ಶ್ರೀನಗರದ ಪರಿಂಪೋರಾದಲ್ಲಿ ಉಗ್ರರಿಂದ 65 ವರ್ಷದ ವ್ಯಕ್ತಿ ಕೊಲೆ

ಭದ್ರತಾ ಪಡೆಗಳು ಭಯೋತ್ಪಾದಕರನ್ನು ಬಂಧಿಸಲು ಶೋಧ ಕಾರ್ಯ ಮುಂದುವರೆಸಿದ್ದಾರೆ.

Last Updated : Aug 30, 2019, 08:04 AM IST
ಶ್ರೀನಗರದ ಪರಿಂಪೋರಾದಲ್ಲಿ ಉಗ್ರರಿಂದ 65 ವರ್ಷದ ವ್ಯಕ್ತಿ ಕೊಲೆ title=
Representational image

ಶ್ರೀನಗರ: ಶ್ರೀನಗರದ ಹೊರವಲಯದಲ್ಲಿರುವ ಪರಿಂಪೋರಾ ಪ್ರದೇಶದಲ್ಲಿ ಗುರುವಾರ ರಾತ್ರಿ ಕೆಲವು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು 65 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ.  ಮೃತ ವ್ಯಕ್ತಿ ಅಂಗಡಿ ಇಟ್ಟಿದ್ದರು, ಅವರು ಅಂಗಡಿಯಲ್ಲಿದ್ದಾಗ ಉಗ್ರರಿಂದ ಗುಂಡು ಹಾರಿಸಲ್ಪಟ್ಟಿದ್ದು ಗುಂಡೇಟಿಗೆ ಅಂಗಡಿಯವರು ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. 

ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಕಾಶ್ಮೀರ ಭೇಟಿ ನೀಡುವ ಒಂದು ದಿನ ಮುಂಚಿತವಾಗಿ 65 ವರ್ಷದ ವ್ಯಕ್ತಿಯ ಹತ್ಯೆ ಸಂಭವಿಸಿದೆ. ಇದಕ್ಕೂ ಮೊದಲು ಅನಂತ್‌ನಾಗ್ ಜಿಲ್ಲೆಯ ಬಿಜ್‌ಬೆಹರಾದಲ್ಲಿ ಟ್ರಕ್ ಚಾಲಕನನ್ನು ಗುರಿಯಾಗಿಸಿ ಕಲ್ಲು ತೂರಾಟ ನಡೆಸುತ್ತಿದ್ದ ಕಿಡಿಗೇಡಿಗಳು ಆತನನ್ನು ಕೊಂದಿದ್ದರು.

ಜಮ್ಮು-ಕಾಶ್ಮೀರ ಪೊಲೀಸರ ಪ್ರಕಾರ, ನಾಗರಿಕನನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದಾಗ್ಯೂ, ಗುಂಡೇಟು ಬಿದ್ದಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು ಸಾವನ್ನಪ್ಪಿದರು ಎಂದು ಹೇಳಲಾಗಿದೆ.

ಕಾಶ್ಮೀರ ವಲಯ ಪೊಲೀಸರ ಹಿಂದಿನ ಟ್ವೀಟ್‌ನಲ್ಲಿ, ''ಸ್ಥಳೀಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಶ್ರೀನಗರದ ಪರಿಂಪೋರಾ ವ್ಯಾಪ್ತಿಯಲ್ಲಿ ನಾಗರಿಕರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ'' ಎಂದು ಹೇಳಲಾಗಿತ್ತು. ಪೊಲೀಸ್ ತಂಡ ತಕ್ಷಣ ಸ್ಥಳಕ್ಕೆ ತಲುಪಿ, ಇಡೀ ಪ್ರದೇಶವನ್ನು ಸುತ್ತುವರಿಯಲಾಯಿತು. ಭದ್ರತಾ ಪಡೆಗಳು ಭಯೋತ್ಪಾದಕರನ್ನು ಬಂಧಿಸಲು ಶೋಧ ಕಾರ್ಯ ಮುಂದುವರೆಸಿದ್ದಾರೆ.

ಕಾಶ್ಮೀರದ ಕೆಲವು ಭಾಗಗಳಲ್ಲಿ ನಿರ್ಬಂಧಗಳು ಮುಂದುವರಿದಿದ್ದು, ಸ್ಥಳೀಯ ಕಾಶ್ಮೀರಿಗಳಲ್ಲಿ ವಿಶ್ವಾಸ ಮೂಡಿಸಲು ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು ಸೇರಿದಂತೆ ಹಲವಾರು ಕ್ರಮಗಳನ್ನು ಘೋಷಿಸಿದ್ದರು.

"ಸ್ಥಳೀಯ ಸರ್ಕಾರವು ಪರಿಸ್ಥಿತಿಯನ್ನು ಪರಿಪಕ್ವತೆ ಮತ್ತು ಸಂಯಮದಿಂದ ನಿಭಾಯಿಸುತ್ತಿದೆ, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಒಂದೇ ಒಂದು ಲೈವ್ ಬುಲೆಟ್ ಅನ್ನು ಹಾರಿಸಲಾಗಿಲ್ಲ. ಸಾಧ್ಯವಾದಷ್ಟು ಬೇಗ ಸಹಜ ಸ್ಥಿತಿ ಮರಳಲು ಆಡಳಿತವು ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳುತ್ತಿದೆ" ಎಂದು ಎಂಇಎ ವಕ್ತಾರ ರವೀಶ್ ಕುಮಾರ್ ಗುರುವಾರ ಹೇಳಿದ್ದಾರೆ.

ಆಗಸ್ಟ್ 5 ರಂದು ಕೇಂದ್ರ ಸರ್ಕಾರ 370 ನೇ ವಿಧಿಯನ್ನು ರದ್ದುಪಡಿಸಿದಾಗ ಪರಿಸ್ಥಿತಿಯನ್ನು ಉಲ್ಲೇಖಿಸಿದ ಕುಮಾರ್, ಪ್ರದೇಶದಲ್ಲಿ "ಕ್ರಮೇಣ ಆದರೆ ಸಕಾರಾತ್ಮಕ ಸುಧಾರಣೆ" ಕಂಡುಬಂದಿದೆ ಎಂದು ತಿಳಿಸಿದರು.

Trending News