Diwali 2023 ರಂದು 'ರುಚಕ ಮಹಾಪುರುಷ ರಾಜಯೋಗ' ನಿರ್ಮಾಣ, ಲಕ್ಷ್ಮಿ ಕೃಪೆಯಿಂದ ಈ ಜನರಿಗೆ ಆಕಸ್ಮಿಕ ಧನಲಾಭ-ಭಾಗ್ಯೋದಯ ಯೋಗ!

Ruchak Mahapurush Rajyog In Diwali 2023: ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ವೃಶ್ಚಿಕ ರಾಶಿಯಲ್ಲಿ ಮಂಗಳನ ಪ್ರವೇಶ ನೆರವೇರಲಿದ್ದು, ಇದರಿಂದ ನಿರ್ಮಾಣಗೊಳ್ಳುವ ರುಚಕ ಮಹಾಪುರುಷ ರಾಜಯೋಗ 3 ರಾಶಿಗಳ ಜನರಿಗೆ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸನ್ನು ಕರುಣಿಸಲಿದೆ. Spiritual News In Kannada

ಬೆಂಗಳೂರು: ಈ ಬಾರಿಯ ದೀಪಾವಳಿಗೆ ದಿನಗಣನೆ ಆರಂಭವಾಗಿದೆ. ಈ ಬಾರಿಯ ದೀಪಾವಳಿಯ ಸಂಗರ್ಭದಂದು ಹಲವು ಗ್ರಹಗಳ ಗೋಚರ ನೆರವೇರಲಿದ್ದು, ಈ ಗೋಚರಗಳು ಶುಭ ಹಾಗೂ ಅಶುಭ ಯೋಗಗಳನ್ನು ನಿರ್ಮಿಸಲಿವೆ. ಈ ಗ್ರಹ ಗೋಚರಗಳಲ್ಲಿ ಗ್ರಹಗಳ ಸೇನಾಪತಿ ಮಂಗಳನ ಗೋಚರ ಕೂಡ ಶಾಮಿಲಾಗಿದೆ. ನವೆಂಬರ್ 16, 2023 ರಂದು ಮಂಗಳನ ವೃಶ್ಚಿಕ ರಾಶಿ ಗೋಚರ ನೆರವೇರಲಿದ್ದು,ಇದರಿಂದ ರುಚಕ ಮಹಾಪುರುಷ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಈ ಯೋಗವನ್ನು ಅತ್ಯಂತ ಶುಭಯೋಗಗಳ ಪಟ್ಟಿಗೆ ಸೇರಿಸಲಾಗಿದೆ. ಈ ರಾಜಯೋಗದ ನಿರ್ಮಾಣದಿಂದ ಕೆಲ ರಾಶಿಗಳ ಜನರಿಗೆ ಆಕಸ್ಮಿಕ ಧನಲಾಭ ಉಂಟಾಗುವ ಸಾಧ್ಯತೆ ಇದ್ದು, ಅವರಿಗೆ ಭಾಗ್ಯೋದಯ ಯೋಗ ಕೂಡ ರೂಪುಗೊಳ್ಳುತ್ತಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳ ಬಗ್ಗೆ ತಿಳಿದುಕೊಳ್ಳೋಣ, Spiritual News In Kannada

 

ಇದನ್ನೂ ಓದಿ-ವಿನಾಶಕಾರಿ ಗುರು-ಚಾಂಡಾಲ ಯೋಗ ಅಂತ್ಯ, ಗುರು ದೆಸೆಯಿಂದ ಈ ಜನರ ಜೀವನದಲ್ಲಿ ಹಣವೋ ಹಣ ಹರಿದುಬರಲಿದೆ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಬೆಂಗಳೂರು: ಈ ಬಾರಿಯ ದೀಪಾವಳಿಗೆ ದಿನಗಣನೆ ಆರಂಭವಾಗಿದೆ. ಈ ಬಾರಿಯ ದೀಪಾವಳಿಯ ಸಂಗರ್ಭದಂದು ಹಲವು ಗ್ರಹಗಳ ಗೋಚರ ನೆರವೇರಲಿದ್ದು, ಈ ಗೋಚರಗಳು ಶುಭ ಹಾಗೂ ಅಶುಭ ಯೋಗಗಳನ್ನು ನಿರ್ಮಿಸಲಿವೆ. ಈ ಗ್ರಹ ಗೋಚರಗಳಲ್ಲಿ ಗ್ರಹಗಳ ಸೇನಾಪತಿ ಮಂಗಳನ ಗೋಚರ ಕೂಡ ಶಾಮಿಲಾಗಿದೆ. ನವೆಂಬರ್ 16, 2023 ರಂದು ಮಂಗಳನ ವೃಶ್ಚಿಕ ರಾಶಿ ಗೋಚರ ನೆರವೇರಲಿದ್ದು,ಇದರಿಂದ ರುಚಕ ಮಹಾಪುರುಷ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಈ ಯೋಗವನ್ನು ಅತ್ಯಂತ ಶುಭಯೋಗಗಳ ಪಟ್ಟಿಗೆ ಸೇರಿಸಲಾಗಿದೆ. ಈ ರಾಜಯೋಗದ ನಿರ್ಮಾಣದಿಂದ ಕೆಲ ರಾಶಿಗಳ ಜನರಿಗೆ ಆಕಸ್ಮಿಕ ಧನಲಾಭ ಉಂಟಾಗುವ ಸಾಧ್ಯತೆ ಇದ್ದು, ಅವರಿಗೆ ಭಾಗ್ಯೋದಯ ಯೋಗ ಕೂಡ ರೂಪುಗೊಳ್ಳುತ್ತಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳ ಬಗ್ಗೆ ತಿಳಿದುಕೊಳ್ಳೋಣ

2 /5

ಮಕರ ರಾಶಿ: ರುಚಕ ಮಹಾಪುರುಷ ರಾಜಯೋಗದ ಸಂದರ್ಭದಲ್ಲಿ ಮಂಗಳ ನಿಮ್ಮ ಗೋಚರ ಜಾತಕದ ಆದಾಯ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ, ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳವನ್ನು ನೀವು ಗಮನಿಸುವಿರಿ. ಆದಾಯದ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ. ಹಳೆ ಹೂಡಿಕೆಗಳಿಂದ ನಿಮಗೆ ಲಾಭ ಸಿಗುವ ಎಲ್ಲಾ ಸಂಕೇತಗಳು ಗೋಚರಿಸುತ್ತಿವೆ. ಪಿತ್ರಾರ್ಜಿತ ಸಂಪತ್ತಿನ ಲಾಭ ಕೂಡ ನಿಮಗೆ ಸಿಗಲಿದೆ. ವೃತ್ತಿ ಜೀವನದಲ್ಲಿ ನಿಮಗೆ ಕೆಲ ಚಿನ್ನದಂತಹ ಅವಕಾಶಗಳು ಕೂಡ ಒದಗಿ ಬರಲಿವೆ. ಸಾಲದ ರೂಪದಲ್ಲಿ ನೀವು ಬೇರೆಯವರಿಗೆ ನೀಡಿದ್ದ ಹಣ ನಿಮ್ಮ ಬಳಿ ಮರಳಲಿದೆ. ಆಮದು-ರಫ್ತು ವ್ಯವಹಾರಗಳಲ್ಲಿ ತೊಡಗಿರುವವರಿಗೆ ಈ ಅವಧಿಯಲ್ಲಿ ಅಪಾರ ಧನಲಾಭ ಪ್ರಾಪ್ತಿಯಾಗಲಿದೆ. 

3 /5

ಸಿಂಹ ರಾಶಿ: ರುಚಕ ಮಹಾಪುರುಷ ರಾಜಯೋಗದ ಸಂಗರ್ಭದಲ್ಲಿ ಮಂಗಳ ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನೀವು ವಾಹನ-ಆಸ್ತಿಪಾಸ್ತಿ ಖರೀದಿಗೆ ಮನಸ್ಸನ್ನು ಮಾಡುವಿರಿ. ಈ ಅವಧಿಯಲ್ಲಿ ನಿಮಗೆ ಎಲ್ಲಾ ರೀತಿಯ ಭೌತಿಕ ಸುಖಗಳು ಪ್ರಾಪ್ತಿಯಾಗಲಿವೆ. ವೃತ್ತಿ-ವ್ಯಾಪಾರದಲ್ಲಿ ನಿಮಗೆ ಕೆಲ ಸುವರ್ಣಾವಕಾಶಗಳು ಒದಗಿ ಬರಲಿದ್ದು, ಅವು ನಿಮಗೆ ಶುಭ ಫಲಗಳನ್ನು ನೀಡಲಿವೆ. ಆರೋಗ್ಯ ಸುಧಾರಿಸಲಿದೆ. ಮಂಗಳ ನಿಮ್ಮ ಗೋಚರ ಜಾತಕಕ್ಕೆ ನವಮಾಂಶನಾಗಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಅಪಾರ ಬೆಂಬಲ ದೊರೆತು ನಿಮ್ಮ ಎಲ್ಲಾ ಯೋಜನೆಗಳು ಫಲಿಸಲಿವೆ. ಈ ಅವಧಿಯಲ್ಲಿ ನೀವು ಕೈಗೊಳ್ಳುವ ಯಾತ್ರೆಗಳು ನಿಮಗೆ ಶುಭ ಫಲಗಳನ್ನು ನೀಡಲಿವೆ. 

4 /5

ತುಲಾ ರಾಶಿ: ಈ ಅವಧಿಯಲ್ಲಿ ಮಂಗಳ ನಿಮ್ಮ ಗೋಚರ ಜಾತಕದ ಧನಭಾವದಲ್ಲಿ ಸಂಚರಿಸಲಿರುವ ಕಾರಣ ರುಚಕ ಮಹಾಪುರುಷ ರಾಜಯೋಗ ನಿಮ್ಮ ಪಾಲಿಗೆ ಅತ್ಯಂತ ಮಂಗಳಕರ ಸಾಬೀತಾಗಲಿದೆ. ಈ ಸಮಯದಲ್ಲಿ ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಭಾರಿ ಸುಧಾರಣೆ ಕಂಡುಬರಲಿದೆ. ಕಾಲಕಾಲಕ್ಕೆ ನಿಮಗೆ ಆಕಸ್ಮಿಕ ಧನಲಾಭ ಕೂಡ ಪ್ರಾಪ್ತಿಯಾಗಲಿದೆ. ಜೀವನೋಪಾಯದ ಸೌಕರ್ಯಗಳು ವೃದ್ಧಿಯಾಗಲಿದ್ದು, ಸ್ಥಾನಮಾನ-ಪ್ರತಿಷ್ಠೆಯಲ್ಲಿಯೂ ಕೂಡ ಹೆಚ್ಚಳವಾಗಲಿದೆ. ಆರ್ಥಿಕ ವಿಷಯಗಳಲ್ಲಿ ನಿಮಗೆ ಲಾಭದ ಎಲ್ಲಾ ಸಂಕೇತಗಳಿವೆ. ಮಂಗಳ ನಿಮ್ಮ ಜಾತಕದ ಸಪ್ತಮ ಭಾವಕ್ಕೆ ಅಧಿಪತಿಯಾಗಿದ್ದಾನೆ. ಹೀಗಾಗಿ ನಿಮ್ಮ ವೈವಾಹಿಕ ಜೀವನ ಸಾಕಷ್ಟು ಖುಷಿಗಳಿಂದ ಕೂಡಿರಲಿದೆ. ಬಾಳಸಂಗಾತಿಯ ಬೆಂಬಲ ನಿಮಗೆ ಪ್ರಾಪ್ತಿಯಾಗಲಿದೆ. ಪಾಟ್ನರ್ಶಿಪ್ ವ್ಯವಹಾರಗಳಲ್ಲಿ ನಿಮಗೆ ಲಾಭ ಸಿಗಲಿದೆ.

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)