‘ಒಂದು ಸರಳ ಪ್ರೇಮಕಥೆ’ಯಲ್ಲಿ ವಿನಯ್ ರಾಜಕುಮಾರ್ ಗೆ ‘ವಿಕ್ರಮ್’ ಬೆಡಗಿ ನಾಯಕಿ

Ondu Sarala Premada Kathe: ವಿನಯ್ ರಾಜಕುಮಾರ್ ಮತ್ತು ಸಿಂಪಲ್ ಸುನಿ ಕಾಂಬಿನೇನ್‍ನಲ್ಲಿ ಮೂಡಿ ಬರ್ತಿರುವ ಮೊದಲ ಸಿನಿಮಾ ‘ಒಂದು ಸರಳ ಪ್ರೇಮಕಥೆ’ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ​

Written by - YASHODHA POOJARI | Edited by - Puttaraj K Alur | Last Updated : Jan 25, 2023, 11:50 AM IST
  • ಸಿಂಪಲ್ ಸುನಿ & ವಿನಯ್ ರಾಜಕುಮಾರ್ ಕಾಂಬಿನೇಶನ್‍ನ ನೂತನ ಚಿತ್ರಕ್ಕೆ ನಾಯಕಿ ಆಯ್ಕೆ
  • ಮ್ಯೂಸಿಕಲ್ ಲವ್ ಸ್ಟೋರಿ ‘ಒಂದು ಸರಳ ಪ್ರೇಮಕಥೆ’ ಚಿತ್ರಕ್ಕೆ ಸ್ವತಿಷ್ಠ ಕೃಷ್ಣನ್ ನಾಯಕಿ
  • ಸ್ವತಿಷ್ಠ ಕೃಷ್ಣನ್ ಕಮಲ್ ಹಾಸನ್ ನಟನೆಯ 'ವಿಕ್ರಮ್' ಚಿತ್ರದ ಮೂಲಕ ಜನಪ್ರಿಯತೆ ಗಳಿಸಿದ್ದಾರೆ
‘ಒಂದು ಸರಳ ಪ್ರೇಮಕಥೆ’ಯಲ್ಲಿ ವಿನಯ್ ರಾಜಕುಮಾರ್ ಗೆ ‘ವಿಕ್ರಮ್’ ಬೆಡಗಿ ನಾಯಕಿ title=
‘ಒಂದು ಸರಳ ಪ್ರೇಮಕಥೆ’ ಸ್ವತಿಷ್ಠ ನಾಯಕಿ

ಬೆಂಗಳೂರು: ನಿರ್ದೇಶಕ ಸಿಂಪಲ್ ಸುನಿ ಮತ್ತು ವಿನಯ್ ರಾಜಕುಮಾರ್ ಕಾಂಬಿನೇಶನ್‍ನಲ್ಲಿ ಮೂಡಿ ಬರುತ್ತಿರುವ ನೂತನ ಚಿತ್ರಕ್ಕೆ ನಾಯಕಿ ಆಯ್ಕೆ ಆಗಿದ್ದಾರೆ. ಮ್ಯೂಸಿಕಲ್ ಲವ್ ಸ್ಟೋರಿ ಸಬ್ಜೆಕ್ಟ್ ಒಳಗೊಂಡ ‘ಒಂದು ಸರಳ ಪ್ರೇಮಕಥೆ’ ಚಿತ್ರದ ಮೂಲಕ 'ವಿಕ್ರಮ್' ಚಿತ್ರದಲ್ಲಿ ನಟಿಸಿರುವ ಸ್ವಾತಿಷ್ಠ ಕೃಷ್ಣನ್ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟಿದ್ದಾರೆ.

ವಿನಯ್ ರಾಜಕುಮಾರ್ ಮತ್ತು ಸಿಂಪಲ್ ಸುನಿ ಕಾಂಬಿನೇನ್‍ನಲ್ಲಿ ಮೂಡಿ ಬರ್ತಿರುವ ಮೊದಲ ಸಿನಿಮಾ ‘ಒಂದು ಸರಳ ಪ್ರೇಮಕಥೆ’ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಮ್ಯೂಸಿಕಲ್ ಲವ್ ಸ್ಟೋರಿ ಸಬ್ಜೆಕ್ಟ್ ಚಿತ್ರಕ್ಕಾಗಿ ನಾಯಕಿ ಹುಡುಕಾಟದಲ್ಲಿದ್ದ ಸಿಂಪಲ್ ಸುನಿ ಧಾರವಾಡ ಮೂಲದ ಕನ್ನಡತಿ ನಟಿ ಸ್ವತಿಷ್ಠ ಕೃಷ್ಣನ್ ಅವರನ್ನು ಕನ್ನಡ ಚಿತ್ರರಂಗಕ್ಕೆ ಕರೆ ತಂದಿದ್ದಾರೆ. ತಮಿಳು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಸ್ವತಿಷ್ಠ ಕೃಷ್ಣನ್ ಕಮಲ್ ಹಾಸನ್ ನಟನೆಯ 'ವಿಕ್ರಮ್' ಚಿತ್ರದ ಮೂಲಕ ಜನಪ್ರಿಯತೆ ಗಳಿಸಿಕೊಂಡಿದ್ದಾರೆ.  ವಿನಯ್ ರಾಜಕುಮಾರ್ ಗೆ ನಾಯಕಿಯಾಗುವ ಮೂಲಕ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಡುತ್ತಿದ್ದಾರೆ.

ಇದನ್ನೂ ಓದಿ: Oscar for Naatu Naatu : ಆಸ್ಕರ್‌ಗೆ ನಾಮಿನೇಟ್‌ ಆದ RRR ʼನಾಟು ನಾಟುʼ ಸಾಂಗ್‌..! ಅಧಿಕೃತ ಘೋಷಣೆ

ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಸಿಂಪಲ್ ಸುನಿ, ‘ನನಗೆ ಕನ್ನಡದ ಹುಡುಗಿಯೇ ನಾಯಕಿಯಾಗಿ ಬೇಕಿತ್ತು. ನನ್ನ ಎಲ್ಲಾ ಸಿನಿಮಾಗಳಲ್ಲೂ ಅದು ಮೊದಲ ಆದ್ಯತೆಯಾಗಿರುತ್ತದೆ. ವಿಕ್ರಮ್ ಸಿನಿಮಾದಲ್ಲಿ ಸ್ವತಿಷ್ಠ ಪಾತ್ರ ನೋಡಿ ಇಷ್ಟವಾಗಿತ್ತು. ಸ್ವತಿಷ್ಠ ಮೂಲತಃ ಉತ್ತರ ಕರ್ನಾಟಕದವರು. ನಮ್ಮ ಸಿನಿಮಾ ಪಾತ್ರಕ್ಕೆ ಅವರು ಸೂಕ್ತ ಎನಿಸಿತು. ಅವರು ಕೂಡ ಕಥೆ ಕೇಳಿ ಓಕೆ ಮಾಡಿ ನಮ್ಮ ಚಿತ್ರತಂಡ ಸೇರಿಕೊಂಡಿದ್ದಾರೆ’ ಎಂದು ತಿಳಿಸಿದರು.

ಚಿತ್ರಕ್ಕೆ ಪ್ರಸನ್ನ ಕಥೆ ಬರೆದಿದ್ದು, ಚಿತ್ರಕಥೆ, ಸಂಭಾಷಣೆ ಬರೆದು ಸಿಂಪಲ್ ಸುನಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಸಿಂಪಲ್ ಸುನಿ ಸದ್ಯದಲ್ಲೇ ಸಿನಿಮಾ ತಾರಾಬಳಗ ಎಲ್ಲದರ ಬಗ್ಗೆ ಅಧೀಕೃತ ಮಾಹಿತಿ ಹಂಚಿಕೊಳ್ಳಲಿದ್ದಾರೆ. ಚಿತ್ರಕ್ಕೆ ಮೈಸೂರು ರಮೇಶ್ ಬಂಡವಾಳ ಹೂಡುತ್ತಿದ್ದು, ವೀರ್ ಸಮರ್ಥ್ ಸಂಗೀತ ನಿರ್ದೇಶನ, ಸಭಾ ಛಾಯಾಗ್ರಾಹಣ ಚಿತ್ರಕ್ಕಿದೆ.

ಇದನ್ನೂ ಓದಿ: ಚಂದನವನದ "ಕ" ಅಕ್ಷರದ ಸಿನಿಮಾಗಳು ಇತಿಹಾಸದ ಪುಟ ಸೇರಿವೆ.ಇದೀಗ 'ಕಬ್ಜ' ಸಿನಿಮಾ ಕೂಡ ಅದೇ ಸಾಲಿನಲ್ಲಿ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News