Maha Shivratri 2023: ಶಿವನಿಗೆ ಬಿಲ್ವಪತ್ರೆ ಅರ್ಪಿಸುವಾಗ ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ

ಜ್ಯೋತಿಷ್ಯ ಶಾಸ್ತ್ರದಲ್ಲಿ ಫಾಲ್ಗುಣ ಮಾಸದಲ್ಲಿ ಬರುವ ಶಿವರಾತ್ರಿಯನ್ನು ಮಹಾಶಿವರಾತ್ರಿ ಎಂದು ಕರೆಯಲಾಗುತ್ತದೆ. ಈ ದಿನದಂದು ಮಹಾದೇವ ಮತ್ತು ತಾಯಿ ಪಾರ್ವತಿದೇವಿಯನ್ನು ಕ್ರಮಬದ್ಧವಾಗಿ ಪೂಜಿಸುವುದರಿಂದ ಭಕ್ತರ ಎಲ್ಲಾ ಇಷ್ಟಾರ್ಥಗಳು ಈಡೇರುತ್ತವೆ.

Written by - Puttaraj K Alur | Last Updated : Feb 11, 2023, 08:09 PM IST
  • ಜ್ಯೋತಿಷ್ಯಶಾಸ್ತ್ರದ ಪ್ರಕಾರ ಬಿಲ್ವಪತ್ರೆ ಅರ್ಪಿಸುವುದರಿಂದ ಶಿವನು ಶೀಘ್ರವೇ ಸಂತೋಷಪಡುತ್ತಾನೆ
  • ಭಕ್ತಿಯಿಂದ ಬಿಲ್ವಪತ್ರೆ ಅರ್ಪಿಸಿದರೆ ಭಕ್ತರ ಎಲ್ಲಾ ಇಷ್ಟಾರ್ಥಗಳನ್ನು ಶಿವ ಪೂರೈಸುತ್ತಾನೆ
  • ಶಿವನಿಗೆ ಬಿಲ್ವಪತ್ರೆ ಅರ್ಪಿಸುವುದರಿಂದ 1 ಕೋಟಿ ಕನ್ಯಾದಾನಕ್ಕೆ ಸಮಾನವಾದ ಪುಣ್ಯ ಪ್ರಾಪ್ತಿ
Maha Shivratri 2023: ಶಿವನಿಗೆ ಬಿಲ್ವಪತ್ರೆ ಅರ್ಪಿಸುವಾಗ ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ  title=
Mahashivratri 2023 Rules

ನವದೆಹಲಿ: ಹಿಂದೂ ಧರ್ಮದ ಪ್ರಕಾರ ಮಹಾಶಿವರಾತ್ರಿ ಹಬ್ಬವನ್ನು ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಚತುರ್ದಶಿ ದಿನಾಂಕದಂದು ಆಚರಿಸಲಾಗುತ್ತದೆ. ಈ ಬಾರಿ ಮಹಾಶಿವರಾತ್ರಿ ಹಬ್ಬವನ್ನು ಫೆಬ್ರವರಿ 18ರಂದು ಆಚರಿಸಲಾಗುತ್ತದೆ. ಈ ದಿನದಂದು ಬಿಲ್ವಪತ್ರೆಯೊಂದಿಗೆ ಪೂಜೆ ಮಾಡುವ ವಿಶೇಷ ಮಹತ್ವವನ್ನು ಹೇಳಲಾಗಿದೆ. ಬಿಲ್ವಪತ್ರೆಯಿಲ್ಲದೆ ಶಿವನ ಆರಾಧನೆಯು ಅಪೂರ್ಣವೆಂದು ಪರಿಗಣಿಸಲಾಗಿದೆ. ಬಿಲ್ವಪತ್ರೆಯು ಶಿವನಿಗೆ ಅತ್ಯಂತ ಪ್ರಿಯವಾದುದು ಎಂಬುದು ಧಾರ್ಮಿಕ ನಂಬಿಕೆ.

ಜ್ಯೋತಿಷ್ಯಶಾಸ್ತ್ರದ ಪ್ರಕಾರ ಬಿಲ್ವಪತ್ರೆಯನ್ನು ಅರ್ಪಿಸುವುದರಿಂದ ಶಿವನು ಶೀಘ್ರವೇ ಸಂತೋಷಪಡುತ್ತಾನೆ ಮತ್ತು ಭಕ್ತರ ಎಲ್ಲಾ ಇಷ್ಟಾರ್ಥಗಳನ್ನು ಪೂರೈಸುತ್ತಾನೆ. ಇದರಿಂದ ಶಿವನ ತಲೆ ತಂಪಾಗಿರುತ್ತದೆ ಎಂದು ಹೇಳಲಾಗುತ್ತದೆ. ಶಿವನಿಗೆ ಬಿಲ್ವಪತ್ರೆಯನ್ನು ಅರ್ಪಿಸುವುದರಿಂದ 1 ಕೋಟಿ ಕನ್ಯಾದಾನಕ್ಕೆ ಸಮಾನವಾದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಹೇಳಲಾಗುತ್ತದೆ. ಮತ್ತೊಂದೆಡೆ ಬಿಲ್ವಪತ್ರೆಯನ್ನು ಅರ್ಪಿಸುವಾಗ ಕೆಲವು ನಿಯಮ ಅನುಸರಿಸದಿದ್ದರೆ, ಶಿವನು ಕೋಪಗೊಳ್ಳುತ್ತಾನೆ. ಬಿಲ್ವಪತ್ರೆಯನ್ನು ಅರ್ಪಿಸುವ ನಿಯಮಗಳು ಮತ್ತು ಪ್ರಯೋಜನಗಳ ಬಗ್ಗೆ ತಿಳಿಯಿರಿ.  

ಇದನ್ನೂ ಓದಿ: ಮಕರ ರಾಶಿಯಲ್ಲಿ ಪವರ್ಫುಲ್ ಬುಧಾದಿತ್ಯ ರಾಜಯೋಗ, 4 ರಾಶಿಗಳ ಜನರಿಗೆ ಬಂಪರ್ ಲಾಭ!

ಶಿವಲಿಂಗದ ಮೇಲೆ ಬಿಲ್ವಪತ್ರೆ ಅರ್ಪಿಸುವುದರ ಪ್ರಯೋಜನ

- ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶಿವನಿಗೆ ಬಿಲ್ವಪತ್ರೆಯನ್ನು ಅರ್ಪಿಸುವುದರಿಂದ, ವ್ಯಕ್ತಿಯ ಬಡತನವು ದೂರವಾಗುತ್ತದೆ. ಆರ್ಥಿಕ ಸಂಕಷ್ಟದಿಂದ ಮುಕ್ತಿ ದೊರೆತು ಸಂಪತ್ತು ವೃದ್ಧಿಯಾಗುತ್ತದೆ.

- ಭಗವಾನ್ ಶಿವನ ಆರಾಧನೆಯ ಸಮಯದಲ್ಲಿ ಶಿವಲಿಂಗದ ಮೇಲೆ ಬಿಲ್ವಪತ್ರೆಯನ್ನು ಅರ್ಪಿಸುವ ಮಹಿಳೆಯರು ಅಖಂಡ ಸೌಭಾಗ್ಯವನ್ನು ಪಡೆಯುತ್ತಾರೆ ಎಂದು ಹೇಳಲಾಗುತ್ತದೆ.

- ನಿಮ್ಮ ಯಾವುದೇ ಆಸೆಗಳು ಈಡೇರಲು ಬಿಲ್ವಪತ್ರೆಯ ಮೇಲೆ ಶ್ರೀಗಂಧದಿಂದ ರಾಮ ಅಥವಾ ಓಂ ನಮಃ ಶಿವಾಯ ಎಂದು ಬರೆಯುವ ಮೂಲಕ ಶಿವಲಿಂಗಕ್ಕೆ ಅರ್ಪಿಸುವುದು ಪ್ರಯೋಜನಕಾರಿ.

- ಶಿವನಿಗೆ ಬಿಲ್ವಪತ್ರೆಯನ್ನು ಅರ್ಪಿಸುವುದರಿಂದ ಭೋಲೇನಾಥನ ಕೃಪೆ ಉಳಿಯುತ್ತದೆ ಎಂದು ಹೇಳಲಾಗುತ್ತದೆ. ಅಲ್ಲದೆ ವ್ಯಕ್ತಿಯು ಎಲ್ಲಾ ತೊಂದರೆಗಳಿಂದ ಮುಕ್ತನಾಗುತ್ತಾನೆ.

ಇದನ್ನೂ ಓದಿ: Astro Tips: ಶನಿವಾರದಂದು ಈ ಸಣ್ಣ ಕೆಲಸ ಮಾಡಿದ್ರೆ ಶನಿದೇವನ ಕೋಪದಿಂದ ಪಾರಾಗಬಹುದು!

ಈ ನಿಯಮಗಳೊಂದಿಗೆ ಬಿಲ್ವಪತ್ರೆ ಅರ್ಪಿಸಿ

- ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನೀವು ಶಿವನಿಗೆ 3 ಮುಖದ ಬಿಲ್ವಪತ್ರೆಯನ್ನು ಅರ್ಪಿಸಿದರೆ, ಅದರಲ್ಲಿ ಯಾವುದೇ ಕಲೆ ಇರಬಾರದು ಎಂಬುದನ್ನು ನೆನಪಿನಲ್ಲಿಡಿ. ಕಪ್ಪು ಚುಕ್ಕೆ ಇದ್ದರೂ ಬಿಲ್ವಪತ್ರೆ ಅರ್ಪಿಸಬಾರದು.

- ಅಪ್ಪಿತಪ್ಪಿಯೂ ಶಿವಲಿಂಗಕ್ಕೆ ಬಾಡಿದ ಬಿಲ್ವಪತ್ರೆಯನ್ನು ಅರ್ಪಿಸಬಾರದು ಎಂದು ಹೇಳಲಾಗುತ್ತದೆ.

- ಶಿವಲಿಂಗದ ಮೇಲೆ ಬಿಲ್ವಪತ್ರೆಯನ್ನು ಅರ್ಪಿಸುವ ಮೊದಲು ಅದನ್ನು ಶುದ್ಧ ನೀರಿನಿಂದ ಸ್ವಚ್ಛವಾಗಿ ತೊಳೆಯಬೇಕು. ಇದರ ನಂತರ ಬಿಲ್ವಪತ್ರೆಯ ನಯವಾದ ಭಾಗವನ್ನು ಶಿವಲಿಂಗದ ಮೇಲೆ ಅರ್ಪಿಸಬೇಕು.

- ಬಿಲ್ವಪತ್ರೆಯು ಹಳೆಯ ಮತ್ತು ಹರಿದಿರಬಾರದು.

 - ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಕನಿಷ್ಠ 1 ಬಿಲ್ವಪತ್ರೆಯನ್ನು ನಿಯಮಿತವಾಗಿ ಅರ್ಪಿಸಬೇಕು. ಬಿಲ್ವಪತ್ರೆಯನ್ನು 11 ಅಥವಾ 21ರ ಸಂಖ್ಯೆಯಲ್ಲಿ ನೀಡಲಾಗುತ್ತದೆ.

(ಗಮನಿಸಿರಿ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News