ಮಂಗಳನ ಮನೆಯಲ್ಲಿ ಗುರುವಿನ ವಕ್ರನಡೆ, ಕೇಂದ್ರ ತ್ರಿಕೋನ ರಾಜಯೋಗದಿಂದ ಈ ಜನರಿಗೆ ಆಕಸ್ಮಿಕ ಧನಲಾಭ-ಭಾಗ್ಯೋದಯ ಯೋಗ!

ವೈದಿಕ ಜೋತಿಷ್ಯ ಪಂಚಾಂಗದ ಪ್ರಕಾರ ಶೀಘ್ರದಲ್ಲಿಯೇ ದೇವ ಗುರು ಬೃಹಸ್ಪತಿ ಮೇಷ ರಾಶಿಯಲ್ಲಿ ತನ್ನ ವಕ್ರ ನಡೆಯನ್ನು ಅನುಸರಿಸಲಿದ್ದು, ಇದರಿಂದ ಮೇಷ ರಾಶಿಯಲ್ಲಿ ಕೇಂದ್ರ ತ್ರಿಕೋನ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಇದರಿಂದ ಮೂರು ಜಾತಕದವರ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. 
 

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳು ಕಾಲಕಾಲಕ್ಕೆ ಗೋಚರಿಸಿ ಹಲವು ರಾಜಯೋಗಗಳು ನಿರ್ಮಾಣಗೊಳ್ಳಲು ಕಾರಣವಾಗುತ್ತವೆ. ಅವುಗಳ ಪ್ರಭಾವ ಮಾನವನ ಜೀವನ ಹಾಗೂ ಇಡೀ ಭೂಮಿಯ ಮೇಲೆ ಕಾಣಲು ಸಿಗುತ್ತದೆ. ಸುಖ ಸಮೃದ್ಧಿಯ ಕಾರಕ ಗುರು ಸೆಪ್ಟೆಂಬರ್ ತಿಂಗಳಿನಲ್ಲಿ ತನ್ನ ವಕ್ರನಡೆಯನ್ನು ಅನುಸರಿಸಲಿದ್ದಾನೆ. ಇದರಿಂದ ಕೇಂದ್ರ ತ್ರಿಕೋನ ರಾಜಯೋಗ (Spiritual News In Kannada) ನಿರ್ಮಾಣಗೊಳ್ಳುತ್ತಿದೆ. ಈ ರಾಜಯೋಗದ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಕಂಡುಬರಲಿದೆ. ಆದರೆ, 3 ವಿಶೇಷ ರಾಶಿಗಳ ಜನರಿಗೆ ಆಕಸ್ಮಿಕ ಧನಲಾಭ ಹಾಗೂ ಉನ್ನತಿಯ ಯೋಗ (Juptiter Retrograde) ನಿರ್ಮಾಣಗೊಳ್ಳುತ್ತಿದೆ. ಬನ್ನಿ ಆ ಲಕ್ಕಿ ರಾಶಿಗಳು ಯಾವುವು ತಿಳಿದುಕೊಳ್ಳೋಣ, 

 

ಇದನ್ನೂ ಓದಿ-24 ಗಂಟೆಗಳಲ್ಲಿ ಬದಲಾಗಲಿದೆ 5 ರಾಶಿಗಳ ಭಾಗ್ಯ, ಹಣದ ಹೊಳೆಯೇ ಹರಿದು, ಕೋಟ್ಯಾಧೀಶರಾಗುವ ಭಾಗ್ಯ!

 

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ವೈದಿಕ ಜೋತಿಷ್ಯ ಪಂಚಾಂಗದ ಪ್ರಕಾರ ಶೀಘ್ರದಲ್ಲಿಯೇ ದೇವ ಗುರು ಬೃಹಸ್ಪತಿ ಮೇಷ ರಾಶಿಯಲ್ಲಿ ತನ್ನ ವಕ್ರ ನಡೆಯನ್ನು ಅನುಸರಿಸಲಿದ್ದು, ಇದರಿಂದ ಮೇಷ ರಾಶಿಯಲ್ಲಿ ಕೇಂದ್ರ ತ್ರಿಕೋನ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಇದರಿಂದ ಮೂರು ಜಾತಕದವರ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ.   

2 /5

ಮೇಷ ರಾಶಿ- ಗುರು ನಿಮ್ಮ ಜಾತಕದ ಲಗ್ನ ಭಾವದಲ್ಲಿಯೇ ತನ್ನ ವಕ್ರನಡೆಯನ್ನು ಅನುಸರಿಸಲಿದ್ದಾನೆ. ಹೀಗಾಗಿ ಗುರುವಿನ ಈ ವಕ್ರನಡೆ ನಿಮ್ಮ ಜಾತಕದ ಪಾಲಿಗೆ ಅತ್ಯಂತ ಶುಭ ಸಾಬೀತಾಗಲಿದೆ. ನಿಮ್ಮ ಜಾತಕದ ನವಮ ಹಾಗೂ ದ್ವಾದಶ ಭಾವಕ್ಕೆ ಆತ ಅಧಿಪತಿ ಕೂಡ ಹೌದು. ಹೀಗಾಗಿ ಈ ಅವಧಿಯಲ್ಲಿ ನೀವು ಉಳಿತಾಯ ಮಾಡುವಲ್ಲಿ ಯಶಸ್ವಿಯಾಗುವಿರಿ. ಇದರ ಜೊತೆಗೆ ನಿಮಗೆ ಅದೃಷ್ಟದ ಭಾರಿ ಬೆಂಬಲ ಸಿಗಲಿದೆ. ನಿಮ್ಮ ವ್ಯಕ್ತಿತ್ವದಲ್ಲಿ ಹೊಸ ಉಲ್ಲಾಸ, ಚೈತನ್ಯ ಮತ್ತು ಹೊಸ ಹೊಳಪು ಕಂಡುಬರಲಿದೆ. ನೌಕರ ವರ್ಗದ ಜನರಿಗೆ ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಹಾಗೂ ಪದ ಪ್ರಾಪ್ತಿಯಾಗಲಿದೆ. ಹಳೆ ಕಾಯಿಲೆಗಳಿಂದ ಮುಕ್ತಿ ಸಿಗಲಿದೆ. ಕೆಲಸದ ನಿಮಿತ್ತ ನಿಮ್ಮ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ.   

3 /5

ಧನು ರಾಶಿ: ನಿಮ್ಮ ಜಾತಕದ ಪಂಚಮ ಭಾವದಲ್ಲಿ ಗುರು ತನ್ನ ವಕ್ರನಡೆಯನ್ನು ಅನುಸರಿಸಲಿದ್ದಾನೆ. ಹೀಗಾಗಿ ಈ ಕೇಂದ್ರ ತ್ರಿಕೋನ ರಾಜಯೋಗ ನಿಮ್ಮ ಪಾಲಿಗೆ ಅತ್ಯಂತ ಲಾಭದಾಯಕ ಸಾಬೀತಾಗಲಿದೆ. ಇದರ ಜೊತೆಗೆ ಗುರು ನಿಮ್ಮ ಜಾತಕದ ಚತುರ್ಥ ಹಾಗೂ ಲಗ್ನ ಭಾವಕ್ಕೆ ಗುರು ಅಧಿಪತಿ ಕೂಡ ಹೌದು, ಹೀಗಾಗಿ ಈ ಅವಧಿಯಲ್ಲಿ ನಿಮಗೆ ವಾಹನ ಹಾಗೂ ಆಸ್ತಿ ಸುಖ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಮಕ್ಕಳಿಗೆ ಸಂಬಂಧಿಸಿದ ಶುಭ ಸಮಾಚಾರ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಲವ್ ಲೈಫ್ ನಲ್ಲಿದ್ದ ಅಡೆತಡೆಗಳು ದೂರಾಗಲಿವೆ. ನೌಕರ ವರ್ಗದ ಜನರಿಗೆ ಈ ಅವಧಿಯಲ್ಲಿ ಉತ್ತಮ ಅವಕಾಶಗಳು ಒದಗಿ ಬರಲಿವೆ. ಇದರಿಂದ ಸಾಕಷ್ಟು ಸಂತುಷ್ಟಿ ನಿಮ್ಮದಾಗಲಿದೆ. ಇನ್ನೊಂದೆಡೆ ಈ ಅವಧಿಯಲ್ಲಿ ನಿಮ್ಮಗೆ ಆಕಸ್ಮಿಕ ಧನಲಾಭವಾಗುವ ಸಾಧ್ಯತೆ ಇದೆ. ಗಣ್ಯ ವ್ಯಕ್ತಿಗಳ ಜೊತೆಗೆ ನಿಮ್ಮ ಒಡನಾಟ ಹೆಚ್ಚಾಗಲಿದೆ.   

4 /5

ಕರ್ಕ ರಾಶಿ: ನಿಮ್ಮ ಗೋಚರ ಜಾತಕದ ಕರ್ಮ ಭಾವದಲ್ಲಿ ಗುರು ತನ್ನ ವಕ್ರ ನಡೆಯನ್ನು ಆರಂಭಿಸಲಿದ್ದಾನೆ. ಇದರಿಂದ ನಿಮಗೆ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. ನಿಮ್ಮ ಜಾತಕದ ಷಷ್ಟಮ ಹಾಗೂ ನವಮ ಜಾತಕಕ್ಕೆ ಆತ ಅಧಿಪತಿ ಕೂಡ ಹೌದು. ಹೀಗಾಗಿ ಕೋರ್ಟ್-ಕಚೇರಿ ವ್ಯವಹಾರಗಳಲ್ಲಿ ನೀವು ಅಪಾರ ಯಶಸ್ಸನ್ನು ಕಾಣುವಿರಿ. ಅದೃಷ್ಟದ ಬೆಂಬಲದಿಂದ ನಿಮ್ಮ ಆಸೆ-ಆಕಾಂಕ್ಷೆಗಳು ಈಡೇರಲಿವೆ. ಈ ಅವಧಿಯಲ್ಲಿ ನಿಮ್ಮಿಂದ ಮಾಡಲಾಗುವ ಎಲ್ಲಾ ಪ್ರಯತ್ನಗಳು ಫಲ ನೀಡಲಿವೆ. ಧರ್ಮ-ಕರ್ಮದ ಕಾರ್ಯಗಳಲ್ಲಿ ನಿಮ್ಮ ಅಭಿರುಚಿ ಹೆಚ್ಚಾಗಲಿದೆ. ನಿರುದ್ಯೋಗಿಗಳಿಗೆ ನೌಕರಿ ಭಾಗ್ಯ ಪ್ರಾಪ್ತಿಯಾಗಲಿದೆ.ಈಗಾಗಲೇ ನೌಕರಿಯಲ್ಲಿರುವವರಿಗೆ ಪ್ರಮೋಷನ್ ಭಾಗ್ಯ ಸಿಗಲಿದೆ.  

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)