April 22 ರಿಂದ ಮೇಷ ಸೇರಿದಂತೆ 3 ರಾಶಿಗಳ ಅಚ್ಛೆ ದಿನ್ ಆರಂಭ, ಗುರು ಗೋಚರದಿಂದ ಅಪಾರ ಧನವೃಷ್ಟಿ!

Jupiter Transit 2023: ಬರುವ ಏಪ್ರಿಲ್ 22 ರಂದು ದೇವ ಗುರು ಬೃಹಸ್ಪತಿಯ ಮೇಷ ರಾಶಿಯ ಗೋಚರ ನೆರವೇರಲಿದೆ. ಇದು ಮೇಷ ಸೇರಿದಂತೆ ಒಟ್ಟು ಮೂರು ರಾಶಿಗಳ ಜಾತಕದವರ ಮೇಲೆ ಅಪಾರ ಧನಾವೃಷ್ಟಿಗೆ ಕಾರಣವಾಗಲಿದೆ. ಬೃಹಸ್ಪತಿಯ ಈ ಗೋಚರ ಮೇಷ, ಮೀನ ಹಾಗೂ ಸಿಂಹ ರಾಶಿಗಳ ಜಾತಕದವರಿಗೆ ಅಪಾರ ಧನಲಾಭ ಹಾಗೂ ಉನ್ನತಿಯ ಯೋಗ ನಿರ್ಮಿಸುತ್ತಿದೆ. ಬನ್ನಿ ಈ ಕುರಿತು ವಿಸ್ತೃತವಾಗಿ ತಿಳಿದುಕೊಳ್ಳೋಣ,
 

Jupiter Transit 2023 In Aries: ಜೋತಿಷ್ಯ ಶಾಸ್ತ್ರದ ಪ್ರಕಾರ ದೇವಗುರು ಬೃಹಸ್ಪತಿಯನ್ನು ಜ್ನಾನ, ಶಿಕ್ಷಣ, ಸಂತಾನ, ಹಿರಿಯ ಸಹೋದರ, ಶಿಕ್ಷಣ, ಧಾರ್ಮಿಕ ಕಾರ್ಯ, ಪವಿತ್ರ ಸ್ಥಳ, ಧನ, ದಾನ, ಪುಣ್ಯ ಹಾಗೂ ವೃದ್ಧಿ ಇತ್ಯಾದಿಗಳ ಕಾರಕ ಗ್ರಹ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಗುರು ಗ್ರಹ ಗೋಚರಿಸಿದಾಗ ಈ ಎಲ್ಲಾ ಕ್ಷೇತ್ರಗಳ ಮೇಲೆ ಹಾಗೂ ಭೂಮಿಯ ಮೇಲಿರುವ ಸಕಲ ಚರಾಚರಗಳ ಮೇಲೆ ಪ್ರಭಾವ ಬೀರಲಿದೆ. 12 ವರ್ಷಗಳ ಬಳಿಕ ಗುರು ಮೇಷ ರಾಶಿಯಲ್ಲಿ ಗೋಚರಿಸಲಿದ್ದಾನೆ. ಈ ಗೋಚರ ಏಪ್ರಿಲ್ 22 ರಂದು ನೆರವೇರಲಿದೆ. ಹೀಗಾಗಿ ಈ ಗೋಚಾರದ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಮೇಲೆ ಬೀರಲಿದೆ. ಅದರಲ್ಲಿಯೂ ವಿಶೇಷವಾಗಿ 3 ರಾಶಿಗಳ ಮೇಲೆ ಇದರ ಭಾರಿ ಸಕಾರಾತ್ಮಕ ಪ್ರಭಾವ ಉಂಟಾಗಳಿದ್ದು, ಅವರಿಗೆ ಭಾರಿ ಧನಲಾಭ ಹಾಗೂ ಭಾಗ್ಯೋದಯದ ಯೋಗ ನಿರ್ಮಾಣಗೊಳ್ಳುತ್ತಿದೆ. ಬನ್ನಿ ತಿಳಿದುಕೊಳ್ಳೋಣ,

 

ಇದನ್ನೂ ಓದಿ-April 10 ರಿಂದ 3 ರಾಶಿಗಳ ಜನರ ಅದೃಷ್ಟದಲ್ಲಿ ಭಾರಿ ಹೊಳಪು, ಶನಿದೇವನ ದಶಮ ಶುಭ ದೃಷ್ಟಿಯಿಂದ ಭಾರಿ ಧನಲಾಭ!

 

ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /3

ಮೇಷ ರಾಶಿ: ಗುರುಗ್ರಹದ ಗೋಚರ ಮೇಷ ರಾಶಿಯ ಜಾತಕದವರ ಪಾಲಿಗೆ ಅತ್ಯಂತ ಶುಭ ಸಾಬೀತಾಗಲಿದೆ. ಏಕೆಂದರೆ ಗುರು ಗ್ರಹ ನಿಮ್ಮ ಜಾತಕದ ಲಗ್ನ ಭಾವದಲ್ಲಿ ಗೋಚರಿಸುತ್ತಿದ್ದಾನೆ. ಹೀಗಾಗಿ ಗುರುವಿನ ಈ ಗೋಚಾರದಿಂದ ನಿಮ್ಮ ಆರ್ಥಿಕ ಸ್ಥಿತಿ ಮೊದಲಿಗಿಂತ ಉತ್ತಮವಾಗಲಿದೆ. ನಿಮಗೆ ಕೌಟುಂಬಿಕ ಸುಖಗಳು ಪ್ರಾಪ್ತಿಯಾಗಲಿವೆ. ಜೊತೆಗೆ ನಿಮ್ಮ ಆತ್ಮವಿಶ್ವಾಸದಲ್ಲಿ ಅಪಾರ ವೃದ್ಧಿಯಾಗಲಿದೆ. ಈ ಅವಧಿಯಲ್ಲಿ ಉನ್ನತ ವ್ಯಕ್ತಿಗಳೊಂದಿಗೆ ನೀವು ಸಂಪರ್ಕ ಸಾಧಿಸುವಲ್ಲಿ ಯಶಸ್ವಿಯಾಗುವಿರಿ. ಇದರ ಜೊತೆಗೆ ನಿಮಗೆ ಬಾಳಸಂಗಾತಿಯ ಸಂಪೂರ್ಣ ಬೆಂಬಲ ಪ್ರಾಪ್ತಿಯಾಗಲಿದೆ. ಗುರುವಿನ ಈ ಗೋಚಾರದಿಂದ ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದೆ. ಕೌಟುಂಬಿಕ ಸುಖ ಪ್ರಾಪ್ತಿಯಾಗಲಿದೆ. ಪಾರ್ಟ್ನರ್ಶಿಪ್ ವ್ಯವಹಾರದಲ್ಲಿ ನಿಮಗೆ ಲಾಭವಾಗುವ ಎಲ್ಲಾ ಸಾಧ್ಯತೆಗಳಿವೆ.   

2 /3

ಸಿಂಹ ರಾಶಿ: ಗುರು ಗ್ರಹದ ಗೋಚರ ಸಿಂಹ ರಾಶಿಯ ಜಾತಕದವರ ಪಾಲಿಗೆ ಅತ್ಯಂತ ಲಾಭಕಾರಿ ಸಾಬೀತಾಗಲಿದೆ. ಏಕೆಂದರೆ ಈ ಗೋಚರ ನಿಮ್ಮ ಜಾತಕದ ಅದೃಷ್ಟ ಭಾವದಲ್ಲಿರಲಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ವಿದೇಶಕ್ಕೆ ಹೋಗುವ ಅವಕಾಶ ಪ್ರಾಪ್ತಿಯಾಗಲಿದೆ. ಈ ಯಾತ್ರೆಯಿಂದ ನಿಮಗೆ ಲಾಭ ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ನಿಮ್ಮ ಅಭಿರುಚಿ ಹೆಚ್ಚಾಗಲಿದೆ. ಇನ್ನೊಂದೆಡೆ ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದ್ದು, ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಯಶಸ್ಸು ಪ್ರಾಪ್ತಿಯಾಗಲಿದೆ. ಈ ಅವಧಿಯಲ್ಲಿ ಯಾವುದಾದರೊಂದು ತೀರ್ಥಕ್ಷೇತ್ರಕ್ಕೆ ಭೇಟಿ ನೀಡುವುದು ನಿಮ್ಮ ಪಾಲಿಗೆ ಲಾಭಪ್ರದ ಸಿದ್ಧವಾಗುವ ಸಾಧ್ಯತೆ ಇದೆ. ಇದಕ್ಕಾಗಿ ನಿಮಗೆ ನಿಮ್ಮ ತಂದೆಯ ಸಂಪೂರ್ಣ ಬೆಂಬಲ ಸಿಗಲಿದೆ.  

3 /3

ಮೀನ ರಾಶಿ: ಗುರುವಿನ ರಾಶಿ ಪರಿವರ್ತನೆ ನಿಮ್ಮ ಪಾಲಿಗೆ ಅತ್ಯಂತ ಅನುಕೂಲಕರ ಸಿದ್ಧವಾಗಲಿದೆ. ಏಕೆಂದರೆ ಏಪ್ರಿಲ್ 22ರ ಬಳಿಕ ಗುರು ನಿಮ್ಮ ಗೋಚರ ಜಾತಕದ ಧನ ಹಾಗೂ ವಾಣಿಯ ಭಾವದ ಮೇಲೆ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಬರಬೇಕಾದ ಹಣ ಪ್ರಾಪ್ತಿಯಾಗಲಿದೆ. ವ್ಯಾಪಾರಿಗಳು ಸಾಲದ ರೂಪದಲ್ಲಿ ನೀಡಿದ ಹಣ ಅವರತ್ತ ಮರಳಲಿದೆ. ಈ ಅವಧಿಯಲ್ಲಿ ನಿಮ್ಮ ಮಾತಿನಲ್ಲಿ ಪ್ರಭಾವ ಕಾಣಿಸಲಿದ್ದು, ಇದರಿಂದ ಜನರು ನಿಮ್ಮಿಂದ ಇಂಪ್ರೆಸ್ ಆಗಲಿದ್ದಾರೆ. ನೆನೆಗುದಿಗೆ ಬಿದ್ದ ಸರ್ಕಾರಿ ಕೆಲಸಗಳು ಪೂರ್ಣಗೊಳ್ಳುವ ಎಲ್ಲಾ ಸಾಧ್ಯತೆಗಳಿವೆ. ವೃತ್ತಿ ಜೀವನದಲ್ಲಿ ನಿಮಗೆ ಭಾಗ್ಯದ ಸಂಪೂರ್ಣ ಬೆಂಬಲ ಸಿಗಲಿದೆ. ಇದರಿಂದ ನಿಮಗೆ ಅಪಾರ ಧನಲಾಭವಾಗಲಿದೆ ಹಾಗೂ ಹೊಸ ಅವಕಾಶಗಳು ಪ್ರಾಪ್ತಿಯಾಗಲಿವೆ. ಆದರೆ, ಪ್ರಸ್ತುತ ನಿಮ್ಮ ಮೇಲೆ ಶನಿಯ ಸಾಡೇಸಾತಿ ನಡೆಯುತ್ತಿರುವ ಕಾರಣ ಕೆಲ ವಿಷಯಗಳಿಗೆ ಸಂಬಂಧಿಸಿದಂತೆ ಮಾನಸಿಕ ಒತ್ತಡ ಉಂಟಾಗುವ ಸಾಧ್ಯತೆ ಇದೆ. (ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ)