ಕಾವೇರಿ ವಿಚಾರದಲ್ಲಿ ಮಾತು ಬದಲಾಯಿಸುತ್ತಿರುವ ಊಸರವಳ್ಳಿ ಸರ್ಕಾರ : ಬಸವರಾಜ ಬೊಮ್ಮಾಯಿ

Basavaraj Bommaih : ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಕೊಟ್ಟ ಮಾತು ಬದಲಾಯಿಸುತ್ತಿದ್ದು, ಇದೊಂದು ಊಸರವಳ್ಳಿ ಸರ್ಕಾರ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ‌.   

Written by - Prashobh Devanahalli | Edited by - Savita M B | Last Updated : Sep 16, 2023, 05:21 PM IST
  • ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರದ ಮೇಲೆ ತಮಿಳುನಾಡಿನ ಪ್ರಭಾವ ವಿಪರೀತ ಇದ್ದ ಹಾಗೆ ಇದೆ
  • ಸಿಡಬ್ಲುಎಂಎ ಸಭೆ ಆಗಿಲ್ಲ ಆದರೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುವ ನಿರ್ಧಾರ ಮಾಡಿ ರಾಜ್ಯದ ಜನತೆಗೆ ಧೋಖಾ ಮಾಡಿದೆ
  • ಇದರ ವಿರುದ್ದ ನಮ್ಮ ಪಕ್ಷದ ವತಿಯಿಂದ ತಿವ್ರವಾದ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದು ಹೇಳಿದರು.
ಕಾವೇರಿ ವಿಚಾರದಲ್ಲಿ ಮಾತು ಬದಲಾಯಿಸುತ್ತಿರುವ ಊಸರವಳ್ಳಿ ಸರ್ಕಾರ : ಬಸವರಾಜ ಬೊಮ್ಮಾಯಿ title=

ಬೆಂಗಳೂರು: ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರದ ಮೇಲೆ ತಮಿಳುನಾಡಿನ ಪ್ರಭಾವ ವಿಪರೀತ ಇದ್ದ ಹಾಗೆ ಇದೆ. ಸುಪ್ರೀಂ ಕೊರ್ಟ್ ಆದೇಶ ಆಗಿಲ್ಲ. ಸಿಡಬ್ಲುಎಂಎ ಸಭೆ ಆಗಿಲ್ಲ ಆದರೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುವ ನಿರ್ಧಾರ ಮಾಡಿ ರಾಜ್ಯದ ಜನತೆಗೆ ಧೋಖಾ ಮಾಡಿದೆ. ಇದರ ವಿರುದ್ದ ನಮ್ಮ ಪಕ್ಷದ ವತಿಯಿಂದ ತಿವ್ರವಾದ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದು ಹೇಳಿದರು.

ಆರಂಭದಲ್ಲಿ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದರು. ಅವರು ಹೇಳಿದ ಮಾರನೇ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್ ನೀರು ಬಿಡುತ್ತಾರೆ.  ಸರ್ಕಾರ ನೀರು ಬಿಡಲು ತೀರ್ಮಾನ ಮಾಡುವುದಾದರೆ ಸರ್ವ ಪಕ್ಷದ ಸಭೆ ಕರೆಯುವ ಅಗತ್ಯ ಏನಿತ್ತು. ಸಿಎಂ ಸರ್ವ ಪಕ್ಷ ದ ಸಭೆ ಕರೆದು ನೀರು ಬಿಡುವುದಿಲ್ಲ ಅಂತ ಹೇಳುತ್ತಾರೆ. ಡಿಸಿಎಂ ನೀರು ಬಿಡುತ್ತಾರೆ. ಇದು ಊಸರವೊಳ್ಳಿ ಸರ್ಕಾರ. ಈ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಬಗೆದು ತಮಿಳುನಾಡಿಗೆ ನೀರು ಬಿಡುತ್ತಿರುವುದು ಕರಾಳ ನಿರ್ಣಯ  ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ-SIIMA 2023 : ಸೈಮಾ 2023 ರ ಅತ್ಯುತ್ತಮ ಕನ್ನಡ ನಟ ಇವರೇ, ಇಲ್ಲಿದೆ ವಿಜೇತರ ಕಂಪ್ಲೀಟ್ ಲಿಸ್ಟ್

ಧಮ್ ಇದ್ರೆ ನೀರು ಬಿಡದೇ ವಾದ ಮಾಡಲಿ
ಬಿಜೆಪಿಯವರಿಗೆ ಪ್ರಧಾನಿ ಭೇಟಿ ಮಾಡಿ ಮಾತನಾಡುವ ಧಮ್ ಇಲ್ಲ ಎಂಬ ಡಿಸಿಎಂ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈ ಸರ್ಕಾರಕ್ಕೆ ನಿಜವಾದ ತಾಕತ್ತು ದಮ್ಮು ಇದ್ದರೆ ನೀರು ಬಿಡುತ್ತಿರಲಿಲ್ಲ. ನೀರು ಬಿಟ್ಟು ತಾಕತ್ತು ದಮ್ಮಿನ ಬಗ್ಗೆ ಮಾತನಾಡುತ್ತಾರೆ‌. ನಿಮಗೆ ತಾಕತ್ತು ದಮ್ ಇದ್ದರೆ ತಮಿಳುನಾಡಿಗೆ ನೀರು ಬಿಡದೇ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಾಡಿ ರಾಜ್ಯದ ಹಿತ ಕಾಪಾಡಿ ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರದ ಮಧ್ಯಸ್ಥಿಕೆ ವಹಿಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ರಾಜ್ಯದ ಎಂಪಿಗಳು ಪ್ರಧಾನಿಯನ್ನು ಭೇಟಿ ಮಾಡಿದರೂ ಏನೂ ಪ್ರಯೋಜನ ಇಲ್ಲ. ಇವರಿಗೆ ಓಟ್ ಹಾಕಿದ ಕಾವೇರಿ ಕೊಳ್ಳದ ಮಕ್ಕಳು ಪಶ್ಚಾತಾಪ ಪಡುತ್ತಿದ್ದಾರೆ‌.  ಸುಪ್ರೀಂ ಕೋರ್ಟ್  ಮತ್ತು ತಮಿಳುನಾಡಿನ ಸಿಎಂ ಜೊತೆ ಮಾತುಕತೆ ಮಾಡುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ-ಶೋಭಿತಾ ಫೋಟೋಸ್: ಒಂದಿಂಚೂ ಬಟ್ಟೆ ಇಲ್ಲ.. ಬಾತ್ ಟವೆಲ್‌ನಿಂದ ಮೈಮುಚ್ಚಿಕೊಂಡ ಮೋಹನಾಂಗಿ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 
 

 

Trending News