ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಆರ್ಥಿಕವಾಗಿ ಬಹಳ ಸಮಸ್ಯೆ

ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಗುತ್ತಿಗೆದಾರರಿಗೆ ಸಮಸ್ಯೆ ಆಗಿದೆ. ಬಿಜೆಪಿ ಹಳಿ ತಪ್ಪಿಸಿರುವ ಆರ್ಥಿಕತೆಯನ್ನು ಸರಿಯಾಗಿಸಲು ಸ್ವಲ್ಪ ಸಮಯಾವಕಾಶ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು

Written by - Zee Kannada News Desk | Last Updated : Jun 23, 2023, 07:30 PM IST
ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಆರ್ಥಿಕವಾಗಿ ಬಹಳ ಸಮಸ್ಯೆ  title=

ಬೆಂಗಳೂರು: ಕರ್ನಾಟಕ ರಾಜ್ಯ ಗುತ್ತಿಗೆಗಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅವರ ನೇತೃತ್ವದ ನಿಯೋಗವು ಇಂದು ತಮ್ಮನ್ನು ಭೇಟಿ ಮಾಡಿ ಬಾಕಿ ಇರುವ ಬಿಲ್ಲುಗಳ ಪಾವತಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ ಸಂದರ್ಭದಲ್ಲಿ ಅವರು,   ರಾಜ್ಯದಲ್ಲಿ ಕಮಿಷನ್ ಹಾವಳಿಗೆ ಕಡಿವಾಣ ಹಾಕಿ, ಸ್ಥಳೀಯ ಗುತ್ತಿಗೆದಾರರ ಹಿತಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. 

ಬಜೆಟ್ ಮಂಡನೆಯಾಗಬೇಕಿದೆ.  ಬಜೆಟ್ ಅಧಿವೇಶನದ ನಂತರ ಬಿಬಿಎಂಪಿ ಹಾಗೂ ಆರ್ಥಿಕ ಇಲಾಖೆ ಕಾರ್ಯದರ್ಶಿಗಳ ಸಭೆ ಕರೆದು  ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ: ಮೆಟ್ರೋ ಪಿಲ್ಲರ್ ಬಿದ್ದು ತಾಯಿ ಮಗು ಮೃತ ಪ್ರಕರಣಕ್ಕೆ ಪೊಲೀಸರಿಂದ ಚಾರ್ಚ್ ಶೀಟ್ ಸಲ್ಲಿಕೆ..!

ಬಿಬಿಎಂಪಿಯಲ್ಲಿ 2000 ಕೋಟಿ ರೂ.ಗಳು ಹಾಗೂ ನಗರೋತ್ಥಾನ ಯೋಜನೆಯಡಿ 1500 ಕೋಟಿ ರೂ.ಗಳು ಬಾಕಿ ಇರುವುದಾಗಿ ತಿಳಿಸಿದ ಕೆಂಪಣ್ಣ ಅವರು ತಡೆಹಿಡಿದಿರುವ  ಮೊತ್ತವನ್ನು ಪರಿಶೀಲಿಸಿ ಬಿಡುಗಡೆ ಮಾಡಬೇಕು ಹಾಗೂ ನಿರಾಕ್ಷೇಪಣಾ ಪತ್ರವನ್ನು ಬಿಡುಗಡೆ ಮಾಡಬೇಕೆಂದು  ಕೆಂಪಣ್ಣ ಮನವಿ ಮಾಡಿದರು. ಪದಾಧಿಕಾರಿಗಳಾದ ಆರ್.ಅಂಬಿಕಾಪತಿ, ಜಿ.ಎಂ ರವೀಂದ್ರ, ಸಂಕಾಗೌಡ ಶಾನಿ, ನಾಗರಾಜ್, ಆರ್.ಮಂಜುನಾಥ್, ರಮೇಶ್ ಮೊದಲಾದವರು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News