ಫುಡ್ ಸ್ಟ್ರೀಟ್ ಮತ್ತು ಗಂಗಾಧರೇಶ್ವರ ದೇವಸ್ಥಾನದ ಗೋಡೆ ಕುಸಿದ ಸ್ಥಳಕ್ಕೆ ವಲಯ ಆಯುಕ್ತರು ಭೇಟಿ

Bangalore News:ಬೃಹತ್ ಮಹಾನಗರ ಪಾಲಿಕೆ ದಕ್ಷಿಣ ವಲಯ ವ್ಯಾಪ್ತಿಯ ವಿವಿಪುರಂ ವಾರ್ಡ್ ನಲ್ಲಿ ಬರುವ ಫುಡ್ ಸ್ಟ್ರೀಟ್(ತಿಂಡಿ ಬೀದಿ) ಹಾಗೂ ಧರ್ಮರಾಯ ಸ್ವಾಮಿ ದೇವಸ್ಥಾನ ರಸ್ತೆಯಲ್ಲಿ ಬರುವ ಗಂಗಾಧರೇಶ್ವರ ದೇವಸ್ಥಾನ ಗೋಡೆ ಕುಸಿದಿದೆ

Written by - Zee Kannada News Desk | Last Updated : Aug 2, 2023, 08:10 PM IST
ಫುಡ್ ಸ್ಟ್ರೀಟ್ ಮತ್ತು ಗಂಗಾಧರೇಶ್ವರ ದೇವಸ್ಥಾನದ ಗೋಡೆ ಕುಸಿದ ಸ್ಥಳಕ್ಕೆ ವಲಯ ಆಯುಕ್ತರು ಭೇಟಿ  title=

ಬೆಂಗಳೂರು: ಬೃಹತ್ ಮಹಾನಗರ ಪಾಲಿಕೆ ದಕ್ಷಿಣ ವಲಯ ವ್ಯಾಪ್ತಿಯ ವಿವಿಪುರಂ ವಾರ್ಡ್ ನಲ್ಲಿ ಬರುವ ಫುಡ್ ಸ್ಟ್ರೀಟ್(ತಿಂಡಿ ಬೀದಿ) ಹಾಗೂ ಧರ್ಮರಾಯ ಸ್ವಾಮಿ ದೇವಸ್ಥಾನ ರಸ್ತೆಯಲ್ಲಿ ಬರುವ ಗಂಗಾಧರೇಶ್ವರ ದೇವಸ್ಥಾನ ಗೋಡೆ ಕುಸಿದಿರುವ ಸ್ಥಳ ಕ್ಕೆ ಹಣಕಾಸು ವಿಭಾಗದ ವಿಶೇಷ ಆಯುಕ್ತರು ಹಾಗೂ ದಕ್ಷಿಣ ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲಿಸಿದರು.

ವಿವಿ ಪುರಂ ನ ಫುಡ್ ಸ್ಟ್ರೀಟ್(ತಿಂಡಿ ಬೀದಿ) ಕಾಮಗಾರಿ ಪರಿವೀಕ್ಷಣೆ:

ಗಂಗಾಧರೇಶ್ವರ ದೇವಸ್ಥಾನದ ಗೋಡೆ ದುರಸ್ತಿ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ:

ಧರ್ಮರಾಯ ಸ್ವಾಮಿ ದೇವಸ್ಥಾನ ರಸ್ತೆಯ ಬಳಿ ಗಂಗಾಧರೇಶ್ವರ ದೇವಸ್ಥಾನ ಬಳಿ 1 ಆಗಸ್ಟ್ 2023 ರಂದು ಪಾದಚಾರಿ ಮಾರ್ಗದ ಒತ್ತುವರಿ ತೆರವು ಕಾರ್ಯಚರಣೆಯ ವೇಳೆ ದೇವಾವಲಯದ ಮೇಲ್ಭಾಗದ ಗೋಡೆ ಕುಸಿದು ಬಿದ್ದಿದ್ದು, ಪಾಲಿಕೆ ವತಿಯಿಂದ ಸದರಿ ಗೋಡೆಯ ದುರಸ್ಥಿ ಕಾರ್ಯವನ್ನು ನಡೆಸಲಾಗುತ್ತಿದೆ. 

ಇದನ್ನೂ ಓದಿ: Viral Video: ಭೇಲ್​ಪುರಿ, ಮಂಡಕ್ಕಿ ಸೂಸಲ, ಚುರುಮುರಿ ಪ್ರಿಯರೇ ಸೇವಿಸುವ ಮುನ್ನ ಈ ವಿಡಿಯೋ ನೋಡಿ..

ಗೋಡೆ ಕುಸಿದಿರುವ ಸ್ಥಳಕ್ಕೆ ದಕ್ಷಿಣ ವಲಯ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ಗಂಗಾಧರೇಶ್ವರ ದೇವಸ್ಥಾನವು ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರಲಿದ್ದು, ದೇವಾಲಯಕ್ಕೆ ಹೊಂದಿಕೊಂಡಂತಿರುವ ಅಂಗಡಿಯ ಮೇಲ್ಭಾಗದ ಗೋಡೆಗೆ ಅಂಗಡಿಯ ನಾಮಫಲಕ ಹಾಗೂ ಶೀಟ್ ಅನ್ನು ಅಳವಡಿಸಲಾಗಿತ್ತು.

ಪಾದಚಾರಿ ಮಾರ್ಗದ ಒತ್ತುವರಿ ತೆರವು ಕಾರ್ಯಾಚರಣೆಯ ವೇಳೆ ಜೆಸಿಬಿಯ ಮೂಲಕ ನಾಮಫಲಕ ಹಾಗೂ ಶೀಟ್ ಅನ್ನು ತೆರವುಗೊಳಿಸುವ ಸಮಯದಲ್ಲಿ ದೇವಾಲದ ಮೇಲ್ಭಾಗದ ಗೋಡೆ ತುಂಬಾ ಹಳೆಯದಾಗಿದ್ದ ಪರಿಣಾಮ ಗೋಡೆ ಕುಸಿದು ಬಿದ್ದಿದೆ. ಈ ಸಂಬಂಧ ಈಗಾಗಲೇ ಪಾಲಿಕೆ ವತಿಯಿಂದ ಗೋಡೆಯ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. 

ಇದನ್ನೂ ಓದಿ: ಹದ್ದಿನ ಕಣ್ಣುಳ್ಳವರು ನೀವಾಗಿದ್ದರೆ ಈ ಆಭರಣಗಳ ರಾಶಿಯಲ್ಲಿ ಮಗದೊಂದು ವಸ್ತುವಿದೆ ಅದೇನೆಂದು ಕಂಡುಹಿಡಿಯಿರಿ..

ಈ ವೇಳೆ ದಕ್ಷಿಣ ವಲಯ ಆಯುಕ್ತರು ಪ್ರತಿಕ್ರಿಯಿಸಿ, ಪಾದಚಾರಿ ತೆರವು ಕಾರ್ಯಾಚರಣೆಯ ವೇಳೆ ಆಗಿರುವ ದುರಸ್ತಿ ಕಾರ್ಯವನ್ನು ಈ ವಾರಾಂತ್ಯದೊಳಗಾಗಿ ಪೂರ್ಣಗೊಳಿಸಬೇಕು. ಜೊತಗೆ ಪಾದಚಾರಿ ಮಾರ್ಗದ ತೆರವು ಕಾರ್ಯಾಚರಣೆ ಮಾಡುವ ವೇಳೆ ಮುಜರಾಯಿ ಇಲಾಖೆಯ ಸಹಯೋಗದೊಂದಿಗೆ ಒತ್ತುವರಿ ಮಾಡಿಕೊಂಡಿರುವುದನ್ನು ಗುರುತಿಸಿ ತೆರವುಗೊಳಿಸಲು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ವಲಯ ಮುಖ್ಯ ಅಭಿಯಂತರರಾದ ರಾಜೇಶ್, ಕಾರ್ಯಪಾಲಕ ಅಭಿಯಂತರರಾದ ಮಹಂತೇಶ್, ಯರಪ್ಪ ರೆಡ್ಡಿ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News