JNU violence ಬಗ್ಗೆ ಇರ್ಫಾನ್ ಪಠಾಣ್ ಹೇಳಿದ್ದೇನು?

ಜೆಎನ್‌ಯು ಹಿಂಸಾಚಾರದಂತಹ ಘಟನೆಗಳು ದೇಶಕ್ಕೆ ದೊಡ್ಡ ಹಾನಿ ಉಂಟುಮಾಡುತ್ತವೆ ಎಂದು ಇರ್ಫಾನ್ ಪಠಾಣ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Last Updated : Jan 7, 2020, 02:12 PM IST
JNU violence ಬಗ್ಗೆ ಇರ್ಫಾನ್ ಪಠಾಣ್ ಹೇಳಿದ್ದೇನು? title=
File Image

ನವದೆಹಲಿ: ಇತ್ತೀಚೆಗೆ ಕ್ರಿಕೆಟ್‌ನಿಂದ ನಿವೃತ್ತರಾದ ಟೀಮ್ ಇಂಡಿಯಾದ ಮಾಜಿ ವೇಗಿ ಇರ್ಫಾನ್ ಪಠಾಣ್ (Irfan Pathan) ಜೆಎನ್‌ಯುನಲ್ಲಿ ನಡೆದ ಹಿಂಸಾಚಾರವನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ಹಿಂಸಾಚಾರವನ್ನು ಎಲ್ಲೆಡೆ ಟೀಕಿಸಲಾಗುತ್ತಿದೆ. ಈ ಹಿಂಸಾಚಾರದಲ್ಲಿ 25 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

"ಜೆಎನ್‌ಯುನಲ್ಲಿ ಭಾನುವಾರ ನಡೆದ ಘಟನೆ ಮರುಕಳಿಸುವ ಘಟನೆಯಲ್ಲ. ವಿಶ್ವವಿದ್ಯಾಲಯದ ಕ್ಯಾಂಪಸ್‌ನೊಳಗೆ ಬಂದ ಗುಂಪೊಂದು ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದೆ. ಇವು ದೇಶದ ಚಿತ್ರಣಕ್ಕೆ ಇದು ಒಳ್ಳೆಯದಲ್ಲ" ಎಂದು ಪಠಾಣ್ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇಂತಹ ಘಟನೆಗಳು ದೇಶದ ಚಿತ್ರಣವನ್ನು ಹಾಳು ಮಾಡುತ್ತವೆ ಎಂದು ಪಠಾಣ್ ಹೇಳಿದ್ದಾರೆ. ಇರ್ಫಾನ್ ಪಠಾಣ್ ಅವರಲ್ಲದೆ, ಗೌತಮ್ ಗಂಭೀರ್ ಆಜ್ವಾಲಾ ಗುಟ್ಟಾ ಕೂಡ ಈ ದಾಳಿಯನ್ನು ಖಂಡಿಸಿದ್ದಾರೆ. ಈ ಹಿಂಸಾಚಾರದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗಂಭೀರ್ ಒತ್ತಾಯಿಸಿದ್ದಾರೆ. ಅದೇ ಸಮಯದಲ್ಲಿ, ಬ್ಯಾಡ್ಮಿಂಟನ್ ಆಟಗಾರ ಜ್ವಾಲಾ ಗುಟ್ಟಾ ಕೂಡ ಈ ದಾಳಿಯನ್ನು ಖಂಡಿಸಿದ್ದಾರೆ.

ಭಾನುವಾರ, ಜೆಎನ್‌ಯು ಕ್ಯಾಂಪಸ್‌ನಲ್ಲಿ, ಮುಖವಾಡ ಧರಿಸಿ ಬಂದ ವ್ಯಕ್ತಿಗಳು ಹಾಕಿ ಬ್ಯಾಟ್ ಮತ್ತು ಕಬ್ಬಿಣದ ಸರಳುಗಳನ್ನು ಹಿಡಿದು ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರ ಮೇಲೆ ಹಲ್ಲೆ ನಡೆಸಿದರು. ಮುಖವಾಡ ಧರಿಸಿ ಬಂದಿದ್ದ ಕೆಲ ಜನರು ಜವಾಹರಲಾಲ್ ನೆಹರೂ ಯೂನಿವರ್ಸಿಟಿಯ ಕ್ಯಾಂಪಸ್‌ನಲ್ಲಿ ಸುಮಾರು 2 ಗಂಟೆಗಳ ಕಾಲ ಗದ್ದಲ ಸೃಷ್ಟಿಸಿದರು. ಹಿಂಸಾಚಾರದಲ್ಲಿ 25 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ 19 ವಿದ್ಯಾರ್ಥಿಗಳು ಮತ್ತು 1 ಶಿಕ್ಷಕರು ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಳಿಯಲ್ಲಿ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಎಐಎಸ್‌ಐ ಘೋಷ್ ಕೂಡ ಗಾಯಗೊಂಡಿದ್ದಾರೆ.

ಜೆಎನ್‌ಯು ಆಡಳಿತ ಮತ್ತು ಮುಖಂಡರು ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದು, ಪೊಲೀಸರಿಂದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Trending News