ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಪಿ.ಚಿದಂಬರಂರನ್ನು ಮುಖ್ಯ ಆರೋಪಿಯನ್ನಾಗಿ ಮಾಡಲು ಸಿಬಿಐ ಸಿದ್ಧತೆ!

ಸಿಬಿಐ ಎಫ್‌ಐಪಿಬಿಗೆ ಸಂಬಂಧಿಸಿದ ಐದು ಅಧಿಕಾರಿಗಳನ್ನು ಸಹ ಆರೋಪಿಗಳನ್ನಾಗಿ ಮಾಡುವ ಸಾಧ್ಯತೆ ಇದೆ.

Last Updated : Aug 27, 2019, 06:12 PM IST
ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಪಿ.ಚಿದಂಬರಂರನ್ನು ಮುಖ್ಯ ಆರೋಪಿಯನ್ನಾಗಿ ಮಾಡಲು ಸಿಬಿಐ ಸಿದ್ಧತೆ!  title=
File Image

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಮಾಜಿ ಹಣಕಾಸು ಸಚಿವ ಮತ್ತು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಅವರನ್ನು ಮುಖ್ಯ ಆರೋಪಿಯನ್ನಾಗಿ ಮಾಡಲು ತನಿಖಾ ಸಂಸ್ಥೆ ಸಜ್ಜಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ. ಇದರೊಂದಿಗೆ ಎಫ್‌ಐಪಿಬಿಗೆ ಸಂಬಂಧಿಸಿದ ಐವರು ಅಧಿಕಾರಿಗಳನ್ನು ಸಹ ಆರೋಪಿಗಳನ್ನಾಗಿ ಮಾಡುವ ಸಾಧ್ಯತೆ ಇದೇ ಎನ್ನಲಾಗಿದೆ.

ಐದು ಅಧಿಕಾರಿಗಳಿಗೆ ಸಂಬಂಧಿಸಿದಂತೆ, ಚಿದಂಬರಂ ಅವರ ವಿಚಾರಣೆಯಲ್ಲಿ ಈ ಅಧಿಕಾರಿಗಳ ಪಾತ್ರ ಬೆಳಕಿಗೆ ಬಂದಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ. ಈ ಪ್ರಕರಣದಲ್ಲಿ ಎಲ್ಲಾ ಐವರು ಅಧಿಕಾರಿಗಳು ಪಿತೂರಿಯಲ್ಲಿ ಭಾಗಿಯಾಗಿದ್ದು, ಐವರು ಅಧಿಕಾರಿಗಳು ನಿಯಮಗಳನ್ನು ಪಾಲಿಸಿಲ್ಲ ಎಂದು ಹೇಳಲಾಗಿದೆ.

ಆರೋಪಿ ಸ್ಥಾನದಲ್ಲಿ ನಿಲ್ಲಬಹುದಾದ ಅಧಿಕಾರಿಗಳ ಹೆಸರುಗಳು - ಹೆಚ್ಚುವರಿ ಕಾರ್ಯದರ್ಶಿ ಸಿಂಧುಶ್ರೀ ಖುಲ್ಲರ್, ಜಂಟಿ ಕಾರ್ಯದರ್ಶಿ ಅನುಪ್ ಕೆ. ಪೂಜಾರಿ, ನಿರ್ದೇಶಕ ಪ್ರಬೋಧ್ ಸಕ್ಸೇನಾ, ಅಂಡರ್ ಸೆಕ್ರೆಟರಿ ರವೀಂದ್ರ ಪ್ರಸಾದ್ ಮತ್ತು ಸೆಕ್ಷನ್ ಅಧಿಕಾರಿ ಅಜಿತ್ ಕುಮಾರ್ ಡುಂಗ್.

ಐಎನ್‌ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಮನಿ ಲಾಂಡರಿಂಗ್ ಪ್ರಕರಣಗಳ ಆರೋಪ ಎದುರಿಸುತ್ತಿರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ಬುಧವಾರ ಬಂಧಿಸಲಾಗಿದೆ.

ಮಾಜಿ ಹಣಕಾಸು ಸಚಿವ ಮತ್ತು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಅವರ ಸಿಬಿಐ (ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್) ಬಂಧನವನ್ನು ಆಗಸ್ಟ್ 30 ರವರೆಗೆ ವಿಸ್ತರಿಸಲಾಗಿದೆ. ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಡಿಐ ನ್ಯಾಯಾಲಯ ಸೋಮವಾರ ಚಿದಂಬರಂ ಅವರ ನ್ಯಾಯಾಂಗ ಬಂಧನವನ್ನು ಆಗಸ್ಟ್ 30 ರವರೆಗೆ ವಿಸ್ತರಿಸಿದೆ.

ಸಂಸದರು ಮತ್ತು ಶಾಸಕರಿಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ರೂಸ್ ಅವೆನ್ಯಾ ನ್ಯಾಯಾಲಯ ಸಂಕೀರ್ಣದಲ್ಲಿರುವ ಸಿಬಿಐ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ಅಜಯ್ ಕುಮಾರ್ ಕುಹಾರ್ ಅವರು ಚಿದಂಬರಂ ಅವರ ಸಿಬಿಐ ಬಂಧನವನ್ನು ವಿಸ್ತರಿಸಲು ಆದೇಶಿಸಿದರು. ಆದೇಶದ ಮೊದಲು, ವಿಶೇಷ ಸಿಬಿಐ ನ್ಯಾಯಾಧೀಶರು ತಮ್ಮ ನಿರ್ಧಾರವನ್ನು ಸ್ವಲ್ಪ ಸಮಯದವರೆಗೆ ಕಾಯ್ದಿರಿಸಿದ್ದರು. ಇದಕ್ಕೂ ಮೊದಲು ಚಿದಂಬರಂ ಅವರನ್ನು ಗುರುವಾರ ಸಿಬಿಐ ವಶಕ್ಕೆ ಕಳುಹಿಸಲಾಗಿತ್ತು.

Trending News