ಮಹಿಳೆ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದ ಅಯೋಧ್ಯೆ ಅರ್ಚಕ ಬಂಧನ

ಮಹಿಳಾ ಭಕ್ತೆಯನ್ನು ತನ್ನ ವಶದಲ್ಲಿಟ್ಟುಕೊಂಡು ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ ಅಯೋಧ್ಯೆ ಮುಖ್ಯ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ. 

Last Updated : Jan 2, 2019, 01:35 PM IST
ಮಹಿಳೆ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದ ಅಯೋಧ್ಯೆ ಅರ್ಚಕ ಬಂಧನ title=

ಅಯೋಧ್ಯೆ: ಮಹಿಳಾ ಭಕ್ತೆಯನ್ನು ತನ್ನ ವಶದಲ್ಲಿಟ್ಟುಕೊಂಡು ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ ಅಯೋಧ್ಯೆ ಮುಖ್ಯ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ. 

ಅಯೋಧ್ಯೆ ದೇವಾಲಯದ ಮಹಂತ್ ಕೃಷ್ಣ ಕಾಂತಚಾರ್ಯ ಅವರಿಂದ ಆಧ್ಯಾತ್ಮಿಕತೆಯ ಬಗ್ಗೆ ಪಾಠ ಪ್ರವಚನದಲ್ಲಿ ಪಾಲ್ಗೊಳ್ಳಲು ವಾರಣಾಸಿಯಿಂದ ಡಿಸೆಂಬರ್ 24ರಂದು ಬಂದಿದ್ದ 30ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಎಂದು ಅಯೋಧ್ಯಾ ಆರಕ್ಷಕ ಅಧಿಕಾರಿ ಎ.ಕೆ.ಸಾವ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ದೇವಾಲಯದ ಮುಖ್ಯ ಅರ್ಚಕ ಕೃಷ್ಣಕಾಂತಾಚಾರ್ಯ ಅವರು ಧಾರ್ಮಿಕ ಪ್ರವಚನ ಕೇಳಲು ಬಂದಿದ್ದ ಮಹಿಳೆಯನ್ನು ದೇವಾಲಯದ ಆವರಣದಲ್ಲೇ ಉಳಿಯುವಂತೆ ಸೂಚಿಸಿದ್ದರು. ಬಳಿಕ ಆಕೆಯ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾರೆ. ಈ ಮಧ್ಯೆ ಸಂತ್ರಸ್ತ ಮಹಿಳೆ ಆತನಿಂದ ತಪ್ಪಿಸಿಕೊಂಡು ಪೊಲೀಸರಿಗೆ ಕರೆ ಮಾಡುವಲ್ಲಿ ಯಶಸ್ವಿಯಾಗಿದ್ದು, ಪೊಲೀಸರು ಆಕೆಯನ್ನು ರಕ್ಷಿಸಿ ಅರ್ಚಕನನ್ನು ಬಂಧಿಸಿದ್ದಾರೆ. 

ಸದ್ಯ ಸಂತ್ರಸ್ತ ಮಹಿಳೆಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಪೊಲೀಸರು ಪ್ರಕರಣದ ವಿಚಾರಣೆ ಆರಂಭಿಸಿದ್ದಾರೆ. 

Trending News