/kannada/photo-gallery/rahu-star-transit-will-bless-these-zodiac-sign-221364 ರಾಹು ಕೃಪೆಯಿಂದಲೇ ಬೆಳಗುವುದು ಈ ರಾಶಿಯವರ ಭಾಗ್ಯ!ಇನ್ನು ಇಟ್ಟ ಹೆಜ್ಜೆಯಲ್ಲಿ ಸೋಲಿಲ್ಲ! ಧನಿಕರಾಗುವ ಕಾಲ ದೂರವಿಲ್ಲ  ರಾಹು ಕೃಪೆಯಿಂದಲೇ ಬೆಳಗುವುದು ಈ ರಾಶಿಯವರ ಭಾಗ್ಯ!ಇನ್ನು ಇಟ್ಟ ಹೆಜ್ಜೆಯಲ್ಲಿ ಸೋಲಿಲ್ಲ! ಧನಿಕರಾಗುವ ಕಾಲ ದೂರವಿಲ್ಲ 221364

ಬೆಂಗಳೂರು: ನಟ, ಸಾಮಾಜಿಕ ಹೋರಾಟಗಾರ ಚೇತನ್ ಹಿಂದೂ ವಿರೋಧಿ ಬರಹ ಹಿನ್ನೆಲೆ ಶೇಷಾದ್ರಿಪುರಂ ಪೊಲೀಸರು ಚೇತನ್ ರನ್ನು ಬಂಧಿಸಿದ್ದಾರೆ. ನಟ ಚೇತನ್ ಉರಿಗೌಡ- ನಂಜೆರಗೌಡ ವಿಚಾರವಾಗಿ ಅವರು ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದರು.

ಈ ಕುರಿತು ಶಿವಕುಮಾರ್ ಎನ್ನುವವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರು ಆಧರಿಸಿ ಶೇಷಾದ್ರಿಪುರಂ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರು ಪಡಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಚೇತನ್ ತಮ್ಮ ಫೇಸ್ ಬುಕ್ ಮತ್ತು ಟ್ವಿಟರ್ ಅಲ್ಲಿ ಉರೀಗೌಡ ನಂಜೇಗೌಡ ಬಗ್ಗೆ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ.

ಇದನ್ನೂ  ಓದಿ:Sarcasm Aadhaar Card: ಉರಿಗೌಡ ನಂಜೇಗೌಡರ ಹೆಸರಿನಲ್ಲಿ ಸೃಷ್ಠಿಯಾಯಿತು ವ್ಯಂಗ್ಯ ಆಧಾರ್ ಕಾರ್ಡ್  

ಸಾವರ್ಕರ್ ಹೇಳಿಕೆ, ರಾಮನು ರಾವಣನನ್ನು ಸೋಲಿಸಿ ಅಯೋಧ್ಯಗೆ ಹಿಂದಿರುಗಿದಾಗ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎನ್ನುವುದು ಇದು ಒಂದು ಸುಳ್ಳು. 1992ರಲ್ಲಿ ಬಾಬರಿ ಮಸೀದಿ ರಾಮನ ಜನ್ಮ ಭೂಮಿ ಕುರಿತು ಇದು ಒಂದು ಸುಳ್ಳು. ಈಗ 2023ರಲ್ಲಿ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಎನ್ನುವುದು ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು, ಸತ್ಯವೇ ಸಮಾನತೆ’ ಎಂದು ಬರೆದು ಪೋಸ್ಟ್ ಮಾಡಿದ್ದರು.

ಇದನ್ನೂ  ಓದಿ: Forest destruction: ಕಾಲುವೆ ನೆಪಕ್ಕೆ ಔಷಧಿ ಸಸ್ಯಗಳು ಬಲಿ

ಈ ಪೋಸ್ಟ್ ಆಧರಿಸಿ ಶಿವಕುಮಾರ್ ಎಂಬುವರು ದೂರು ನೀಡಿದ್ದಾರೆ. ದೂರಿನಲ್ಲಿ ಚೇತನ್ ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ. ಹೀಗಾಗಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರು ದಾಖಲಿಸಿದ್ದರು. 
ಹೀಗಾಗಿ ಚೇತನ್ ವಿರುದ್ಧ ಐಪಿಸಿ ಸೆಕ್ಷನ್ 295A, 505B  ಅಡಿಯಲ್ಲಿ ಕೇಸ್ ದಾಖಲು ಮಾಡಿ ಅರೆಸ್ಟ್ ಮಾಡಲಾಗಿದೆ. 

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Section: 
English Title: 
Writing against Urigowda, Nanjegowda: Arrest of actor Amhisa Chetan
News Source: 
Home Title: 

ಹಿಂದೂ ವಿರೋಧಿ, ಉರಿಗೌಡ,ನಂಜೇಗೌಡ ವಿರುದ್ಧ ಬರಹ: ನಟ ಅಂಹಿಸಾ ಚೇತನ್ ಬಂಧನ

Chetan Ahimsa: ಹಿಂದೂ ವಿರೋಧಿ, ಉರಿಗೌಡ,ನಂಜೇಗೌಡ ವಿರುದ್ಧ ಬರಹ: ನಟ ಅಂಹಿಸಾ ಚೇತನ್ ಬಂಧನ
Yes
Is Blog?: 
No
Tags: 
Facebook Instant Article: 
Yes
Highlights: 

 ನಟ ಅಂಹಿಸಾ ಚೇತನ್ ಬಂಧನ

ಉರಿಗೌಡ- ನಂಜೇಗೌಡರ ವಿಚಾರವಾಗಿ ಆಕ್ಷೇಪಾರ್ಹ ಪೋಸ್ಟ್ 

ಚೇತನ್ ತಮ್ಮ ಫೇಸ್ ಬುಕ್ ಮತ್ತು ಟ್ವಿಟರ್ ಅಲ್ಲಿ ಉರೀಗೌಡ ನಂಜೇಗೌಡ ಬಗ್ಗೆ ಪೋಸ್ಟ್

Mobile Title: 
ಹಿಂದೂ ವಿರೋಧಿ, ಉರಿಗೌಡ,ನಂಜೇಗೌಡ ವಿರುದ್ಧ ಬರಹ: ನಟ ಅಂಹಿಸಾ ಚೇತನ್ ಬಂಧನ
VISHWANATH HARIHARA
Publish Later: 
No
Publish At: 
Tuesday, March 21, 2023 - 12:20
Request Count: 
1
Is Breaking News: 
No