ಶ್ರೀಗಳಿಗೆ 'ಭಾರತ ರತ್ನ' ನೀಡುವುದರಿಂದ ಪುರಸ್ಕಾರಕ್ಕೇ ಗೌರವ ಹೆಚ್ಚುತ್ತದೆ: ಬಾಬಾ ರಾಮ್‌ದೇವ್

ಡಾ. ಶಿವಕುಮಾರ ಶ್ರೀಗಳು ಲಿಂಗೈಕ್ಯರಾದ ಬೆನ್ನಲ್ಲೇ ಶ್ರೀಗಳಿಗೆ 'ಭಾರತ ರತ್ನ' ನೀಡಬೇಕೆಂಬ ಕೂಗು ಹೆಚ್ಚಾಗುತ್ತಿದೆ.

Last Updated : Jan 22, 2019, 03:01 PM IST
ಶ್ರೀಗಳಿಗೆ 'ಭಾರತ ರತ್ನ' ನೀಡುವುದರಿಂದ ಪುರಸ್ಕಾರಕ್ಕೇ ಗೌರವ ಹೆಚ್ಚುತ್ತದೆ: ಬಾಬಾ ರಾಮ್‌ದೇವ್ title=

ಬೆಂಗಳೂರು: ಶತಾಯುಷಿ, ನಡೆದಾಡುವ ದೇವರು, ತ್ರಿವಿಧ ದಾಸೋಹಿ ಡಾ. ಶಿವಕುಮಾರ ಶ್ರೀಗಳು ಲಿಂಗೈಕ್ಯರಾದ ಬೆನ್ನಲ್ಲೇ ಶ್ರೀಗಳಿಗೆ 'ಭಾರತ ರತ್ನ' ನೀಡಬೇಕೆಂಬ ಕೂಗು ಹೆಚ್ಚಾಗುತ್ತಿದೆ. ಇದಕ್ಕೆ ಯೋಗ ಗುರು ಬಾಬಾ ರಾಮ್‌ದೇವ್ ಸಹ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.

ನಡೆದಾಡುವ ದೇವರ ಅಂತಿಮ ದರ್ಶನ ಪಡೆಯಲು ಬೆಂಗಳೂರಿಗೆ ಆಗಮಿಸಿದ ಬಾಬಾ ರಾಮ್‌ದೇವ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಶಿವಕುಮಾರ ಶ್ರೀಗಳಿಗೆ 'ಭಾರತ ರತ್ನ' ನೀಡುವುದರಿಂದ ಪುರಸ್ಕಾರಕ್ಕೇ ಗೌರವ ಹೆಚ್ಚುತ್ತದೆ ಎಂದು ಹೇಳಿದ್ದಾರೆ.

ದೇಶದಲ್ಲಿ ಕ್ರೀಡೆ, ಸಂಗೀತ, ರಾಜಕೀಯವಾಗಿ ಸಾಧನೆ ಮಾಡಿರುವ ವ್ಯಕ್ತಿಗಳಿಗೆ ಭಾರತ ರತ್ನ ನೀಡಲಾಗುತ್ತದೆ. ಆದರೆ ಶಿಕ್ಷಣ, ತ್ರಿವಿಧ ದಾಸೋಹ ಇನ್ನಿತರ ಸಾಮಾಜಿಕ ಕಾರ್ಯಗಳನ್ನು ಮಾಡಿರುವ ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳಿಗೇಕೆ ಭಾರತ ರತ್ನ ನೀಡಬಾರದು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

Trending News