೆ ಸಮಾಜಕ್ಕೆ ಹೋದಾಗ ಅವರವರ ಹಿತರಕ್ಷಣೆ ಮಾಡುತ್ತೀನಿ ಅಂತ ಹೇಳೋದು ಸಹಜ. ಇಲ್ಲ ನಿಮ್ಮ ಹಿತ ರಕ್ಷಣೆ ಮಾಡುವುದಿಲ್ಲ ಅಂತ ಹೇಳ್ತಾರೇನು? ಅದನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ ಅದನ್ನು ಬಿಟ್ಟು ಬಿಡಿ, ಸಿದ್ದರಾಮಯ್ಯ ಅವರೇ ಸಮರ್ಥರಿದ್ದಾರೆ. ಅವರೇ ಅದರಲ್ಲಿ ಉತ್ತರ ಕೊಡ್ತಾರೆ ಎಂದರು.

ಇದನ್ನೂ ಓದಿ- ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ: ಸಿಎಂ ಸಿದ್ದರಾಮಯ್ಯ

ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರ, ಅದರ ಬಗ್ಗೆ ಚರ್ಚೆ ಆಗಲೇಬೇಕು. ವಿರೋಧ ಪಕ್ಷದವರ ಮೇಲೆ ಕೂಡ ಸಾಕಷ್ಟು ಜವಾಬ್ದಾರಿ ಇದೆ. ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಪ್ರತಿಪಕ್ಷದವರು ದ್ವನಿ ಎತ್ತಿದರೆ ಖಂಡಿತವಾಗಿ ಚರ್ಚೆ ಆಗುತ್ತೆ. ಉತ್ತರ ಕರ್ನಾಟಕ ಅಭಿವೃದ್ಧಿ ಅಂತ ಬಂದರೆ ಮಹದಾಯಿ, ಕಳಸ ಬಂಡೂರಿ ಸೇರಿ ಎಲ್ಲ ವಿಷಯಗಳು ಒಲಗೊಳ್ಳುತ್ತವೆ ಎಂದವರು ಇದೇ ವೇಳೆ ನುಡಿದರು. 

ಇದನ್ನೂ ಓದಿ- ಬಿಜೆಪಿಗೆ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ : ಸಿಎಂ

ರಾಜ್ಯಾಧ್ಯಕ್ಷ ನೇಮಕ ನಂತರ ಯತ್ನಾಳ್ ಅಸಮಾಧಾನ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್, ಅವರವರೇ ಅದರ ಬಗ್ಗೆ ಮಾತನಾಡಬೇಕು. ನಾನು ಅದರ ಬಗ್ಗೆ ಏನು ಮಾತನಾಡಲಿ? ನಾನು ಹಿಂದೇನು ಸಾಕಷ್ಟು ಬಾರಿ ಹೇಳಿದ್ದೇನೆ. ಪದೇ ಪದೇ ಹೇಳುವುದರಲ್ಲಿ ಅರ್ಥವಿಲ್ಲ ಎಂದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News