ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನುವುದರಿಂದ ಎಷ್ಟೊಂದು ಆರೋಗ್ಯ ಪ್ರಯೋಜನಗಳಿವೆ ಗೊತ್ತಾ?

Benifits of Papaya: ಆರೋಗ್ಯವಾಗಿರಲು ಊಟದೊಂದಿಗೆ ಹಲವಾರು ಹಣ್ಣುಗಳ ಸೇವನೆಯೂ ಅಗತ್ಯ.. ಅದರಲ್ಲಿ ಮುಖ್ಯವಾದದ್ದು ಪಪ್ಪಾಯಿ.. ಈ ಹಣ್ಣನ್ನು ಬೆಳಗಿನ ಜಾವ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದಾಗಿದೆ..  

Written by - Savita M B | Last Updated : Dec 9, 2023, 11:36 AM IST
  • ಆರೋಗ್ಯಕರ ಉಪಹಾರದೊಂದಿಗೆ ನಿಮ್ಮ ದಿನವನ್ನು ಪ್ರಾರಂಭಿಸುವುದು ಬಹಳ ಮುಖ್ಯ
  • ಇದು ದಿನವಿಡೀ ಶಕ್ತಿಯುತವಾಗಿ ಮತ್ತು ಸಕ್ರಿಯವಾಗಿರಲು ಸಹಾಯ ಮಾಡುತ್ತದೆ.
  • ಪಪ್ಪಾಯಿಯನ್ನು ತಿನ್ನುವುದರಿಂದಾಗುವ ಅನೇಕ ಪ್ರಯೋಜನಗಳ ಬಗ್ಗೆ ತಿಳಿಯೋಣ..
ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನುವುದರಿಂದ ಎಷ್ಟೊಂದು ಆರೋಗ್ಯ ಪ್ರಯೋಜನಗಳಿವೆ ಗೊತ್ತಾ?  title=

Papaya Benifits: ಆರೋಗ್ಯವಾಗಿರಲು ಹಲವಾರು ಪ್ರಯೋಗಳನ್ನು ಮಾಡಬೇಕಿಲ್ಲ.. ನಮ್ಮ ಆಹಾರ ಶೈಲಿಯನ್ನು ಬದಲಾಯಿಸಿದರೇ ಸಾಕು.. ಹೌದು ಪ್ರತಿದಿನ ಉತ್ತಮ ತರಕಾರಿ ಹಣ್ಣುಗಳ ಸೇವನೆಯು ನಿಮ್ಮನ್ನು ಬಲಿಷ್ಠವಾಗಿರಿಸುತ್ತದೆ ಎಂಬುದು ನಿಮಗೆ ಆದರೆ ಯಾವ ಹಣ್ಣುಗಳು ದೇಹಕ್ಕೆ ಹೆಚ್ಚು ಉತ್ತಮ ಎಂಬುದು ನಿಮಗೆ ಗೊತ್ತಾ..? 

ಇನ್ನು ಆರೋಗ್ಯಕರ ಹಣ್ಣುಗಳ ಸೇವನೆಯೊಂದಿಗೆ..  ನಿಮ್ಮ ದಿನವನ್ನು ಪ್ರಾರಂಭಿಸುವುದು ಬಹಳ ಮುಖ್ಯ ಏಕೆಂದರೆ ಇದು ದಿನವಿಡೀ ಶಕ್ತಿಯುತವಾಗಿ ಮತ್ತು ಸಕ್ರಿಯವಾಗಿರಲು ಸಹಾಯ ಮಾಡುತ್ತದೆ. ಇದೀಗ ನಾವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿಯನ್ನು ತಿನ್ನುವುದರಿಂದಾಗುವ ಅನೇಕ ಪ್ರಯೋಜನಗಳ ಬಗ್ಗೆ ತಿಳಿಯೋಣ.. 

* ಪಪ್ಪಾಯಿ ನಮ್ಮ ದೇಹಕ್ಕೆ ಹಲವಾರು ಪೌಷ್ಟಿಕಾಂಶದ ಪ್ರಯೋಜನಗಳನ್ನು ನೀಡುತ್ತದೆ. ಹಾಗಾಗಿ ಪ್ರತಿದಿನ ಬೆಳಗ್ಗೆ ಪಪ್ಪಾಯಿಯನ್ನು ತಿಂದರೆ ತೂಕ ಇಳಿಸಿಕೊಳ್ಳಬಹುದು. ಏಕೆಂದರೆ ಈ ಹಣ್ಣು ಕಡಿಮೆ ಕ್ಯಾಲೋರಿ ಹೊಂದಿದೆ.

* ಈ ಹಣ್ಣಿನಲ್ಲಿ ನಾರಿನಂಶ ಹೆಚ್ಚಿರುವುದರಿಂದ ಹೊಟ್ಟೆಯ ಹಸಿವನ್ನು ನೀಗಿಸುತ್ತದೆ.. ಅಂದರೆ ದೀರ್ಘಕಾಲದವರೆಗೆ ಹಸಿವಾಗುವುದಿಲ್ಲ..

ಇದನ್ನೂ ಓದಿ-ಬೆಳಗಿನ ಉಪಾಹಾರದಲ್ಲಿ ಪಪ್ಪಾಯಿಯನ್ನು ತಿನ್ನಿ, ಈ 5 ಅದ್ಭುತ ಪ್ರಯೋಜನ ಪಡೆಯಿರಿ

* ಪಪ್ಪಾಯಿಯಲ್ಲಿ ಪಪೈನ್ ಎಂಬ ಜೀರ್ಣಕಾರಿ ಕಿಣ್ವವಿದ್ದು.. ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದು ವಾಯು, ಗ್ಯಾಸ್ ಮತ್ತು ಆಮ್ಲೀಯತೆಯಂತಹ ಜೀರ್ಣಕಾರಿ ಸಮಸ್ಯೆಗಳನ್ನು ತಡೆಯುತ್ತದೆ. ಅಲ್ಲದೇ ಪಪ್ಪಾಯಿ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.. 

* ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನುವುದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಬಹುದಾಗಿದೆ... ಪಪ್ಪಾಯಿಯು ವಿಟಮಿನ್ ಸಿ ಯಲ್ಲಿ ಸಮೃದ್ಧವಾಗಿದ್ದು.. ಇದರಿಂದ ನಿಮ್ಮ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಮತ್ತು  ಸೋಂಕು ಮತ್ತು ರೋಗಗಳನ್ನು ಬರದಂತೆ ತಡೆಯಬಹುದಾಗಿದೆ.. 

* ಪಪ್ಪಾಯಿಯನ್ನು ಬೆಳಗಿನ ಜಾವ ತಿನ್ನುವುದು ದೇಹದಲ್ಲಿನ ವಿಷವನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ. ಪಪ್ಪಾಯಿ ಬೀಜಗಳು ಮಧುಮೇಹಿಗಳಿಗೆ ತುಂಬಾ ಒಳ್ಳೆಯದು. 

ಇದನ್ನೂ ಓದಿ-ಕೂದಲು ಉದುರುವುದನ್ನು ತಕ್ಷಣವೇ ನಿಲ್ಲಿಸಲು ಈ ಬೀಜವೊಂದೇ ಪರಿಹಾರ

ಸೂಚನೆ: ಆತ್ಮೀಯ ಓದುಗರೇ, ನಮ್ಮ ಸುದ್ದಿಗಳನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಸುದ್ದಿಯನ್ನು ನಿಮಗೆ ಅರಿವು ಮೂಡಿಸುವ ಉದ್ದೇಶದಿಂದ ಬರೆಯಲಾಗಿದೆ. ಇದನ್ನು ಬರೆಯುವಲ್ಲಿ ನಾವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯ ಸಹಾಯವನ್ನು ತೆಗೆದುಕೊಂಡಿದ್ದೇವೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದ ಯಾವುದನ್ನಾದರೂ ನೀವು ಎಲ್ಲಿಯಾದರೂ ಓದಿದ್ದರೆ, ಅದನ್ನು ಅಳವಡಿಸಿಕೊಳ್ಳುವ ಮೊದಲು ಖಂಡಿತವಾಗಿಯೂ ವೈದ್ಯರನ್ನು ಸಂಪರ್ಕಿಸಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News