ಅಗಲಿದ ನಾಯಕನ ಗೌರವಾರ್ಥ ರಾಜ್ಯದಲ್ಲಿಂದು ಸರ್ಕಾರಿ ರಜೆ ಘೋಷಣೆ

ಅಗಲಿದ ನಾಯಕನ ಗೌರವಾರ್ಥ ರಾಜ್ಯದ  ಎಲ್ಲ ಸರಕಾರಿ ಕಚೇರಿಗಳು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Last Updated : Nov 12, 2018, 08:59 AM IST
ಅಗಲಿದ ನಾಯಕನ ಗೌರವಾರ್ಥ ರಾಜ್ಯದಲ್ಲಿಂದು ಸರ್ಕಾರಿ ರಜೆ ಘೋಷಣೆ title=

ಬೆಂಗಳೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಹಾಗೂ ರಾಜ್ಯ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ಅಗಲಿದ ನಾಯಕನ ಗೌರವಾರ್ಥ ರಾಜ್ಯದ  ಎಲ್ಲ ಸರಕಾರಿ ಕಚೇರಿಗಳು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕೇಂದ್ರ ಸಚಿವ ಅನಂತ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಮಾಡಲಾಗುವುದು. ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಅಗಲಿದ ನಾಯಕನ ಗೌರವಾರ್ಥ ರಾಜ್ಯದ  ಎಲ್ಲ ಸರಕಾರಿ ಕಚೇರಿಗಳು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟವು ಸಹ ಶಾಲೆಗಳಿಗೆ ರಜೆ ಘೋಷಿಸಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಸಿ. ಜಾಫರ್ ತಿಳಿಸಿದ್ದಾರೆ.

ಅಲ್ಲದೆ ಮೈಸೂರು ವಿವಿ, ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿ ಮತ್ತು ಧಾರವಾಡದ ಕರ್ನಾಟಕ ವಿವಿಯಲ್ಲಿ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

Trending News