Health Tips: ಈ ಸಾಂಬಾರ ಪದಾರ್ಥಗಳಲ್ಲಡಗಿದೆ ರಕ್ತದಲ್ಲಿನ ಸಕ್ಕರೆ ಹೀರಿಕೊಳ್ಳುವ ಸಾಮರ್ಥ್ಯ!

Health Care Tips:ಇಂದು ನಾವು ನಿಮಗೆ ಕೆಲ ಮಸಾಲೆ ಪದಾರ್ಥಗಳ ಕುರಿತು ಮಾಹಿತಿಯನ್ನು ನೀಡುತ್ತಿದ್ದು, ಅವುಗಳನ್ನು ಬಳಸಿ ನೀವು ರಕ್ತದಲ್ಲಿ ಹೆಚ್ಚಾಗುತ್ತಿರುವ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು, 

Written by - Nitin Tabib | Last Updated : May 30, 2023, 10:17 PM IST
  • ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕಾಗಿ ಮೆಂತ್ಯವನ್ನು ಪಾತ್ರೆಯಲ್ಲಿ ಹಾಕಿ ರಾತ್ರಿಯಿಡೀ ನೆನೆಸಿಡಿ.
  • ನಂತರ ನೀವು ಮರುದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಸೇವಿಸಿ.
  • ಇದು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದರೊಂದಿಗೆ ನಿಮ್ಮ ಹೃದಯದ ಆರೋಗ್ಯವೂ ಚೆನ್ನಾಗಿರುತ್ತದೆ.
Health Tips: ಈ ಸಾಂಬಾರ ಪದಾರ್ಥಗಳಲ್ಲಡಗಿದೆ ರಕ್ತದಲ್ಲಿನ ಸಕ್ಕರೆ ಹೀರಿಕೊಳ್ಳುವ ಸಾಮರ್ಥ್ಯ! title=

Health Care Tips: ಇಂದು ನಾವು ನಿಮಗೆ ಕೆಲ ಮಸಾಲೆ ಪದಾರ್ಥಗಳ ಕುರಿತು ಮಾಹಿತಿಯನ್ನು ನೀಡುತ್ತಿದ್ದು, ಅವುಗಳನ್ನು ಬಳಸಿ ನೀವು ರಕ್ತದಲ್ಲಿ ಹೆಚ್ಚಾಗುತ್ತಿರುವ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು, ಹಾಗಾದರೆ ಮಧುಮೇಹವನ್ನು ನಿಯಂತ್ರಿಸುವ ಆ ಮಸಾಲೆ ಪದಾರ್ಥಗಳು ಯಾವುವು ತಿಳಿದುಕೊಳ್ಳೋಣ ಬನ್ನಿ.

1. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಶುಂಠಿಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಅಥವಾ ಕ್ರಶ್ ಮಾಡಿ. ನಂತರ ನೀವು ಬಾಣಲೆಯಲ್ಲಿ ಒಂದು ಕಪ್ ನೀರು ಮತ್ತು ಶುಂಠಿಯನ್ನು ಹಾಕಿ ಚೆನ್ನಾಗಿ ಕುದಿಸಿ ಮತ್ತು ಚಹಾ ತಯಾರಿಸಿ. ಇದರ ನಂತರ ನೀವು ಅದನ್ನು ಬಿಸಿಯಾಗಿ ಸೇವಿಸಿ. ಶುಂಠಿ ಚಹಾವನ್ನು ಕುಡಿಯುವುದರಿಂದ, ನಿಮ್ಮ ರಕ್ತದಲ್ಲಿನ ಸಕ್ಕರೆಯು ನಿಯಂತ್ರಣದಲ್ಲಿರುತ್ತದೆ.

2. ಇದಕ್ಕಾಗಿ ಮತ್ತೊಂದು ಉಪಾಯ ಎಂದರೆ ಒಂದು ಬಾಣಲೆಯಲ್ಲಿ ದಾಲ್ಚಿನ್ನಿ ಕಡ್ಡಿ ಮತ್ತು ನೀರನ್ನು ಹಾಕಿ ಚೆನ್ನಾಗಿ ಕುದಿಸಿ ಮತ್ತು ದಾಲ್ಚಿನ್ನಿ ಟೀ ತಯಾರಿಸಿ. ನಂತರ ಅದನ್ನು ಫಿಲ್ಟರ್ ಮಾಡಿ ಮತ್ತು ಸೇವಿಸಿ. ದಾಲ್ಚಿನ್ನಿ ಆಂಟಿವೈರಲ್, ಆಂಟಿಬ್ಯಾಕ್ಟೀರಿಯಲ್ ಮತ್ತು ಆಂಟಿಫಂಗಲ್ ಗುಣಲಕ್ಷಣಗಳನ್ನು ಹೊಂದಿದೆ, ಹೀಗಾಗಿ ಅದು ಮಧುಮೇಹ ರೋಗಿಗಳಿಗೆ ಉತ್ತಮವಾಗಿದೆ.

3. ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕಾಗಿ ಮೆಂತ್ಯವನ್ನು ಪಾತ್ರೆಯಲ್ಲಿ ಹಾಕಿ ರಾತ್ರಿಯಿಡೀ ನೆನೆಸಿಡಿ. ನಂತರ ನೀವು ಮರುದಿನ ಬೆಳಗ್ಗೆ  ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಸೇವಿಸಿ. ಇದು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದರೊಂದಿಗೆ ನಿಮ್ಮ ಹೃದಯದ ಆರೋಗ್ಯವೂ ಚೆನ್ನಾಗಿರುತ್ತದೆ.

4. ಲವಂಗವು ಆಂಟಿವೈರಲ್, ಉರಿಯೂತ ನಿವಾರಕ, ಕಾರ್ಮಿನೇಟಿವ್ ಮತ್ತು ಆಂಟಿ ಫ್ಲಾಟ್ಯುಲೆನ್ಸ್ ಗುಣಗಳನ್ನು ಹೊಂದಿದೆ. ಹೀಗಾಗಿ  ಲವಂಗವು ಮಧುಮೇಹವನ್ನು ನಿಯಂತ್ರಿಸಲು ಉಪಯುಕ್ತವಾಗಿದೆ. ಇದಕ್ಕಾಗಿ ಸುಮಾರು 4 ರಿಂದ 5 ಲವಂಗವನ್ನು ಒಂದು ಲೋಟ ನೀರಿನಲ್ಲಿ ರಾತ್ರಿಯಿಡೀ ನೆನೆಸಿಡಿ. ನಂತರ ನೀವು ಮರುದಿನ ಬೆಳಗ್ಗೆ  ಅದನ್ನು ಕುಡಿಯಿರಿ ಮತ್ತು ಲವಂಗವನ್ನು ತಿನ್ನಿರಿ.

ಇದನ್ನೂ ಓದಿ-Health Tips: ಜಾಮೂನ್ ಸೇವನೆಯ ಕುರಿತಾದ ಈ ಸಂಗತಿ ನಿಮಗೆ ತಿಳಿದಿದೆಯೇ?

5. ಅರಿಶಿಣದಲ್ಲಿ  ಆಯುರ್ವೇದ ಗುಣಗಳಿದ್ದು ಇದು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಅರಿಶಿಣವನ್ನು  ನೀರಿನಲ್ಲಿ ಕುದಿಸಿ ಅಥವಾ ಹಾಲಿಗೆ ಸೇರಿಸಿ ಸೇವಿಸಬಹುದು. 

ಇದನ್ನೂ ಓದಿ-Diabetes ಕಾಯಿಲೆಗೆ ಪರಿಣಾಮಕಾರಿ ಮದ್ದು ಈ ಎಣ್ಣೆಯುಕ್ತ ಹಣ್ಣು!

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾದ ಮಾಹಿತಿ ಮನೆಮದ್ದು ಹಾಗೂ ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯಕೀಯ ಸಲಹೆ ಪಡೆಯಿರಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ)

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News