ಸಿಎಂ ಕುಮಾರಸ್ವಾಮಿ ರಾಜೀನಾಮೆಗೆ ಶೋಭಾ ಕರಂದ್ಲಾಜೆ ಆಗ್ರಹ

ಸಿಎಂ ಕುಮಾರಸ್ವಾಮಿ ಅವರಿಗೆ ಸಿಎಂ ಸ್ಥಾನದಲ್ಲಿ ಮುಂದುವರೆಯುವ ನೈತಿಕ ಹಕ್ಕಿಲ್ಲ. ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

Last Updated : Jul 8, 2019, 02:50 PM IST
ಸಿಎಂ ಕುಮಾರಸ್ವಾಮಿ ರಾಜೀನಾಮೆಗೆ ಶೋಭಾ ಕರಂದ್ಲಾಜೆ ಆಗ್ರಹ title=
file photo

ಬೆಂಗಳೂರು: ಮೈತ್ರಿ ಸರ್ಕಾರಕ್ಕೆ ಬಹುಮತ ಇಲ್ಲದ ಕಾರಣ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರದ ಶಾಸಕರು ರಾಜೀನಾಮೆ ನೀಡಿರುವ ಕಾರಣ ಸರ್ಕಾರದ ಶಾಸಕರ ಬಲ ಕುಸಿದಿದೆ. ಹೀಗಾಗಿ ಸಿಎಂ ಕುಮಾರಸ್ವಾಮಿ ಅವರಿಗೆ ಸಿಎಂ ಸ್ಥಾನದಲ್ಲಿ ಮುಂದುವರೆಯುವ ನೈತಿಕ ಹಕ್ಕಿಲ್ಲ. ಕೂಡಲೇ ರಾಜೀನಾಮೆ ನೀಡಿ ಮುಂದಿನ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. 

ಇದೇ ವೇಳೆ ಮಹೇಶ್ ಹಾಗೂ ನಾಗೇಶ್ ಅವರು ಬಿಜೆಪಿಗೆ ಬೆಮಬಲ್ ಸೂಚಿಸಿರುವುದನ್ನು ಸ್ವಾಗತಿಸಿರುವ ಶೋಭಾ ಕರಂದ್ಲಾಜೆ, ನಾವಾಗಿಯೇ ಅವರನ್ನು ಸಂಪರ್ಕಿಸುವುದಿಲ್ಲ ಎಂದು ಹೇಳಿದ್ದಾರೆ.

Trending News