ಶಿವಸೇನೆಯ ಮಹತ್ವದ ಸಭೆ ಇಂದು; ಆದಿತ್ಯ ಠಾಕ್ರೆ ಶಾಸಕಾಂಗ ಪಕ್ಷದ ನಾಯಕರಾಗುವ ಸಾಧ್ಯತೆ!

ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಸರ್ಕಾರ ರಚನೆಗೂ ಮುನ್ನ ಪಕ್ಷದ ಹಿರಿಯ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ.

Last Updated : Oct 26, 2019, 12:00 PM IST
ಶಿವಸೇನೆಯ ಮಹತ್ವದ ಸಭೆ ಇಂದು; ಆದಿತ್ಯ ಠಾಕ್ರೆ ಶಾಸಕಾಂಗ ಪಕ್ಷದ ನಾಯಕರಾಗುವ ಸಾಧ್ಯತೆ! title=
Photo Courtesy: @ShivSena

ಮುಂಬೈ: 50-50 ಸೂತ್ರಕ್ಕೆ ಕೇಸರಿ ಪಕ್ಷ ಸಮ್ಮತಿಸಿದಾಗ ಮಾತ್ರ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸ್ಪಷ್ಟವಾಗಿ ಹೇಳಿರುವ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ತಮ್ಮ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿ ಈ ಬಗ್ಗೆ ಚರ್ಚಿಸಲಿದ್ದಾರೆ. ಈ ಸಭೆಯಲ್ಲಿ ಆದಿತ್ಯ ಠಾಕ್ರೆ ಅವರನ್ನು ಶಿವಸೇನೆ ತನ್ನ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.

ಅದೇ ಸಮಯದಲ್ಲಿ, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಸರ್ಕಾರ ರಚನೆಗೆ ಸಂಬಂಧಿಸಿದಂತೆ ಪಕ್ಷದ ಹಿರಿಯ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ. ಈ ಸಭೆ ಅವರ ಮಾತೋಶ್ರೀ ನಿವಾಸದಲ್ಲಿ ನಡೆಯಲಿದೆ. ಸಭೆಯಲ್ಲಿ 50-50 ಸೂತ್ರದ ಬಗ್ಗೆ ಚರ್ಚಿಸಲಾಗುವುದು. ಮೂಲಗಳ ಪ್ರಕಾರ, ಬಿಜೆಪಿಯೊಂದಿಗೆ ಮಾತನಾಡಲು ಪಕ್ಷದ ಇಬ್ಬರು ಹಿರಿಯ ಮುಖಂಡರನ್ನು ಶಿವಸೇನೆ ಪರವಾಗಿ ನೇಮಿಸಲಾಗುವುದು ಎನ್ನಲಾಗಿದೆ.

ಶಿವಸೇನೆ ನೇತೃತ್ವದ ಸರ್ಕಾರವನ್ನು ಬೆಂಬಲಿಸಬಹುದೆಂದು ಕಾಂಗ್ರೆಸ್ ಸೂಚಿಸಿದಾಗ ಶುಕ್ರವಾರ ಮಹಾರಾಷ್ಟ್ರ ರಾಜಕೀಯದಲ್ಲಿ ಕೋಲಾಹಲ ಉಂಟಾಯಿತು. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಬಾಲಾಸಾಹೇಬ್ ಥೋರತ್ ಮಾಧ್ಯಮಗಳಿಗೆ ಮಾತನಾಡುತ್ತಾ, "ನಾವು ಈವರೆಗೆ ಶಿವಸೇನೆಯೊಂದಿಗೆ ಯಾವುದೇ ಮಾತುಕತೆ ನಡೆಸಿಲ್ಲ. ಆದಾಗ್ಯೂ, ಒಂದು ವೇಳೆ ಅವರು ಪ್ರಸ್ತಾಪಿಸಿದರೆ, ನಾವು ಈ ಬಗ್ಗೆ ತೀರ್ಮಾನಿಸಲು ಪಕ್ಷದ ಹೈಕಮಾಂಡ್ ಸಂಪರ್ಕಿಸುತ್ತೇವೆ" ಎಂದು ಹೇಳಿದರು.

ಇದಕ್ಕೂ ಒಂದು ದಿನ ಮೊದಲು, ಶಿವಸೇನೆಯ ಮಿತ್ರ ಮತ್ತು ಆಡಳಿತರೂಢ ಪಕ್ಷ ಬಿಜೆಪಿಯನ್ನು ಅಧಿಕಾರದಿಂದ ದೂರವಿರಿಸಲು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಹಿರಿಯ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ಚಗನ್ ಭುಜ್ಬಾಲ್ ಮತ್ತು ಹಿರಿಯ ಕಾಂಗ್ರೆಸ್ ಸಂಸದ ಹುಸೇನ್ ದಾಲ್ವಿ ಅವರು ಇದೇ ರೀತಿಯ ಪ್ರಸ್ತಾಪವನ್ನು ಮಾಡಿದ್ದರು ಎಂಬ ಬಗ್ಗೆಯೂ ಸುದ್ದಿ ಇದೆ.

ವಿಶೇಷವೆಂದರೆ, ಕಾಂಗ್ರೆಸ್, ಎನ್‌ಸಿಪಿ ಮತ್ತು ಅದರ ಇತರ ಮಿತ್ರ ರಾಷ್ಟ್ರಗಳು 288 ಸದಸ್ಯರ ಮಹಾರಾಷ್ಟ್ರ ವಿಧಾನಸಭೆಯಲ್ಲಿ 117 ಸ್ಥಾನಗಳನ್ನು ಪಡೆದಿವೆ. ಬಿಜೆಪಿ-ಶಿವಸೇನೆ ಜಂಟಿಯಾಗಿ 161 ಸ್ಥಾನಗಳನ್ನು ಗೆದ್ದಿದೆ.

ಆದರೆ, ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಗುರುವಾರ ಇಂತಹ ಊಹಾಪೋಹಗಳನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ ಮತ್ತು ಮುಂದಿನ ಸರ್ಕಾರವನ್ನು ಬಿಜೆಪಿ ಮತ್ತು ಅದರ ಮಿತ್ರ ರಾಷ್ಟ್ರಗಳು ರಚಿಸಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.
 

Trending News