ಈ ತರಕಾರಿ ಆರೋಗ್ಯಕ್ಕೆ ತುಂಬಾ ಲಾಭಕಾರಿ, ಆದರೆ ಕೆಲ ಜನರು ಅಂತರ ಕಾಯ್ದುಕೊಳ್ಳಬೇಕು!

Bitter Gourd Health Tips: ರುಚಿಯಲ್ಲಿ ಹಾಗಲಕಾಯಿ ಕಹಿಯಾಗಿರುತ್ತದೆ. ಆದರೆ, ನಿತ್ಯ ಹಾಗಲಕಾಯಿ ಸೇವನೆಯಿಂದ ಆರೋಗ್ಯಕ್ಕೆ (Lifestyle News In Kannada ) ಹಾನಿಯುಂಟಾಗುತ್ತದೆ.   

Written by - Nitin Tabib | Last Updated : Jul 25, 2023, 11:39 PM IST
  • ಹಾಗಲಕಾಯಿ ಸೇವನೆಯಿಂದ ರಕ್ತದಲ್ಲಿನ ಸಕ್ಕರೆ ಅಂಶ ನಿಯಂತ್ರಣಕ್ಕೆ ಬರುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ.
  • ಆದರೆ, ಯಾರ ರಕ್ತದಲ್ಲಿನ ಸಕ್ಕರೆ ಕಡಿಮೆ ಇರುತ್ತದೆಯೋ, ಅಂಥವರು ಹಾಗಲಕಾಯಿಯನ್ನು ಸೇವಿಸಬಾರದು.
  • ಇದು ನಿಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಮತ್ತಷ್ಟು ಕಡಿಮೆ ಮಾಡಬಹುದು.
ಈ ತರಕಾರಿ ಆರೋಗ್ಯಕ್ಕೆ ತುಂಬಾ ಲಾಭಕಾರಿ, ಆದರೆ ಕೆಲ ಜನರು ಅಂತರ ಕಾಯ್ದುಕೊಳ್ಳಬೇಕು! title=

Health Care Tips: ಹಾಗಲಕಾಯಿ ರುಚಿಯಲ್ಲಿ ತುಂಬಾ ಕಹಿಯಾಗಿರುತ್ತದೆ ಎಂಬ ವಿಷಯ ಎಲ್ಲರಿಗೂ ತಿಳಿದೇ ಇದೆ. ಆದರೆ ಇದು ಆರೋಗ್ಯಕ್ಕೆ ತುಂಬಾ ಹಿತಕಾರಿ ಎಂದು ಪರಿಗಣಿಸಲಾಗುತ್ತದೆ, ಹಾಗಲಕಾಯಿ ವಿಶೇಷವಾಗಿ ಆರೋಗ್ಯಕರ ಹೃದಯಕ್ಕೆ ತುಂಬಾ ಒಳ್ಳೆಯದು. ಆದರೆ ಹಾಗಲಕಾಯಿಯನ್ನು ಅತಿಯಾಗಿ ಸೇವಿಸುವುದರಿಂದ ಆರೋಗ್ಯಕ್ಕೂ ಹಾನಿಯಾಗುತ್ತದೆ ಎಂಬ ಸಂಗತಿ ನಿಮಗೆ ತಿಳಿದಿದೆಯಾ? ಹೌದು, ಹಾಗಲಕಾಯಿಯನ್ನು ನಿತ್ಯ ಸೇವಿಸುವುದರಿಂದ ಆರೋಗ್ಯದ (Lifestyle Tips In Kannada) ಮೇಲೆ ತುಂಬಾ ಕೆಟ್ಟ ಪರಿಣಾಮ ಬೀರುತ್ತದೆ. ಯಾವ ಜನರು ಹಾಗಲಕಾಯಿಯನ್ನು ಸೇವಿಸಬಾರದು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

ಈ ಜನರು ಮರೆತು ಕೂಡ ಹಾಗಲಕಾಯಿಯನ್ನು ಸೇವಿಸಬಾರದು
ಗರ್ಭಿಣಿಯರು ಸೇವಿಸಬಾರದು

ಹಾಗಲಕಾಯಿಯ ರಸವನ್ನು ಸೇವಿಸುವುದರಿಂದ ಋತುಚಕ್ರದ ಹರಿವು ಹೆಚ್ಚಾಗುತ್ತದೆ. ಇದೇ ವೇಳೆ, ಗರ್ಭಾವಸ್ಥೆಯಲ್ಲಿ ಹಾಗಲಕಾಯಿಯ ಅತಿಯಾದ ಸೇವನೆಯು ಗರ್ಭಪಾತಕ್ಕೆ ಕಾರಣವಾಗಬಹುದು, ಆದ್ದರಿಂದ ಗರ್ಭಿಣಿಯರು ಹಾಗಲಕಾಯಿ ರಸವನ್ನು ಕುಡಿಯುವುದನ್ನು ತಪ್ಪಿಸಬೇಕು.

ಯಕೃತ್ತು ಹಾನಿಗೊಳಗಾಗಬಹುದು
ಮಧುಮೇಹಿಗಳು ಹಾಗಲಕಾಯಿಯ ರಸವನ್ನು ಪ್ರತಿದಿನ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಬಹುದು. ಆದರೆ ಇದು ನಿಮ್ಮ ಯಕೃತ್ತಿಗೆ ಅಪಾಯಕಾರಿ ಎಂದು ಸಾಬೀತಾಗಬಹುದು. ಇದು ಯಕೃತ್ತಿಗೆ ಹಾನಿ ಉಂಟುಮಾಡಬಹುದು. ಆದ್ದರಿಂದ, ಮಧುಮೇಹಿಗಳು ಹಾಗಲಕಾಯಿಯನ್ನು ಪ್ರತಿದಿನ ಸೇವಿಸುವುದನ್ನು ತಪ್ಪಿಸಬೇಕು. ಇನ್ನೊಂದೆಡೆ, ನಿಮಗೆ ಯಕೃತ್ತಿಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೆ, ಹಾಗಲಕಾಯಿಯನ್ನು ಮರೆತೂ ಕೂಡ ಸೇವಿಸಬಾರದು.

ಇದನ್ನೂ ಓದಿ-ವಾರದ ಈ ದಿನ ಕೂದಲು ಕತ್ತರಿಸುವುದು ಅತ್ಯಂತ ಶುಭ, ಮನೆಯಲ್ಲಿ ಧನವೃಷ್ಟಿಗೆ ಕಾರಣ!

ರಕ್ತದಲ್ಲಿ ಕಡಿಮೆ ಸಕ್ಕರೆ ಹೊಂದಿರುವ ರೋಗಿಗಳು ಸೇವಿಸಬಾರದು 
ಹಾಗಲಕಾಯಿ ಸೇವನೆಯಿಂದ ರಕ್ತದಲ್ಲಿನ ಸಕ್ಕರೆ ಅಂಶ ನಿಯಂತ್ರಣಕ್ಕೆ ಬರುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ, ಯಾರ ರಕ್ತದಲ್ಲಿನ ಸಕ್ಕರೆ ಕಡಿಮೆ ಇರುತ್ತದೆಯೋ, ಅಂಥವರು ಹಾಗಲಕಾಯಿಯನ್ನು ಸೇವಿಸಬಾರದು. . ಇದು ನಿಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಮತ್ತಷ್ಟು ಕಡಿಮೆ ಮಾಡಬಹುದು.

ಇದನ್ನೂ ಓದಿ-ಮನೆಯ ಒಗ್ಗರಣೆ ಡಬ್ಬಿಯಲ್ಲಿರುವ ಈ ಕಾಳು ನೈಸರ್ಗಿಕವಾಗಿ ನಿಮ್ಮ ಕೂದಲನ್ನು ಕಪ್ಪಾಗಿಸುತ್ತದೆ!

(ಹಕ್ಕುತ್ಯಾಗ- ಈ ಲೇಖನದಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯಕೀಯ ಸಲಹೆ ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News