/kannada/photo-gallery/shukra-gochar-laxmi-narayana-yoga-bless-this-zodiac-signs-with-huge-wealth-and-success-221344 Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸು Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸು 221344

ಬೆಂಗಳೂರು: ಸಮಾಜದ ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ ಎಂದು ಶಂಕೆ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ, ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೇ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ? ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸರಣಿ ಟ್ವೀಟ್ ಮಾಡಿರುವ ಹೆಚ್. ಡಿ. ಕುಮಾರಸ್ವಾಮಿ, ಇದೇ ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ನಾನು‌ ನಡೆಸುತ್ತಿರುವ ಹೋರಾಟಕ್ಕೆ ಬೆದರಿರುವ ಬಿಜೆಪಿ ನನ್ನನ್ನು 'ಪಾಕಿಸ್ತಾನಿ' ಎಂದು ಕರೆದು ಅಪಮಾನಿಸುವ ಪ್ರಯತ್ನ ಮಾಡುತ್ತಿದೆ. ಕೊಲ್ಲಲು ಬಂದವರದ್ದು ಬೆದರಿಕೆಯ 'ಉಗ್ರ' ತಂತ್ರವಾದರೆ, ಅವರದ್ದೇ ಸಿದ್ದಾಂತ ಪ್ರತಿಪಾದಿಸುತ್ತಿರುವ ಬಿಜೆಪಿಯದ್ದು ಅಪಮಾನದ ತಂತ್ರ ಎಂದು ರಾಜ್ಯದ ಆಡಳಿತಾರೂಢ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.

ಕರ್ನಾಟಕದಲ್ಲಿ ಒಕ್ಕಲಿಗ ನಾಯಕತ್ವದ ವಿರುದ್ಧ ಹಿಂದಿನಿಂದಲೂ ದೌರ್ಜನ್ಯ ರಾಜಕಾರಣ ಇದ್ದದ್ದೇ. ಮೂದಲಿಸುವುದು, ಸಲ್ಲದ ಆರೋಪ ಮಾಡುವುದು‌. ಈ ಹಿಂದೆ ನಡೆದ ತಂತ್ರಗಳು. ಆದರೆ ಈಗಿನ ಕೊಲ್ಲುವ ಸಂಚು, ಪಾಕಿಸ್ತಾನಿ ಪ್ರಯೋಗ ಒಕ್ಕಲಿಗ ರಾಜಕಾರಣದ ವಿರುದ್ಧ ನಡೆಯುತ್ತಿರುವ ಮತ್ತೊಂದು ಬಗೆಯ ದೌರ್ಜನ್ಯ ಎಂದು ಹೆಚ್‌ಡಿಕೆ ಅಸಮಾಧಾನ ಹೊರಹಾಕಿದ್ದಾರೆ.

ಎದುರಾಳಿಗಳಿಗೆ ಹೆಚ್‌ಡಿಕೆ ಟಾಂಗ್:
ಒಕ್ಕಲಿಗರು ಹೋರಾಟಕ್ಕಿಳಿದರೆ, ಅಧಿಕಾರಕ್ಕೆ ಬಂದರೆ ಅವರನ್ನು ಬೆದರಿಸುವ, ಸರ್ಕಾರಗಳನ್ನು ಬೀಳಿಸುವ ಕಾಯಕ ಹಿಂದಿನಿಂದ ನಡೆದುಕೊಂಡು ಬಂದಿದೆ. ದೇವೇಗೌಡರಂಥವರ ಮೇಲೇ ಹಲ್ಲೆ ಪ್ರಯತ್ನಗಳು ನಡೆದಿವೆ. ಅವರಿಗೆ ಅಧಿಕಾರ ವಂಚಿಸಲು ಯತ್ನಿಸಿದ್ದನ್ನು ಸಮಾಜ ನೋಡಿದೆ. ಈಗ ಈ ಶಕ್ತಿಗಳು ನನ್ನ ವಿರುದ್ಧ ನಿಂತಿವೆ. ಇದಕ್ಕೆ ಬೆದರುವ ವ್ಯಕ್ತಿ ನಾನಲ್ಲ ಎಂದು ಹೆಚ್‌ಡಿಕೆ ಎದುರಾಳಿಗಳಿಗೆ ಟಾಂಗ್ ನೀಡಿದ್ದಾರೆ.

ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗತ್ತು:
"ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗತ್ತು" ಎಂಬ ಕವಿವಾಣಿ ನೆನಪಿರಲಿ. ಅವರ ಪ್ರತಿನಿಧಿ ನಾನು. ರೈತರಿಗಾಗಿ ಕಾರ್ಯಕ್ರಮ ಹಮ್ಮಿಕೊಂಡವ ನಾನು. ನೀವು ನನ್ನನ್ನು ಕೊಲ್ಲಲಾದೀತೇ? ನನ್ನನ್ನು ಪಾಕಿಸ್ತಾನಿ ಎನ್ನುವಿರೇ? ಮುಂದೊಂದು ದಿನ ಪ್ರಾಯಶ್ಚಿತ ಪಡಲೆಂದೇ ಇಂದು ನೀವು ಮಾಡಿಕೊಳ್ಳುತ್ತಿರುವ ಪಾಪಗಳಿವು ಎಂದು ಕುಮಾರಸ್ವಾಮಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ... ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

Section: 
English Title: 
'You can kill me. But can't killed those who stand on my back'; HDK
News Source: 
Home Title: 

'ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ?

'ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ?'; ಹೆಚ್‌ಡಿಕೆ
Author No use : 
Yashaswini V
Yes
Is Blog?: 
No
Tags: 
Facebook Instant Article: 
Yes
Mobile Title: 
'ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ?
Publish Later: 
No
Publish At: 
Saturday, January 25, 2020 - 11:45
Created By: 
Yashaswini V
Updated By: 
Yashaswini V
Published By: 
Yashaswini V