/kannada/photo-gallery/shikanji-buttermilk-is-helpful-in-dissolving-stubborn-obesity-around-the-waist-249358 ಒಂದು ಗ್ಲಾಸ್‌ ಮಜ್ಜಿಗೆಗೆ ಈ ಪದಾರ್ಥ ಬೆರೆಸಿ ಕುಡಿಯಿರಿ ಸಾಕು: ಸೊಂಟದ ಸುತ್ತ ತುಂಬಿರುವ ಹಠಮಾರಿ ಬೊಜ್ಜು ಮಂಜು ಕರಗಿದಂತೆ ಕರಗುತ್ತೆ! ಒಂದು ಗ್ಲಾಸ್‌ ಮಜ್ಜಿಗೆಗೆ ಈ ಪದಾರ್ಥ ಬೆರೆಸಿ ಕುಡಿಯಿರಿ ಸಾಕು: ಸೊಂಟದ ಸುತ್ತ ತುಂಬಿರುವ ಹಠಮಾರಿ ಬೊಜ್ಜು ಮಂಜು ಕರಗಿದಂತೆ ಕರಗುತ್ತೆ! 249358

ಬೆಳಿಗ್ಗೆ ಎದ್ದ ತಕ್ಷಣ ಈ ಜ್ಯೂಸ್‌ ಕುಡಿದರೇ ಸಾಕು ಶುಗರ್ ಸಂಪೂರ್ಣ ಕಂಟ್ರೋಲ್ ಆಗುತ್ತೆ!!

 best juices for diabetes: ಕೆಲವು ರೀತಿಯ ಜ್ಯೂಸ್‌ಗಳು ಮಧುಮೇಹವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿ. ಬೆಳಿಗ್ಗೆ ಇವುಗಳನ್ನು ಕುಡಿಯುವುದರಿಂದ ದಿನವಿಡೀ ಶುಗರ್ ‌ಕಂಟ್ರೋಲ್‌ನಲ್ಲಿನರುತ್ತದೆ.. 

Written by - Savita M B | Last Updated : Jul 8, 2024, 04:50 PM IST
  • ಒಮ್ಮೆ ಮಧುಮೇಹ ಬಂದರೇ ಅದನ್ನು ಸಂಪೂರ್ಣವಾಗಿ ಗುಣಪಡಿಸುವುದು ಅಸಾಧ್ಯ
  • ಮೆಂತ್ಯ ಬೀಜಗಳಲ್ಲಿ ಫೈಬರ್ ಸಮೃದ್ಧವಾಗಿದೆ
ಬೆಳಿಗ್ಗೆ ಎದ್ದ ತಕ್ಷಣ ಈ ಜ್ಯೂಸ್‌ ಕುಡಿದರೇ ಸಾಕು ಶುಗರ್ ಸಂಪೂರ್ಣ ಕಂಟ್ರೋಲ್ ಆಗುತ್ತೆ!! title=

Health Tips: ಒಮ್ಮೆ ಮಧುಮೇಹ ಬಂದರೇ ಅದನ್ನು ಸಂಪೂರ್ಣವಾಗಿ ಗುಣಪಡಿಸುವುದು ಕಷ್ಟ. ಆದರೆ ಇದನ್ನು ನಿಯಂತ್ರಿಸಬಹುದು. ಅದಕ್ಕಾಗಿ ಮಧುಮೇಹಿಗಳು ಆಹಾರದ ಬಗ್ಗೆ ಜಾಗರೂಕರಾಗಿರಬೇಕು. ಕೆಲವು ರೀತಿಯ ಜ್ಯೂಸ್‌ಗಳು ಮಧುಮೇಹವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿ. ಬೆಳಿಗ್ಗೆ ಇವುಗಳನ್ನು ಕುಡಿಯುವುದರಿಂದ ದಿನವಿಡೀ ಶುಗರ್ ‌ ಕಂಟ್ರೋಲ್‌ನಲ್ಲಿನರುತ್ತದೆ.. 

*ಬೆಳಿಗ್ಗೆ ಬೆಚ್ಚಗಿನ ನೀರಿನಲ್ಲಿ ನಿಂಬೆ ರಸವನ್ನು ಹಾಕಿ ಕುಡಿಯುವುದು ಮಧುಮೇಹ ರೋಗಿಗಳಿಗೆ ಒಳ್ಳೆಯದು. ನಿಂಬೆಯಲ್ಲಿರುವ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ದೇಹವನ್ನು ಆಕ್ಟೀವ್‌ ಆಗಿರಿಸುತ್ತವೆ.. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ..

ಇದನ್ನೂ ಓದಿ-ಕೊಬ್ಬರಿ ಎಣ್ಣೆಯಲ್ಲಿ ಅಡಗಿದೆ ಸೌಂದರ್ಯದ ಗುಟ್ಟು

*ಮೆಂತ್ಯ ಬೀಜಗಳಲ್ಲಿ ಫೈಬರ್ ಸಮೃದ್ಧವಾಗಿದೆ. ಹೀಗಾಗಿ ರಾತ್ರಿಯಿಡೀ ನೀರಿನಲ್ಲಿ ನೆನೆಸಿದ ಮೆಂತ್ಯ ಬೀಜಗಳ ನೀರನ್ನು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.

*ಆಮ್ಲಾದಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದರಲ್ಲಿ ಆ್ಯಂಟಿಆಕ್ಸಿಡೆಂಟ್ ಹೇರಳವಾಗಿರುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಆಮ್ಲಾ ದೇಹದಲ್ಲಿ ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸಿ.. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ-ಮಳೆಗಾಲದಲ್ಲಿ ಮನೆಯ ಮುಂದೆ ಈ ಗಿಡವನ್ನು ತೂಗು ಹಾಕಿ… ಹಲ್ಲಿ, ಜೇಡ, ಇರುವೆ, ಸೊಳ್ಳೆ ಇದ್ಯಾವುದೂ ಬರಲ್ಲ!

*ದಾಲ್ಚಿನ್ನಿ ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ದಾಲ್ಚಿನ್ನಿಯಲ್ಲಿರುವ ಅಂಶಗಳು ದೇಹದಲ್ಲಿ ಇನ್ಸುಲಿನ್ ಅನ್ನು ಹೆಚ್ಚಿಸಿ.. ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡುತ್ತದೆ.  

*ಹಸಿ ತರಕಾರಿಗಳು ಪೋಷಕಾಂಶಗಳಿಂದ ಸಮೃದ್ಧವಾಗಿವೆ.. ನಿಮ್ಮ ರುಚಿಗೆ ಅನುಗುಣವಾಗಿ, ನೀವು ಕ್ಯಾರೆಟ್, ಸೌತೆಕಾಯಿ, ಬೀಟ್ರೂಟ್ ಮುಂತಾದ ತರಕಾರಿಗಳ ಸಲಾಡ್‌ ಅಥವಾ ಜ್ಯೂಸ್‌ ಮಾಡಿ ಬೆಳಿಗ್ಗೆ ಅದನ್ನು ಸೇವಿಸಬಹುದು. ಇದರಿಂದ ನಿಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವೂ ನಿಯಂತ್ರಣದಲ್ಲಿದೆ.

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.