ಬೆಳಗಾವಿ: ಕರ್ನಾಟಕದಲ್ಲಿ ಯಾವ ಕಾಲದಲ್ಲೂ ಇಷ್ಟೊಂದು ಭ್ರಷ್ಟಾಚಾರ, ದುರಾಡಳಿತ ಇರಲಿಲ್ಲವೆಂದು ಬಿಜೆಪಿ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಆಯೋಜಿಸಿರುವ ಕಾಂಗ್ರೆಸ್ ಯುವಧ್ವನಿ ಸಮಾವೇಶ ಮತ್ತು ರ್ಯಾಲಿಯಲ್ಲಿ ಮಾತನಾಡಿರುವ ಅವರು, ‘ಈಗ ಬಿಜೆಪಿ ಸರ್ಕಾರದಲ್ಲಿ 40% ಕಮಿಷನ್ ನಡೆಯುತ್ತಿದೆ, ಹೀಗೆಂದು ಹೇಳಿದ್ದು ಸ್ವತಃ ಈ ಸಮಸ್ಯೆ ಎದುರಿಸುತ್ತಿರುವ ಗುತ್ತಿಗೆದಾರರು! ಅವರು ನೇರವಾಗಿ ಪ್ರಧಾನಮಂತ್ರಿಗಳಿಗೆ, ಅಮಿತ್ ಶಾ ಅವರಿಗೇ ಪತ್ರ ಬರೆದು 40% ಕಮಿಷನ್ ಬಗ್ಗೆ ದೂರಿದ್ದಾರೆ!’ ಎಂದು ಟೀಕಿಸಿದ್ದಾರೆ.
‘ರಾಹುಲ್ ಗಾಂಧಿಯವರು 46 ದಿನದ ಹಿಂದೆ ಹೇಳಿದ ಮಾತಿನ ಬಗ್ಗೆ ನಿನ್ನೆ ಪೊಲೀಸರು ಸಾಕ್ಷಿ ಕೇಳಿಕೊಂಡು ಅವರ ಮನೆ ಮುಂದೆ ಹೋಗಿದ್ದಾರೆ. ಆದರೆ ಕರ್ನಾಟಕದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಸಾಕ್ಷಿ ನೀಡಿದರೂ ತನಿಖೆ ನಡೆಸುತ್ತಿಲ್ಲ! ₹100 ಕಾಮಗಾರಿ ಇದ್ದರೆ ₹200 ಅಂದಾಜು ನಿಗದಿ ಮಾಡಿ ಕಮಿಷನ್ ಪಡೆಯುತ್ತಿದ್ದಾರೆ!’ ಎಂದು ಖರ್ಗೆ ಕಿಡಿಕಾರಿದ್ದಾರೆ.
ಕರ್ನಾಟಕದಲ್ಲಿ ಯಾವ ಕಾಲದಲ್ಲೂ ಇಷ್ಟೊಂದು ಭ್ರಷ್ಟಾಚಾರ, ದುರಾಡಳಿತ ಇರಲಿಲ್ಲ.
ಆದರೆ ಈಗ ಬಿಜೆಪಿ ಸರ್ಕಾರದಲ್ಲಿ 40% ಕಮಿಷನ್ ನಡೆಯುತ್ತಿದೆ, ಹೀಗೆಂದು ಹೇಳಿದ್ದು ಸ್ವತಃ ಈ ಸಮಸ್ಯೆ ಎದುರಿಸುತ್ತಿರುವ ಗುತ್ತಿಗೆದಾರರು!
ಅವರು ನೇರವಾಗಿ ಪ್ರಧಾನಮಂತ್ರಿಗಳಿಗೆ, ಅಮಿತ್ ಶಾ ಅವರಿಗೇ ಪತ್ರ ಬರೆದು 40% ಕಮಿಷನ್ ಬಗ್ಗೆ ದೂರಿದ್ದಾರೆ!
- @kharge pic.twitter.com/EBh0ICInWU— Karnataka Congress (@INCKarnataka) March 20, 2023
ಇದನ್ನೂ ಓದಿ: Ayodhya Ram Mandir: ಅಯೋಧ್ಯೆಯ ಶ್ರೀರಾಮ ಮೂರ್ತಿಗೆ ಕಾರ್ಕಳದ ಕೃಷ್ಣಶಿಲೆ
‘ಪ್ರಧಾನಿ ಮೋದಿಯವರು ನನ್ನ ರಿಮೋಟ್ ಕಟ್ರೋಲ್ ಬೇರೆಯವರ ಬಳಿ ಇದೆ ಎಂದಿದ್ದಾರೆ. ಹಾಗಾದರೆ ನಿಮ್ಮ ಜೆಪಿ ನಡ್ಡಾರ ರಿಮೋಟ್ ಕಂಟ್ರೋಲ್ ಯಾರ ಬಳಿ ಇದೆ? ಅದಾನಿ ಅವರ ಬಗ್ಗೆ ರಾಹುಲ್ ಗಾಂಧಿ ಅವರು ಪ್ರಶ್ನೆ ಕೇಳಿದರೆ ಅದನ್ನು ಕಡತದಿಂದ ತೆಗೆದು ಹಾಕುತ್ತಾರೆ. ದೇಶದಲ್ಲಿ ಪ್ರಜಾಪ್ರಭುತ್ವವಿಲ್ಲ, ಜಾತಿವಾದ, ತಾರತಮ್ಯವಿದೆ ಎಂದು ಹೇಳಿದರೆ ಅದು ತಪ್ಪಾ?’ ಎಂದು ಖರ್ಗೆ ಪ್ರಶ್ನಿಸಿದ್ದಾರೆ.
ರಾಹುಲ್ ಗಾಂಧಿ ಅವರು 46 ದಿನದ ಹಿಂದೆ ಹೇಳಿದ ಮಾತಿನ ಬಗ್ಗೆ ನಿನ್ನೆ ಪೋಲೀಸರು ಸಾಕ್ಷಿ ಕೇಳಿಕೊಂಡು ಅವರ ಮನೆ ಮುಂದೆ ಹೋಗಿದ್ದಾರೆ.
ಆದರೆ ಕರ್ನಾಟಕದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಸಾಕ್ಷಿ ನೀಡಿದರೂ ತನಿಖೆ ನಡೆಸುತ್ತಿಲ್ಲ!
₹100 ಕಾಮಗಾರಿ ಇದ್ದರೆ ₹200 ಅಂದಾಜು ನಿಗದಿ ಮಾಡಿ ಕಮಿಷನ್ ಪಡೆಯುತ್ತಿದ್ದಾರೆ!
- @kharge pic.twitter.com/Zu8JT3RNNq— Karnataka Congress (@INCKarnataka) March 20, 2023
‘ಕಾಂಗ್ರೆಸ್ ಪಕ್ಷ ಗೃಹಲಕ್ಷಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆ ಘೋಷಿಸಿದೆ. 2 ಕೋಟಿ ಉದ್ಯೋಗದ ಮಾತು ಬಿಡಿ, ದೇಶದಲ್ಲಿ 50 ಲಕ್ಷ ಸರ್ಕಾರಿ ಹುದ್ದೆ ಖಾಲಿ ಇದ್ದರೂ ಅದನ್ನೂ ತುಂಬುತ್ತಿಲ್ಲ. ರಾಜ್ಯದಲ್ಲಿ 2.50 ಲಕ್ಷ ಉದ್ಯೋಗ ಖಾಲಿ ಇದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಎಲ್ಲಾ ಹುದ್ದೆ ತುಂಬುತ್ತೇವೆ’ ಎಂದು ಖರ್ಗೆ ಆಶ್ವಾಸನೆ ನೀಡಿದ್ದಾರೆ.
ಇದನ್ನೂ ಓದಿ: Karnataka Congress : ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 100 ಅಭ್ಯರ್ಥಿಗಳು ಅಂತಿಮ!
ಕಾಂಗ್ರೆಸ್ ಪಕ್ಷ ಗೃಹಲಕ್ಷಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆ ಘೋಷಿಸಿದೆ.
2 ಕೋಟಿ ಉದ್ಯೋಗದ ಮಾತು ಬಿಡಿ, ದೇಶದಲ್ಲಿ 50 ಲಕ್ಷ ಸರ್ಕಾರಿ ಹುದ್ದೆ ಖಾಲಿ ಇದ್ದರೂ ಅದನ್ನೂ ತುಂಬುತ್ತಿಲ್ಲ.
ರಾಜ್ಯದಲ್ಲಿ 2.50 ಲಕ್ಷ ಉದ್ಯೋಗ ಖಾಲಿ ಇದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಎಲ್ಲಾ ಹುದ್ದೆ ತುಂಬುತ್ತೇವೆ.
- @kharge pic.twitter.com/UNMV1PUOSm— Karnataka Congress (@INCKarnataka) March 20, 2023
‘ನಾನು ಎಐಸಿಸಿ ಅಧ್ಯಕ್ಷನಾದ ನಂತರ ಮೊದಲ ಬಾರಿಗೆ ಬೆಳಗಾವಿಯ ಪವಿತ್ರ ಭೂಮಿಯ ಮೇಲೆ ಕಾಲಿಟ್ಟಿದ್ದೇನೆ. ಮಹಾತ್ಮಾ ಗಾಂಧೀಜಿಯವರು ಇದೇ ನೆಲದಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಚುನಾಯಿತರಾಗಿದ್ದರು. ತಾವೆಲ್ಲರೂ ಸೇರಿ ಈಗ ನನ್ನನ್ನು ಅದೇ ಸ್ಥಾನದಲ್ಲಿ ಕೂರಿಸಿದ್ದೀರಿ, ಅದಕ್ಕಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಒಂದು ಕಾಲದಲ್ಲಿ ಬೆಳಗಾವಿ ಕಾಂಗ್ರೆಸ್ಗೆ ಶಕ್ತಿ ತುಂಬಿದ್ದ ಜಿಲ್ಲೆ. ಇಲ್ಲಿ ನಾವು 15-16 ಕ್ಷೇತ್ರಗಳಲ್ಲಿ ಗೆಲ್ಲುತ್ತಿದ್ದೇವು. ಇಂದು ಇಲ್ಲಿ ಸೇರಿರುವ ಜನರು, ಮುಖಂಡರ ಒಗ್ಗಟ್ಟು ನೋಡಿದರೆ ಮುಂಬರುವ ಚುನಾವಣೆಯಲ್ಲಿ 18ಕ್ಕೆ 18 ಸ್ಥಾನಗಳಲ್ಲೂ ಗೆಲ್ಲಿಸುತ್ತೀರಿ ಎಂದು ನಂಬುತ್ತೇನೆ. ಈ ಬಾರಿ ವಾತಾವರಣವೂ ಅದಕ್ಕೆ ಪೂರಕವಾಗಿದೆ’ ಎಂದು ಖರ್ಗೆ ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.